ಮಂಗಳೂರು : ಪುತ್ತೂರಿನಲ್ಲಿ ಬಿಜೆಪಿ ವಿರುದ್ಧ ಹಿಂದೂ ಮುಖಂಡ ಅರುಣ್ ಪುತ್ತಿಲ ಬಂಡಾಯ ಎದ್ದಿರುವ ವಿಚಾರವಾಗಿ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಿದ್ದರೂ ಚುನಾವಣೆಗೆ ಸ್ಪರ್ಧಿಸಬಹುದು. ತಮ್ಮ ಅಪೇಕ್ಷೆ ಈಡೇರದಿದ್ದಾಗ ಪಕ್ಷೇತರರಾಗಿ ನಾಮಪತ್ರ ಸಲ್ಲಿಸುತ್ತಾರೆ. ಆದರೆ ಪುತ್ತೂರು ಬಿಜೆಪಿ ಭದ್ರಕೋಟೆ, ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದಿದ್ದಾರೆ.
![](https://pratidhvani.com/wp-content/uploads/2023/04/nalin-kumar-kateel-96703764-1024x512.jpg)
ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ವಿಚಾರಧಾರೆಯ ಜೊತೆ ಕೈ ಜೋಡಿಸುತ್ತಾರೆ. ಬಿಜೆಪಿ ಯಾವುದನ್ನೂ ವಿರೋಧಿಸೋದಿಲ್ಲ. ಈ ಚುನಾವಣೆಯಲ್ಲಿ ನಮಗೆ ಗೆಲುವು ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ರು.
ಇನ್ನು ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಛರಿಸಿದ ಅವರು ನಾವು ಯಡಿಯೂರಪ್ಪ ಮಾರ್ಗದರ್ಶನ ಮತ್ತು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗ್ತಾ ಇದೀವಿ. ಎಲ್ಲಾ ಸಂಧರ್ಭದಲ್ಲಿ ಬಿಜೆಪಿ ಮಾತ್ರ ಲಿಂಗಾಯತರನ್ನ ಮುಖ್ಯಮಂತ್ರಿ ಮಾಡುತ್ತದೆ.ಬೇರೆ ಯಾವ ಪಾರ್ಟಿಗೂ ಆ ತಾಕತ್ತಿಲ್ಲ, ಇದ್ದರೆ ಘೋಷಣೆ ಮಾಡಲಿ.ಕಾಂಗ್ರೆಸ್ ಲಿಂಗಾಯತರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ ನೋಡೋಣ ಎಂದು ಸವಾಲ್ ಎಸೆದಿದ್ದಾರೆ.