• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಮೈಸೂರು ಸ್ಯಾಂಡಲ್‌ ದೋಖಾ: ಸಚಿವರು ಸುಳ್ಳು ಆರೋಪ ಮಾಡಿ ಸಿಕ್ಕಿಬಿದ್ರಾ..?

Krishna Mani by Krishna Mani
January 17, 2024
in ಅಂಕಣ
0
ಮೈಸೂರು ಸ್ಯಾಂಡಲ್‌ ದೋಖಾ: ಸಚಿವರು ಸುಳ್ಳು ಆರೋಪ ಮಾಡಿ ಸಿಕ್ಕಿಬಿದ್ರಾ..?
Share on WhatsAppShare on FacebookShare on Telegram

ಕೃಷ್ಣಮಣಿ

ADVERTISEMENT

ಮೈಸೂರು ಸ್ಯಾಂಡಲ್ ಸೋಪ್ ಹೈದ್ರಾಬಾದ್‌ನಲ್ಲಿ ನಕಲಿಯಾಗಿ ಮಾರಾಟ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ರು. ಕೆಎಸ್‌ಡಿಎಲ್ ಎಂಡಿ ಪ್ರಶಾಂತ್‌ಗೆ ಎಂ.ಬಿ ಪಾಟೀಲ್‌ ಮಾಹಿತಿ‌ ನೀಡಿದ್ದರು. ತನಿಖೆ ಮಾಡಿದಾಗ ಹೈದರಾಬಾದ್‌ನಲ್ಲಿ ಜಾಲ ಇರುವುದು ಪತ್ತೆಯಾಗಿತ್ತು. ಈ ಸುಳಿವಿನ ಆಧಾರದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಕಾರ್ಖಾನೆಗೆ ಹೋಗಿ ಖರೀದಿ ಮಾಡುವ ಭರವಸೆ ಕೊಟ್ಟಿದ್ದರು. ಕಾರ್ಖಾನೆಯ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ದಾಳಿ ನಡೆಸಿ ಸೀಝ್ ಮಾಡಿದ್ದರು. ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರ ಮೇಲೆ FIR ದಾಖಲಾಗಿದೆ. ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬುವರ ಮೇಲೆ FIR ಆಗಿದೆ. ರಾಕೇಶ್ ಹಾಗೂ ಮಹಾವೀರ್ ಜೈನ್ ಇಬ್ಬರೂ ಬಿಜೆಪಿಯ ಸಕ್ರಿಯ ನಾಯಕರು ಎಂದಿದ್ದರು.

ಮಣಿಕಂಠ ರಾಥೋಡ್‌ಗೂ ಲಿಂಕ್‌ ಕೊಟ್ಟಿದ್ದ ಸಚಿವರು

ಮೈಸೂರು ಸ್ಯಾಂಡಲ್‌ ಸೋಪ್‌ ನಕಲಿ ಮಾಡಿದ್ದ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಶಾಸಕ ರಾಜಾಸಿಂಗ್ ಮತ್ತು ಕಲಬುರಗಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಠೋಡ್, ಬಿಜೆಪಿಯ ವಿಠಲ್ ನಾಯಕ್ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಅವರ ಜೊತೆಗಿನ ಫೋಟೋ ಕೂಡಾ ಇದೆ ಎಂದು ತೋರಿಸಿದ್ರು ಸಚಿವ ಪ್ರಿಯಾಂಕ್ ಖರ್ಗೆ. ಮೈಸೂರು ಸ್ಯಾಂಡಲ್ ಸೋಪ್ ರಾಜ್ಯದ ಹೆಮ್ಮೆಯ ಪ್ರೊಡೆಕ್ಟ್ ಆಗಿದೆ. ಕರ್ನಾಟಕದ ಆಸ್ತಿ ಮಾರಾಟಕ್ಕೆ ಬಿಜೆಪಿ ನಾಯಕರು ತಯಾರಾಗಿದ್ದಾರೆ ಅನಿಸುತ್ತದೆ. ಕೊರೊನಾ ಸಂದರ್ಭದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಈ ರೀತಿ ಕರ್ನಾಟಕದ ಹೆಮ್ಮೆಯ ಬ್ರಾಂಡ್‌ ನಕಲಿ ಮಾಡಿ ಹಣ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದರು.

‘ಹಣಕ್ಕಾಗಿ ಬಿಜೆಪಿಗರು ಏನು ಬೇಕಿದ್ರೂ ಮಾಡ್ತಾರೆ’

ಬಿಜೆಪಿ ನಾಯಕರ ಜೊತೆಗೆ ಇರುವ ಫೋಟೋ ಪ್ರದರ್ಶನ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಏಕೆ ಇಂತಹ ವಂಚನೆ ಮಾಡುವವರು ಬಿಜೆಪಿ ಜೊತೆಗೆ ಕಾಣಿಸಿಕೊಳ್ಳುತ್ತಾರೆ..? ಎಂದು ಪ್ರಶ್ನಿಸಿದ್ದರು. ಜೊತೆಗೆ ರಾಜ್ಯದ ಆಸ್ತಿ ಮಾರಾಟಕ್ಕೆ ಹೊರಟವರಿಗೆ ಯಾಕೆ ಟಿಕೆಟ್ ಕೊಡ್ತಿದ್ದೀರಿ..? ನಿಮ್ಮ ಎಲ್ಲಾ ವ್ಯವಹಾರ ಇಂತವರ ಬಳಿ ಇದೆ. ಅದೇ ಕಾರಣಕ್ಕಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಲ್ಲಿ ನಿಮ್ಮ ಪಾಲು ಇದೆ ಎಂದು ತೋರಿಸುತ್ತದೆ. ಕರ್ನಾಟಕದ ಗೌರವ ಅಡ ಇಟ್ಟು ಎಷ್ಟು ಹಣ ಗಳಿಸ್ತಿದ್ದೀರಾ..? ಮೈಸೂರು ಸ್ಯಾಂಡಲ್ ನಕಲಿ ಮಾರಾಟ ಜಾಲ ಬಿಜೆಪಿಗರೇ ನಡೆಸಲ್ಲ ಎಂಬುದಕ್ಕೆ ಏನು ಗ್ಯಾರಂಟಿ..? ಕರ್ನಾಟಕದ ಮರ್ಯಾದೆ ಮಾರಾಟಕ್ಕೆ ಇಟ್ಟವರ ಪರವಾಗಿ ರಾಮ ಭಕ್ತರು ಎಂದು ಬೀದಿಗೆ ಇಳಿಯುತ್ತೀರಾ..? ಬಿಜೆಪಿಗರು ಕನ್ನಡ ವಿರೋಧಿಗಳು. ಹಣಕ್ಕೋಸ್ಕರ ಯಾವುದೇ ಕೆಲಸಕ್ಕೂ ಹೇಸುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಉತ್ತರ ಕೊಡಬೇಕು ಎಂದು ಆಗ್ರಹ ಮಾಡಿದ್ದರು.

ಪರಿಶೀಲನೆ ಮಾಡದೆ ಸಿಕ್ಕಿಬಿದ್ರಾ ಮಿನಿಸ್ಟರ್‌ ಪ್ರಿಯಾಂಕ್‌..?

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಣಿಕಂಠ ರಾಠೋಡ್ ಆಕ್ರೋಶ ಹೊರ ಹಾಕಿದ್ದು, ಪ್ರಿಯಾಂಕ್‌ ಖರ್ಗೆಯನ್ನು ಪಾಗಲ್ ಪ್ರಿಯಾಂಕ್, ಮೆಂಟಲ್ ಪ್ರಿಯಾಂಕ್, ಪಪ್ಲು ಪ್ರಿಯಾಂಕ್, ಪಿಕೆ ಪ್ರಿಯಾಂಕ್ ಎಂದು ಬಾಯಿಗೆ ಬಂದಂತೆ ವಾಗ್ದಾಳಿ ಮಾಡಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಮಣಿಕಂಠ ರಾಠೋಡ್ ತೀವ್ರ ವಾಗ್ದಾಳಿ ಮಾಡಿದ್ದು, ನನ್ನ ಒಂದೂ ಕೂದಲು ಅಲುಗಾಡಿಸಲು ನಿನ್ನಿಂದ ಆಗಲ್ಲ. ನೀವು ಹೇಳ್ತಿರೋ ಆರೋಪಿ ಮಹಾವೀರ ಜೈನ್ ನನ್ನ ಸ್ನೇಹಿತ ಅಲ್ಲ. ನೀವು ಫೋಟೋ ತೋರಿಸುವ ಮಹಾವೀರ ಜೈನ್ ನನ್ನ ಸ್ನೇಹಿತನಲ್ಲ. ನನಗೆ ಮಹಾವೀರ್ ಜೈನ್‌ ಅನ್ನೋ ಸ್ನೇಹಿತ ಇದ್ದಾರೆ. ಆದರೆ ಅವರು ಈ ಪ್ರಕರಣದಲ್ಲಿ ಇಲ್ಲ.. ಮಹಾವೀರ್‌ ತಂದೆ ಹೆಸರನ್ನು ನೋಡಿದ್ರೆ ಗೊತ್ತಾಗುತ್ತೆ ಎಂದು ಆಧಾರ್‌ ಕಾರ್ಡ್‌ ಹಾಗು FIR ಪ್ರತಿಯಲ್ಲಿದ್ದ ಹೆಸರನ್ನು ಹೋಲಿಕೆ ಮಾಡಿ ತೋರಿಸಿದ್ದಾರೆ. ಒಟ್ಟಾರೆ ಮಣಿಕಂಠ ರಾಥೋಡ್‌ ಎದುರು ಪ್ರಿಯಾಂಕ್‌ ಖರ್ಗೆ ಜಾರಿ ಬಿದ್ದಂತಾಗಿದೆ.

Previous Post

ದೇವರನ್ನು ಆಟಿಕೆ ಎನ್ನುವ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುವುದು ಕಾಂಗ್ರೆಸ್ ಅವನತಿಗೆ ಅಡಿಗಲ್ಲು : ಆರ್.ಅಶೋಕ್

Next Post

ಕುಣಿಗಲ್ ಕುದುರೆ ಫಾರಂ ಜಾಗಕ್ಕೆ ಕೈಹಾಕಿದರೆ ಹೋರಾಟ: ಡಾ. ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025
Next Post
ಕುಣಿಗಲ್ ಕುದುರೆ ಫಾರಂ ಜಾಗಕ್ಕೆ ಕೈಹಾಕಿದರೆ ಹೋರಾಟ: ಡಾ. ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

ಕುಣಿಗಲ್ ಕುದುರೆ ಫಾರಂ ಜಾಗಕ್ಕೆ ಕೈಹಾಕಿದರೆ ಹೋರಾಟ: ಡಾ. ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada