• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ನಂಜನಗೂಡು: ಸ್ವಂತ  ಸೂರಿಗಾಗಿ ಕಣ್ಣೀರಿಡುತ್ತಿರುವ ಮಹಿಳೆಗೆ ಬೇಕಿದೆ ನೆರವಿನ ಹಸ್ತ

ಪ್ರತಿಧ್ವನಿ by ಪ್ರತಿಧ್ವನಿ
February 8, 2023
in ಇತರೆ / Others, ವಿಶೇಷ
0
ನಂಜನಗೂಡು: ಸ್ವಂತ  ಸೂರಿಗಾಗಿ ಕಣ್ಣೀರಿಡುತ್ತಿರುವ ಮಹಿಳೆಗೆ ಬೇಕಿದೆ ನೆರವಿನ ಹಸ್ತ
Share on WhatsAppShare on FacebookShare on Telegram

ನಂಜನಗೂಡು : ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ಚೇತನ ಮಹಿಳೆಯೋರ್ವರು ಸ್ವಂತ ಸೂರಿಗಾರಿ ಕಣ್ಣೀರಿಡುತ್ತಿದ್ದು, ಇವರಿಗೆ ಮನೆ ನಿರ್ಮಿಸಿಕೊಡಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕಾಗಿದೆ.

ADVERTISEMENT

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹನುಮನಪುರ ಗ್ರಾಮದಲ್ಲಿ ವಿಶೇಷ ಚೇತನ ಮಹಿಳೆಗೆ ವಾಸಿಸಲು ಮನೆ ಇಲ್ಲ, ತಿನ್ನಲು ಆಹಾರವಿಲ್ಲ, ತಗಡಿನ ಮನೆಗೆ ರೇಷ್ಮೆ ಗೂಡಿನ ತಟ್ಟೆಯೇ ಬಾಗಿಲು, ವಿದ್ಯುತ್ ದೀಪವಿಲ್ಲ. ಪಿಂಚಣಿ ಹಣದಲ್ಲೇ ಜೀವನ ಸಾಗಿಸುವ ಮಹಿಳೆಯ ರೋಧನೆ ಮನ ಕಲಕುವಂತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ಹಾಗೂ ಹಾಲಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹನುಮನಪುರ ಗ್ರಾಮದ ಜಯಮ್ಮ ಎಂಬ ವಿಶೇಷ ಚೇತನ ಮಹಿಳೆ ಬೀದಿಗೆ ಬಿದ್ದಿದ್ದಾಳೆ.

ಇವರ ಬಗ್ಗೆ ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ಬೆಳಕು ಚೆಲ್ಲಿದ್ದಾರೆ. ಜನಸಂಗ್ರಾಮ ಪರಿಷತ್ ನ ಪದಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಸ್ವಂತ ಸೂರಿಗಾಗಿ ಕಣ್ಣೀರು ಹಾಕುತ್ತಿರುವ ಮಹಿಳೆಗೆ ಬಂಧು ಬಳಗದವರು ಯಾರು ಇಲ್ಲದೆ ಅನಾಥೆಯಾಗಿದ್ದಾಳೆ. ಕಳೆದ 15 ವರ್ಷಗಳಿಂದ ಕಣ್ಣೀರಿಡುತ್ತಿರುವ ಮಹಿಳೆ, ಮನೆ ಇಲ್ಲದೆ ಪರದಾಡುತ್ತಿದ್ದಾಳೆ. ಅಲ್ಲೇ ಗ್ರಾಮದ ಮಧು ಎಂಬ ಯುವಕ ಆ ಅಂಗವಿಕಲೆಯ ಕಷ್ಟಕ್ಕೆ ಮಿಡಿದು, ಮಹಿಳೆಗೆ ತಗಡಿನಿಂದ ತಾತ್ಕಾಲಿಕವಾಗಿ ಗುಡಿಸಲು ನಿರ್ಮಾಣ ಮಾಡಿಕೊಟ್ಟಿದ್ದಾರೆ.

ಲೇಟ್ ಮಣಿಯಯ್ಯ ಎಂಬುವರ ಪುತ್ರಿ ಜಯಮ್ಮ ಹುಟ್ಟುತ್ತಲೇ ವಿಶೇಷ ಚೇತನರಾಗಿದ್ದಾರೆ. ತಂದೆ ಇರುವ ತನಕ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದರು. ತಂದೆ ಸಾವನ್ನಪ್ಪಿದ ಬಳಿಕ ಇವರ ಜೀವನ ಹೇಳತೀರದು. ಇರೋದಕ್ಕೆ ಮನೆನು ಇಲ್ಲ, ಜಾಗವೂ ಇಲ್ಲ, ಕುಡಿಯೋಕೆ ನೀರಿನ ವ್ಯವಸ್ಥೆಯು ಇಲ್ಲ, ಮನೆಗೆ ವಿದ್ಯುತ್ ದೀಪವು ಇಲ್ಲ, ಶೌಚಾಲಯ ಅಂತೂ ಇಲ್ಲವೇ ಇಲ್ಲ. ತಗಡಿನಲ್ಲಿ ಪುಟ್ಟದಾದ ಮನೆ ಮಾಡಿಕೊಂಡು ಜೀವನವನ್ನು ಸಾಗಿಸುತ್ತಿರುವ ಅಂಗವಿಕಲ ಮಹಿಳೆಯನ್ನು ಚುನಾವಣೆಯ ಸಂದರ್ಭದಲ್ಲಿ ಓಟಿಗಾಗಿ ಜನಪ್ರತಿನಿಧಿಗಳು ಬಳಸಿಕೊಳ್ಳುತ್ತಾರೆ. ನನಗೆ ಯಾವುದೇ ಸೌಲಭ್ಯವನ್ನು ನೀಡಿಲ್ಲ ಎಂದು ಕಣ್ಣೀರಿಟ್ಟಿದ್ದಾಳೆ.

ಅಕ್ಕ ಪಕ್ಕದ ಮನೆಯವರು ಊಟ ಕೊಟ್ಟರಷ್ಟೇ ಮಾಡುತ್ತೇನೆ ಇಲ್ಲದಿದ್ದರೆ ಉಪವಾಸ ಮಲಗುತ್ತೇನೆ. ವಿಶೇಷ ಚೇತನರಿಗೆ ಪ್ರತಿ ತಿಂಗಳು ಬರುವ ಪಿಂಚಣಿ ಹಣದಲ್ಲಿ ಜೀವನ ಸಾಗಿಸುತ್ತೇನೆ.

ಪಿಂಚಣಿ ಹಣ ಕೊಡಲು ಲಂಚ

ಪಿಂಚಣಿ ಹಣ ಪ್ರತಿ ತಿಂಗಳು ಬರುವುದಿಲ್ಲ. ಮೂರ್ನಾಲ್ಕು ತಿಂಗಳಿಗೆ ಬರುತ್ತದೆ. ಪಿಂಚಣಿ ನೀಡಲು ಚುಂಚನಹಳ್ಳಿ ಪೋಸ್ಟ್ ಮ್ಯಾನ್ ಲಂಚ ಕೇಳುತ್ತಿದ್ದಾರೆ. ಹಣವನ್ನು ಕೊಡುವಾಗ 200 ರಿಂದ 300 ಲಂಚ ತೆಗೆದುಕೊಂಡು ಪಿಂಚಣಿ ಹಣ ನೀಡುತ್ತಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಡಿ ಎಂದು ಮನವಿ ಮಾಡಿದರು ಯಾರು ಕೂಡ ನನಗೆ ಕರುಣೆ ತೋರುತ್ತಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸ್ಥಳೀಯ ಜನಪ್ರತಿನಿಧಿಗಳ ಬಳಿ ಹೇಳಿಕೊಂಡರು ಯಾರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕೂಡಲೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿಶೇಷ ಚೇತನ ಮಹಿಳೆಯ ನೋವಿಗೆ ಸ್ಪಂದಿಸಬೇಕು ಎಂಬುದು ನಮ್ಮ ವಾಹಿನಿಯ ಆಶಯವಾಗಿದೆ.

Tags: Mysore
Previous Post

ಕುಮಾರಸ್ವಾಮಿ ಮಾತನ್ನು ಮೀರಿದ್ಕೆ ಇಷ್ಟೆಲ್ಲಾ ಸಾಕ್ಷಿ ಕೊಟ್ರು..! ಮುಂದೆ ಮತ್ತಷ್ಟು..

Next Post

೨೦೨೩ ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮುನ್ನೋಟ

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
೨೦೨೩ ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮುನ್ನೋಟ

೨೦೨೩ ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮುನ್ನೋಟ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada