ನಟಿ ಶಿಲ್ಪಾ ಶೆಟ್ಟಿ ದಕ್ಷಿಣ ಕನ್ನಡ ಮೂಲದವರು ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆಗ್ಗಿಂದಾಗೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿ ಭಾಗದ ಭೂತಕೋಲ, ದೈವಕೋಲಗಳಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಣೆ ಮಾಡ್ತಾರೆ. ಆದರೆ ಇದೀಗ ಮೈಸೂರಿನ ನಂಜನಗೂಡು ದೇವಸ್ಥಾನಕ್ಕೆ ಬಂದಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-28-at-8.17.58-PM-513x1024.jpeg)
ಬಾಲಿವುಡ್ನ ಖ್ಯಾತ ನಟಿ, ಕನ್ನಡತಿ ಶಿಲ್ಪಾ ಶೆಟ್ಟಿ ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದಿದ್ದಾರೆ. ಕೆಲ ಕಾಲ ದೇವಸ್ಥಾನದ ಆವರಣದಲ್ಲಿ ಕುಳಿತು ಧ್ಯಾನಸ್ಥರಾಗಿ ಶ್ರೀ ನಂಜುಂಡೇಶ್ವರನ ಸನ್ನಿಧಿಯಲ್ಲಿ ಧ್ಯಾನ ಮಾಡಿದ್ದಾರೆ. ಬಿಲ್ವಪತ್ರೆ ಅರ್ಪಿಸಿ ಶಿವನ ಆರಾಧನೆ ಮಾಡಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-28-at-8.17.57-PM-1-768x1024.jpeg)
sefgbvn
ಜೋಗಿ ಪ್ರೇಮ್ ನಿರ್ದೇಶನದ ಕೇಡಿ ಚಿತ್ರದ ಕೊನೆ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಲು ಬಂದಿದ್ದ ನಟಿ ಶಿಲ್ಪಾ ಶೆಟ್ಟಿ, ತನ್ನ ತಂಡದ ಜೊತೆಯಲ್ಲಿ ನಂಜನಗೂಡಿಗೆ ಭೇಟಿ ಕೊಟ್ಟಿದ್ದಾರೆ. ನಂಜುಂಡೇಶ್ವರನ ದರ್ಶನ ಪಡದ ನಂತ್ರ ದೇವಾಲಯದ ಸಿಬ್ಬಂದಿ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-28-at-8.17.57-PM-2.jpeg)