ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮೈಸೂರು ಜಿಲ್ಲೆಯಾದ್ಯಂತ ಸುಮಾರು 1,45,908 ಮತದಾರರ ಹೆಸರು ನಾಪತ್ತೆಯಾಗಿರುವ ಕುರಿತು ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾಧಿಕಾರಿ ಡಾ || ಕೆ.ವಿ. ರಾಜೇಂದ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡರ ನಿಯೋಗ ನನ್ನನ್ನು ಭೇಟಿ ಮಾಡಿತ್ತು ಅವರಿಗೆ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗಿರುವ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಖಾಸಗಿ ಕಂಪನಿಗೆ ಕೊಟ್ಟು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಲ್ಲ ಸರ್ಕಾರದ ಸಿಬ್ಬಂದಿಗಳೇ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗಿಯಾಗಿದ್ದಾರೆ.
ಒಂದೇ ಜಿಲ್ಲೆಯಲ್ಲಿ ಎರಡು ಕಡೆ ಪಟ್ಟಿಯಲ್ಲಿ ಹೆಸರಿದ್ದರೇ ಅಂತಹವರ ಹೆಸರನ್ನು ಕೈಬಿಟ್ಟಿದ್ದೇವೆ ಬೂತ್ ಲೆವಲ್ ಅಧಿಕಾರಿಗಳು ತಪ್ಪಾಗಿ ಕೆಲಸ ಮಾಡಿದ್ದರೆ ನಮಗೆ ಮಾಹಿತಿ ನೀಡುವಂತೆ ತಿಳಿಸಿದ್ದೇವೆ. ಎಸ್ಓಪಿ ಪ್ರಕಾರವೇ ಎರಡು ಕಡೆ ಇದ್ದವರ ಹೆಸರನ್ನು ಒಂದು ಕಡೆ ಉಳಿಸಿ, ಮತ್ತೊಂದು ಕಡೆ ಡಿಲೀಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈಗಲೂ ಬಿಟ್ಟಿರುವವರ ಹೆಸರನ್ನು ಸೇರಿಸಬಹುದು ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಲ್ಲ ಆಧಾರ್ ಬದಲಾಗಿ ಬೇರೆ ಹಲವಾರು ರೀತಿಯ ದಾಖಲೆಗಳನ್ನು ಕೊಡಬಹುದು ಎಂದು ಹೇಳಿದ್ದಾರೆ.
ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ಹೇಳುತ್ತೇನೆ ಮತದಾರರ ಪಟ್ಟಿಗೆ ಹೆಸರು ಸೇರಿಸುವಾಗಲೂ ಆಧಾರ್ ಲಿಂಕ್ ಕಡ್ಡಾಯವಲ್ಲ. ನಮ್ಮ ಜಿಲ್ಲೆಗೆ ಹೊಸ ಇವಿಎಂ ಯಂತ್ರಗಳು ಬಂದಿವೆ ಎಲ್ಲರೂ ಹೋಗಿ ಅದನ್ನು ಪರೀಕ್ಷೆ ಮಾಡಬಹುದು ಎಂದು ಕಾಂಗ್ರೆಸ್ ನಿಯೋಗ ದೂರು ಸಲ್ಲಿಕೆ ಬಳಿಕೆ ತಿಳಿಸಿದ್ದಾರೆ.