
ಸಿದ್ದಾರ್ಥನಗರದ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಮಠದ ಅವರ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ.ಸ್ವಾಮೀಜಿಯ ಭದ್ರತಾ ಸಿಬ್ಬಂದಿ ಕಂ ಸಹಾಯಕನಾಗಿದ್ದ ರವಿ (60) ಎಂಬಾತನಿಂದ ಕೃತ್ಯ ಎಂಬ ಆರೋಪ ಕೇಳಿ ಬಂದಿದೆ.ಸ್ಥಳಕ್ಕೆ ನಜರ್ಬಾದ್ ಪೊಲೀಸರು ಭೇಟಿ. ಪರಿಶೀಲನೆ ನಡೆಸಿ ಅಲ್ಲಿದ್ದ ಸಿಬ್ಬಂದಿ ಮತ್ತು ಮಠದಲ್ಲಿದ್ದವರಿಂದ ಮಾಹಿತಿ ಕಲೆಹಾಕಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಕೊಲೆಯಾದ ಸ್ವಾಮೀಜಿ ಅತ್ಯಂತ ಹಿರಿಯರು. ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂದು ಗೊತ್ತಿಲ್ಲ ಆರೋಪಿಯನ್ನು ಬಂಧಿಸಿ ಬಳಿಕ ಸತ್ಯಾಂಶ ಹೊರ ಬೀಳಲಿದೆ.






