2023ರ ವಿಧಾನಸಭಾ ಚುನಾವಣೆಗೆ(karnataka assembly election) ದಿನಗಣನೆ ಶುರುವಾಗಿದೆ. ಇದೇ ಮೇ 10ರಂದು ಎಲೆಕ್ಷನ್(election) ನಡೆಯಲಿದ್ದು, ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು ಅಬ್ಬರದ ಮತ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಪ್ರಯುಕ್ತ, ನಾಳೆ ಪ್ರಧಾನಿ ನರೇಂದ್ರ ಮೋದಿ(narendra modi) ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಿಜೆಪಿ(BJP) ಪ್ರಚಾರ ಕಾರ್ಯಕ್ರಮಗಳಲ್ಲಿ ನಮೋ ಭಾಗಿಯಾಗಲಿದ್ದು, ಭದ್ರತೆಯ ಉದ್ದೇಶದಿಂದ ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು(police) ನಿರ್ಬಂಧ ಹೇರಿದ್ದಾರೆ.
![](https://pratidhvani.com/wp-content/uploads/2023/04/Prime-Minister-Narendra-Modi-addressed-the-75th-Am_1671889319836-1-1024x576.jpg)
ನಾಳೆ ಮಧ್ಯಾಹ್ನ 2 ರಿಂದ ರಾತ್ರಿ 7.30ರ ವರೆಗೆ ಮೋದಿ(narendra modi) ರ್ಯಾಲಿ ನಡೆಯಲಿದ್ದು, ಈ ಅವಧಿಯಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯ ರಸ್ತೆಗಳ ಬಳಕೆಗೆ ಬೆಂಗಳೂರು(bangalore traffic police) ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಹಳೇ ಏರ್ಪೋರ್ಟ್ ರಸ್ತೆ, ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ಕೃಂಬಿಗಲ್ ರೋಡ್, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್ಸನ್ ರಸ್ತೆ, ಲಾಲ್ ಭಾಗ್ ವೆಸ್ಟ್ ಗೇಟ್ ರಸ್ತೆ, ಕೆ.ಆರ್.ಸರ್ಕಲ್, ಆರ್.ವಿ.ಕಾಲೇಜ್ ರಸ್ತೆ, ಲಾಲ್ ಭಾಗ್ ಮುಖ್ಯ ರಸ್ತೆ, ಬಸವನಗುಡಿ 50 ಅಡಿ ಬ್ಯಾಂಕ್ ರಸ್ತೆಗಳ ಬದಲಾಗಿ ಪರ್ಯಾಐ ಮಾರ್ಗದ ಮೂಲಕ ಸಂಚಾರಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.