ಮೈಸೂರು ಮಹಾರಾಣಿ ಮಹಿಳಾ ಕಾಲೇಜುನಲ್ಲಿ (Mysuru maharani college) ಕಟ್ಟಡ ಕುಸಿತವಾಗಿದ. ಕಟ್ಟಡ ಡಿಮಾಲಿಶ್ (Demolish) ಮಾಡುವ ಸಮಯದಲ್ಲಿ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಈ ವೇಳೆ 14 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ಕಟ್ಟಡಏಕಾಏಕಿ ನೆಲ ಕಚ್ಚಿದೆ.

ಈ ವೇಳೆ 13 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು,ಕಟ್ಟಡ ಕುಸಿತದಲ್ಲಿ ಓರ್ವ ಕಾರ್ಮಿಕ ಸಿಲುಕಿದ್ದಾನೆ. ಹೀಗಾಗಿ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು ಹುಟುಕಾಟ ನಡೆಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಶಾಸಕ ಕೆ .ಹರೀಶ್ ಗೌಡ ಮತ್ತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಭೇಟಿ ನೀಡಿದ್ದಾರೆ. ಜೊತೆಗ್ ಶಾಸಕ ತನ್ವೀರ್ ಸೇಠ್ ಕೂಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಇನ್ನು ಸ್ಥಳಕ್ಕೆ NDRF ತಂಡ ಕೂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸಂಜೆ 6 ಗಂಟೆಯಿಂದ ಕಟ್ಟಡ ಕೆಳಗಡೆ ಸಿಲುಕಿರುವ ಸದ್ದಾಂ ರಕ್ಷಿಸಲು ತಂಡಗಳ ಹರಸಾಹಸ ಪಟ್ಟಿದ್ದು, ಕಾರ್ಯಾಚರಣೆ ಇನ್ನು ಮುಂದುವರೆದಿದೆ.