2022ರ ನಾಡಹಬ್ಬ ದಸರಾ ಉದ್ಘಾಟಕರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಯ್ಕೆ ಮಾಡಬೇಕೆಂದು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ರಾಜ್ಯ ಸರ್ಕಾರವನ್ನ ಮನವಿ ಮಾಡಿದ್ದಾರೆ.
ಅವರು ಪ್ರಧಾನಿ, ಮುಖ್ಯಮಂತ್ರಿ, ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಅವರಿಗಿದೆ. ರಾಜಕೀಯ ಸಂಧ್ಯಾಕಾಲದಲ್ಲಿ ಅವರಿಗೆ ನಾಡಹಬ್ಬಕ್ಕೆ ಚಾಲನೆ ನೀಡುವ ಗೌರವವನ್ನ ದೊರಕಿಸಿಕೊಡಬೇಕು ಎಂದು ರಾಜ್ಯ ಸರ್ಕಾರವನ್ನ ಒತ್ತಾಯಿಸಿದ್ದಾರೆ.