ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಜೊತೆ ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ಚಾಮರಾಜನಗರದಲ್ಲಿ ನಡೆದ ರಾಜ್ಯ ಪ್ರಕೋಷ್ಠಗಳ ಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಿತಾಮಹರು ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸಿದ್ದರು ಆದರೆ ಬಸವರಾಜ್ ಬೊಮ್ಮಾಯಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2022/12/nalin-kumar-kateel-takes-charge-as-karnataka-bjp-chief-1024x768.webp)
ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಶೇ.40 ರಷ್ಟು ಕಮಿಷನ್ ಆರೋಪ ಮಾಡುತ್ತಿದ್ದಾರೆ ಮಾಡಿರುವ ಆರೋಪಗಳ ಬಗ್ಗೆ ಲೋಕಾಯುಕ್ತಕ್ಕೆ ದಾಖಲೆಗಳ ಸಮೇತ ದೂರು ನೀಡಲಿ. ಆರೋಪ ಮಾಡಿರುವವರು ಇದುವರೆಗೂ ಯಾವುದೇ ಒಂದೇ ಒಂದು ದಾಖಲೆಯನ್ನು ಪ್ರದರ್ಶಿಸಿಲ್ಲ ಆರೋಪ ಮಾಡಿದ ಕೆಂಪಣ್ಣ ಜೈಲಿಗೆ ಹೋಗಿ ವಾಪಸ್ ಬಂದಿದ್ದಾರೆ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗಲಿದ್ದಾರೆ ಎಂದು ಮಾತನಾಡುವ ವೇಳೆ ಭವಿಷ್ಯ ನುಡಿದಿದ್ದಾರೆ.
ಭಯೋತ್ಪಾದನೆಯ ಇನ್ನೊಂದು ಮುಖನೇ ಕಾಂಗ್ರೆಸ್ ಉಗ್ರು ದಾಳಿಯಿಂದ ನಮ್ಮ ಯೋಧರು ಮೃತಪಟ್ಟರೆ ಕಾಂಗ್ರೆಸ್ನವರು ಉಗ್ರರ ಪರ ಕಣ್ಣೀರು ಸುರಿಸುತ್ತಾರೆ. ಮಂಗಳೂರಿನಲ್ಲಿ ಕುಕ್ಕರ್ ಬ್ಯ್ಲಾಸ್ಟ್ ಮಾಡಿದ ವ್ಯಕ್ತಿ ಪರ ಇಲ್ಲಿನ ಕಾಂಗ್ರೆಸ್ ಅಧ್ಯಕ್ಷರು ಮಾತನಾಡುತ್ತಾರೆ. PFI-SDPI ಸಂಘಟನೆಗಳ ಮೇಲಿದ್ದ ಕೇಸನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆಯಿತ್ತು ಅದೇ ಸಂಘಟನೆಯ ಸದಸ್ಯರು ಅವರ ಪಕ್ಷದ ಶಾಸಕರಿಗೆ ಚೂರಿಯಲ್ಲಿ ಇರಿದರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಧೇಶದಲ್ಲಿ ಇದೇ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.