ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಇನ್ನು ತನ್ನ ಅಭ್ಯರ್ಥಿಯನ್ನ ಘೋಷಿಸಿಲ್ಲ. ಇತ್ತ ವಿಪಕ್ಷಗಳು ತಮ್ಮ ಒಮ್ಮತ್ತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಹಾಗು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಭೇಟಿ ಮಾಡಿರುವುದು ಹಲವಾರು ಉಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ.
ಮಂಗಳವಾರ ಸಂಜೆ ನಡೆಯುವ ಸಂಸದೀಯ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬ-ವೆಂಕಯ್ಯ ನಾಯಡು ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ. ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಚೆನ್ನಾಗಿ ತಿಳಿದಿರುವ ನಾಯ್ಡು ದಕ್ಷಿಣ ಭಾರತದ ಪ್ರಭಾವಿ ನಾಯಕ ಎಂದೇ ಕೇಸರಿ ಪಾಳಯದಲ್ಲಿ ಛಾಪು ಮೂಡಿಸಿದ್ದಾರೆ.

ಇದಕ್ಕು ಮೊದಲು ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಚುನಾವಣಾ ಕಾರ್ಯತಂತ್ರವನ್ನ ಹೆಣೆಯುವ ಸಲುವಾಗಿ 14 ಸದಸ್ಯರ ನಿರ್ವಹಣಾ ತಂಡದೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.
ರಾಷ್ಟ್ರಪತಿ ಚುನಾವಣೆ ನಿಮಿತ್ತ ಪಕ್ಷವು ನಡ್ಡಾ ಹಾಗು ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಯುಪಿಎಯೇತರ ಪಕ್ಷಗಳ ಜೊತೆ ಸಮನ್ವಯ ನಡೆಸುವಂತೆ ಆದೇಶಿಸಿದೆ. ಬಿಜೆಪಿ ಈ ಭಾರೀ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.49ರಷ್ಟು ಮತಗಳನ್ನು ಹೊಂದಿದೆ.