ಬೆಳಗಾವಿ: ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ಬಾರದ ಕಾರಣದಿಂದ ಮಳೆಗಾವಿ ಮುಸ್ಲಿಂಮರು ಬೆಳಗಾವಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮುಂಗಾರು ಚರುಕುಗೊಂಡರೂ, ಉತ್ತರ ಕರ್ನಾಟಕ ಭಾಗದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ಬರಗಾಲದ ಭೀತಿ ಎದುರಾಗಿದೆ. ಅಲ್ಲದೆ ರೈತರು ಕಂಗಾಲಾಗಿದ್ದು, ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುವಂತಾಗಿದೆ. ಇದೀಗ ವಾಡಿಕೆಯಂತೆ ಮಳೆ ಬರಲಿ ಎಂದು ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.

ಬೆಳಗಾವಿಯ ಅಂಜುಮಾನ್ ಸಂಸ್ಥೆ ಬಳಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಧರ್ಮಗುರು ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥಿಸಲಾಗಿದೆ. ಪ್ರಾರ್ಥನೆ ವೇಳೆ ಸಾವಿರಾರು ಸಂಖ್ಯೆಲ್ಲಿ ಮುಸ್ಲಿಮರು ಪಾಲ್ಗೊಂಡಿದ್ದರು.