ಮೈಸೂರು: ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬರುತ್ತದೆ. ಕಪಾಲಿ ಬೆಟ್ಟವನ್ನು ಯೇಸು ಬೆಟ್ಟ ಮಾಡುತ್ತಾರೆ. ಆ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆ ಎಂದು ತಮ್ಮ ತಾಲಿಬಾನ್ ಹೇಳಿಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಹೇಳಿಕೆ ನೀಡಿದ್ದರು.
ಈ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, “ಹೌದು, ನಾನು ಕಾಂಗ್ರೆಸ್ ಕುರಿತು ಹೇಳಿಕೆ ನೀಡಿದ್ದೇನೆ. ಸಿದ್ದರಾಮಯ್ಯ ಕೆಎಫ್’ಡಿ, ಪಿಎಫ್’ಐ ಮೇಲಿನ ಕೇಸ್ ವಾಪಸ್ ತೆಗೆದುಕೊಂಡರು. ಇದರ ಪರಿಣಾಮವಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೊಲೆಯಾದವು. ಈ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಗೂ ಉಳಿದವರ ರಾಜಕಾರಣವನ್ನೆಲ್ಲಾ ಮುಗಿಸುವವರೆಗೂ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದರು.