• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ನಂಜನಗೂಡು: ಸ್ವಂತ  ಸೂರಿಗಾಗಿ ಕಣ್ಣೀರಿಡುತ್ತಿರುವ ಮಹಿಳೆಗೆ ಬೇಕಿದೆ ನೆರವಿನ ಹಸ್ತ

ಪ್ರತಿಧ್ವನಿ by ಪ್ರತಿಧ್ವನಿ
February 8, 2023
in ಇತರೆ / Others, ವಿಶೇಷ
0
ನಂಜನಗೂಡು: ಸ್ವಂತ  ಸೂರಿಗಾಗಿ ಕಣ್ಣೀರಿಡುತ್ತಿರುವ ಮಹಿಳೆಗೆ ಬೇಕಿದೆ ನೆರವಿನ ಹಸ್ತ
Share on WhatsAppShare on FacebookShare on Telegram

ನಂಜನಗೂಡು : ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ಚೇತನ ಮಹಿಳೆಯೋರ್ವರು ಸ್ವಂತ ಸೂರಿಗಾರಿ ಕಣ್ಣೀರಿಡುತ್ತಿದ್ದು, ಇವರಿಗೆ ಮನೆ ನಿರ್ಮಿಸಿಕೊಡಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕಾಗಿದೆ.

ADVERTISEMENT

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹನುಮನಪುರ ಗ್ರಾಮದಲ್ಲಿ ವಿಶೇಷ ಚೇತನ ಮಹಿಳೆಗೆ ವಾಸಿಸಲು ಮನೆ ಇಲ್ಲ, ತಿನ್ನಲು ಆಹಾರವಿಲ್ಲ, ತಗಡಿನ ಮನೆಗೆ ರೇಷ್ಮೆ ಗೂಡಿನ ತಟ್ಟೆಯೇ ಬಾಗಿಲು, ವಿದ್ಯುತ್ ದೀಪವಿಲ್ಲ. ಪಿಂಚಣಿ ಹಣದಲ್ಲೇ ಜೀವನ ಸಾಗಿಸುವ ಮಹಿಳೆಯ ರೋಧನೆ ಮನ ಕಲಕುವಂತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ಹಾಗೂ ಹಾಲಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹನುಮನಪುರ ಗ್ರಾಮದ ಜಯಮ್ಮ ಎಂಬ ವಿಶೇಷ ಚೇತನ ಮಹಿಳೆ ಬೀದಿಗೆ ಬಿದ್ದಿದ್ದಾಳೆ.

ಇವರ ಬಗ್ಗೆ ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ಬೆಳಕು ಚೆಲ್ಲಿದ್ದಾರೆ. ಜನಸಂಗ್ರಾಮ ಪರಿಷತ್ ನ ಪದಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಸ್ವಂತ ಸೂರಿಗಾಗಿ ಕಣ್ಣೀರು ಹಾಕುತ್ತಿರುವ ಮಹಿಳೆಗೆ ಬಂಧು ಬಳಗದವರು ಯಾರು ಇಲ್ಲದೆ ಅನಾಥೆಯಾಗಿದ್ದಾಳೆ. ಕಳೆದ 15 ವರ್ಷಗಳಿಂದ ಕಣ್ಣೀರಿಡುತ್ತಿರುವ ಮಹಿಳೆ, ಮನೆ ಇಲ್ಲದೆ ಪರದಾಡುತ್ತಿದ್ದಾಳೆ. ಅಲ್ಲೇ ಗ್ರಾಮದ ಮಧು ಎಂಬ ಯುವಕ ಆ ಅಂಗವಿಕಲೆಯ ಕಷ್ಟಕ್ಕೆ ಮಿಡಿದು, ಮಹಿಳೆಗೆ ತಗಡಿನಿಂದ ತಾತ್ಕಾಲಿಕವಾಗಿ ಗುಡಿಸಲು ನಿರ್ಮಾಣ ಮಾಡಿಕೊಟ್ಟಿದ್ದಾರೆ.

ಲೇಟ್ ಮಣಿಯಯ್ಯ ಎಂಬುವರ ಪುತ್ರಿ ಜಯಮ್ಮ ಹುಟ್ಟುತ್ತಲೇ ವಿಶೇಷ ಚೇತನರಾಗಿದ್ದಾರೆ. ತಂದೆ ಇರುವ ತನಕ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದರು. ತಂದೆ ಸಾವನ್ನಪ್ಪಿದ ಬಳಿಕ ಇವರ ಜೀವನ ಹೇಳತೀರದು. ಇರೋದಕ್ಕೆ ಮನೆನು ಇಲ್ಲ, ಜಾಗವೂ ಇಲ್ಲ, ಕುಡಿಯೋಕೆ ನೀರಿನ ವ್ಯವಸ್ಥೆಯು ಇಲ್ಲ, ಮನೆಗೆ ವಿದ್ಯುತ್ ದೀಪವು ಇಲ್ಲ, ಶೌಚಾಲಯ ಅಂತೂ ಇಲ್ಲವೇ ಇಲ್ಲ. ತಗಡಿನಲ್ಲಿ ಪುಟ್ಟದಾದ ಮನೆ ಮಾಡಿಕೊಂಡು ಜೀವನವನ್ನು ಸಾಗಿಸುತ್ತಿರುವ ಅಂಗವಿಕಲ ಮಹಿಳೆಯನ್ನು ಚುನಾವಣೆಯ ಸಂದರ್ಭದಲ್ಲಿ ಓಟಿಗಾಗಿ ಜನಪ್ರತಿನಿಧಿಗಳು ಬಳಸಿಕೊಳ್ಳುತ್ತಾರೆ. ನನಗೆ ಯಾವುದೇ ಸೌಲಭ್ಯವನ್ನು ನೀಡಿಲ್ಲ ಎಂದು ಕಣ್ಣೀರಿಟ್ಟಿದ್ದಾಳೆ.

ಅಕ್ಕ ಪಕ್ಕದ ಮನೆಯವರು ಊಟ ಕೊಟ್ಟರಷ್ಟೇ ಮಾಡುತ್ತೇನೆ ಇಲ್ಲದಿದ್ದರೆ ಉಪವಾಸ ಮಲಗುತ್ತೇನೆ. ವಿಶೇಷ ಚೇತನರಿಗೆ ಪ್ರತಿ ತಿಂಗಳು ಬರುವ ಪಿಂಚಣಿ ಹಣದಲ್ಲಿ ಜೀವನ ಸಾಗಿಸುತ್ತೇನೆ.

ಪಿಂಚಣಿ ಹಣ ಕೊಡಲು ಲಂಚ

ಪಿಂಚಣಿ ಹಣ ಪ್ರತಿ ತಿಂಗಳು ಬರುವುದಿಲ್ಲ. ಮೂರ್ನಾಲ್ಕು ತಿಂಗಳಿಗೆ ಬರುತ್ತದೆ. ಪಿಂಚಣಿ ನೀಡಲು ಚುಂಚನಹಳ್ಳಿ ಪೋಸ್ಟ್ ಮ್ಯಾನ್ ಲಂಚ ಕೇಳುತ್ತಿದ್ದಾರೆ. ಹಣವನ್ನು ಕೊಡುವಾಗ 200 ರಿಂದ 300 ಲಂಚ ತೆಗೆದುಕೊಂಡು ಪಿಂಚಣಿ ಹಣ ನೀಡುತ್ತಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಡಿ ಎಂದು ಮನವಿ ಮಾಡಿದರು ಯಾರು ಕೂಡ ನನಗೆ ಕರುಣೆ ತೋರುತ್ತಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸ್ಥಳೀಯ ಜನಪ್ರತಿನಿಧಿಗಳ ಬಳಿ ಹೇಳಿಕೊಂಡರು ಯಾರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕೂಡಲೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿಶೇಷ ಚೇತನ ಮಹಿಳೆಯ ನೋವಿಗೆ ಸ್ಪಂದಿಸಬೇಕು ಎಂಬುದು ನಮ್ಮ ವಾಹಿನಿಯ ಆಶಯವಾಗಿದೆ.

Tags: Mysore
Previous Post

ಕುಮಾರಸ್ವಾಮಿ ಮಾತನ್ನು ಮೀರಿದ್ಕೆ ಇಷ್ಟೆಲ್ಲಾ ಸಾಕ್ಷಿ ಕೊಟ್ರು..! ಮುಂದೆ ಮತ್ತಷ್ಟು..

Next Post

೨೦೨೩ ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮುನ್ನೋಟ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

April 14, 2026
Next Post
೨೦೨೩ ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮುನ್ನೋಟ

೨೦೨೩ ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮುನ್ನೋಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada