• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2023ರ ಚುನಾವಣೆಗೆ ಭಾರೀ ಸಿದ್ಧತೆ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ ಇಳಿಸುವ ಸಾಧ್ಯತೆ

ನಚಿಕೇತು by ನಚಿಕೇತು
October 30, 2021
in ಕರ್ನಾಟಕ, ರಾಜಕೀಯ
0
2023ರ ಚುನಾವಣೆಗೆ ಭಾರೀ ಸಿದ್ಧತೆ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ ಇಳಿಸುವ ಸಾಧ್ಯತೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು 2 ವರ್ಷಗಳು ಬಾಕಿ ಇದೆ. ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಚುನಾವಣಾ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಪೂರಕವಾಗಿ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಕ ಚುನಾವಣೆಗೆ ರಾಜ್ಯ ಬಿಜೆಪಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ.

ADVERTISEMENT

ಆರ್ಎಸ್ಎಸ್ ಪ್ರಮುಖರ ಸೂಚನೆ ಮೇರೆಗೆ ನವೆಂಬರ್ ತಿಂಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಪಕ್ಷ ಸಂಘಟನೆಗೆ ವೇದಿಕೆ ಸಜ್ಜುಗೊಳಿಸಲು ಬಿಜೆಪಿ ನಿರ್ಧಾರ ಮಾಡಿದೆ. ಇದರ ಮೊದಲ ಹಂತವಾಗಿ, ನಳಿನ್ಕುಮಾರ್ ಕಟೀಲ್ರ ಜೊತೆಗೆ ಮಾತುಕತೆ ನಡೆಸಿದ್ದಾರೆ ಆರ್ಎಸ್ಎಸ್ನ ಪ್ರಮುಖರು. ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ಆಗಿರುವ ನಾಯಕತ್ವ ಬದಲಾವಣೆ, ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರನ್ನು ಬದಲಿಸಲು ತೆರೆಮರೆಯಲ್ಲಿ ಸಿದ್ಧತೆ ಆರಭವಾಗಿದೆ.

ಇತ್ತೀಚೆಗೆ ಜನಾಶೀರ್ವಾದ ಯಾತ್ರೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೆ ಆಗಮಿಸಿದ್ದ ನಳಿನ್ಕುಮಾರ್ ಕಟೀಲ್ ಅವರಿಗೆ, ಮಂಗಳೂರಿನ ಆರ್ಎಸ್ಎಸ್ನ ಕಚೇರಿ, ಸಂಘ ನಿಕೇತನಕ್ಕೆ ಬರುವಂತೆ ಆರ್ಎಸ್ಎಸ್ನ ಪ್ರಮುಖರು ಆಹ್ವಾನ ನೀಡಿದ್ದರು. ಭೇಟಿಯ ಸಂದರ್ಭದಲ್ಲಿ, 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿತದೃಷ್ಟಿಯಿಂದ ಪಕ್ಷದೊಳಗೆ ಬದಲಾವಣೆ ಮಾಡುವುದಾಗಿ ಆರ್ಎಸ್ಎಸ್ ಪ್ರಮುಖರು ಸೂಕ್ಷ್ಮವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಆರ್ಎಸ್ಎಸ್ನ ಬೈಠಕ್ನಲ್ಲಿ ಒಕ್ಕೊರಲ ನಿರ್ಧಾರವಾದ್ರೆ, ರಾಜ್ಯ ಬಿಜೆಪಿಯ ಸಾರಥಿಯನ್ನು ಬದಲಾವಣೆ ಮಾಡಬಹುದು. ಅದಕ್ಕೆ ನೀವು ಸಿದ್ಧವಾಗಿರಿ ಎಂದು ನಳಿನ್ಕುಮಾರ್ ಕಟೀಲ್ರಿಗೆ ಆರ್ಎಸ್ಎಸ್ನ ಪ್ರಮುಖರು ತಿಳಿಸಿದ್ದಾರೆ ಎನ್ನಲಾಗಿದ್ದು, ಈ ವರ್ಷದ ಅಂತ್ಯದೊಳಗೆ ಸಂಘಟನೆಯ ಕೆಲಸ ಕಾರ್ಯಗಳು ಆರಂಭವಾಗಬೇಕಾಗಿರುವ ಕಾರಣ, ನಿಮ್ಮನ್ನು ಆ ಸ್ಥಾನದಿಂದ ಬದಲಾವಣೆ ಮಾಡಬೇಕಾಗಬಹುದು ಎಂದಿದ್ದಾರಂತೆ.

ಜೊತೆಗೆ ದಲಿತ, ಒಕ್ಕಲಿಗ, ಲಿಂಗಾಯತ ಹೀಗೆ ವಿವಿಧ ಸಮುದಾಯದ ನಾಯಕರಲ್ಲಿ ಒಬ್ಬರನ್ನು ಆಯ್ಕೆ ಮಾಡಿ, ಆ ಸ್ಥಾನಕ್ಕೆ ತಂದು ಕೂರಿಸಬಹುದು ಎಂದು ತಿಳಿಸಿರುವ ಆರ್ಎಸ್ಎಸ್, ಪ್ರಮುಖರ ಮಾತಿಗೆ ಖಂಡಿತವಾಗಿಯೂ ಪಕ್ಷದ ತತ್ವ, ಸಿದ್ಧಾಂತ ಹಾಗೂ ಸಂಘದ ಕಟ್ಟಪ್ಪಣೆಗೆ ನಾನು ಸಿದ್ಧ ಎಂದಿದ್ದಾರೆ ಅಂತ ಹೇಳಲಾಗ್ತಿದೆ.

ಇನ್ನು ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪರನ್ನು ಸದ್ಭಳಕೆ ಮಾಡಿಕೊಳ್ಳಲು ಪಕ್ಷ ನಿರ್ಧಾರ ಕೈಗೊಂಡಿದ್ದು, ಯಡಿಯೂರಪ್ಪರನ್ನು ರಾಜ್ಯದ್ಯಾಂತ ಪ್ರವಾಸ ಮಾಡುವಂತೆ ತಿಳಿಸಿ, ಆ ಮೂಲಕವು ಸಂಘಟನೆಗೆ ಒತ್ತು ನೀಡಲು ಬಿಜೆಪಿ ನಿರ್ಧಾರ ಮಾಡಿದೆ. ಹೀಗೆ ಸಾಲು ಸಾಲು ಕಾರ್ಯಕ್ರಮಗಳ ಮೂಲಕ , 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ನಿಂದಲೇ ಬಿಜೆಪಿ ಸಜ್ಜಾಗುತ್ತಿದೆ.

ಕಳೆದ ವರ್ಷ ಜನವರಿಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗಾಗಿ ನಡೆದ ಔಪಚಾರಿಕ ಚುನಾವಣೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದರು. ನಗರದ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಔಪಚಾರಿಕ ಚುನಾವಣೆ ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವಿರೋಧ ಆಯ್ಕೆಯಾಗಿದ್ದರು.

ಅಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ವೇಳೆ ಮಾತಾಡಿದ್ದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನೊಬ್ಬ ಪ್ರಧಾನಿಯಾಗುವುದು, ಮುಖ್ಯ ಮಂತ್ರಿಯಾಗುವುದು, ರಾಜ್ಯಾಧ್ಯಕ್ಷನಾಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ನಾನು ರಾಜ್ಯವನ್ನು ಪ್ರತಿನಿಧಿಸಲಿದ್ದೇನೆ. ನಾನು ವಿದ್ವಾಂಸನಲ್ಲ, ಪಂಡಿತನೂ ಅಲ್ಲ. ನಾನು ಸಂಘದ ಸಾಮಾನ್ಯ ಕಾರ್ಯಕರ್ತ. ಸಂಘದ ಕಾರ್ಯಕರ್ತರು ನನ್ನ ಬೆಳೆಸಿದ್ದಾರೆ. ಕಾರ್ಯಕರ್ತರ ಅಪೇಕ್ಷೆಗೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಸಿಎಂ ಮತ್ತು ತಂಡದ ಮಾರ್ಗದರ್ಶನದಂತೆ ನಡೆಯುತ್ತೇನೆ. ಈ ಜವಾಬ್ದಾರಿಯನ್ನು ನಿರ್ವಹಿಸಲು ಭಯವೂ ಇದೆ, ಆತ್ಮವಿಶ್ವಾಸವೂ ಇದೆ. ಯಡಿಯೂರಪ್ಪನವರಂಥ ನಾಯಕರ ಆಶೀರ್ವಾದ ನನ್ನ ಮೇಲಿದೆ. ಯಡಿಯೂರಪ್ಪ, ಈಶ್ವರಪ್ಪ, ಅನಂತ್ ಕುಮಾರ್ ರಂಥವರ ಪರಿಶ್ರಮದಿಂದ ಪಕ್ಷ ಬೆಳೆದುಬಂದಿದೆ. ಆ ಪಕ್ಷವನ್ನು ನಾವು ಮುನ್ನಡೆಸಿಕೊಂಡು ಹೋಗಬೇಕಿದೆ ಎಂದು ಹೇಳಿದ್ದರು..

Tags: 2023ರ ಚುನಾವಣೆBJPನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಬಿಜೆಪಿಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ರಾಜ್ಯಾಧ್ಯಕ್ಷ
Previous Post

ಪುನೀತ್ ಮಗಳು ಧೃತಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ ದೃಶ್ಯ

Next Post

ಮಟ್ಕಾ ದಂಧೆ, ಬಡ್ಡಿ ವ್ಯವಹಾರ ಮಾಡುವ ವ್ಯಕ್ತಿ ನಾನಲ್ಲ ಬೇಕಿದ್ರೆ ಪುಣ್ಯ ಸ್ಥಳದಲ್ಲಿ ಪ್ರಮಾಣ ಮಾಡುತ್ತನೆ:

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post
ಮಟ್ಕಾ ದಂಧೆ, ಬಡ್ಡಿ ವ್ಯವಹಾರ ಮಾಡುವ ವ್ಯಕ್ತಿ ನಾನಲ್ಲ ಬೇಕಿದ್ರೆ ಪುಣ್ಯ ಸ್ಥಳದಲ್ಲಿ ಪ್ರಮಾಣ ಮಾಡುತ್ತನೆ:

ಮಟ್ಕಾ ದಂಧೆ, ಬಡ್ಡಿ ವ್ಯವಹಾರ ಮಾಡುವ ವ್ಯಕ್ತಿ ನಾನಲ್ಲ ಬೇಕಿದ್ರೆ ಪುಣ್ಯ ಸ್ಥಳದಲ್ಲಿ ಪ್ರಮಾಣ ಮಾಡುತ್ತನೆ:

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada