ಪ್ರಥಮ ದರ್ಜೆ ಸಹಾಯಕರ ಪರೀಕ್ಷಾ ಅಕ್ರಮ ನಡೆಸುವ ಕುರಿತು ಆಡಿಯೋ ಸಂಭಾಷಣೆ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಸ್ ಐ ಅಶ್ವಿನಿ ಅನಂತಪುರ ಅಮಾನತು ಮಾಡಲಾಗಿದೆ.
ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅಮಾನತು ಆದೇಶ ಹೊರಡಿಸಿದ್ದಾರೆ.
ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಹಣದ ವ್ಯವಹಾರ ನಡೆಸಿರುವ ಬಗ್ಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರುವ ಆಡಿಯೋ ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಲಕ್ಷ್ಮಣ್ ಬಹಿರಂಗಗೊಳಿಸಿದ್ದರು.
ಪ್ರಕರಣವನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು, ವಿಚಾರಣೆ ಬಾಕಿ ಇರಿಸಿ, ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.