ಪ್ರತಿವರ್ಷ ಫೆಬ್ರವರಿ 28ರಂದು ದೇಶದಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ. ೧೯೨೮ರ ಫೆಬುವರಿ ಈದಿನದುಂದು ಅಂದು ಸಿಲಿಕಾನ್ ನಮ್ಮ ಬ್ರಾಂಡ್ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಡಾ.ಸಿ.ವಿ ರಾಮನ್ ಬೆಳಿಕಿನ ಚದುರುವಿಕೆಯ ಪರಿಣಾಮಗಳನ್ನುಏಲೆ ಏಲೆಯಾಗಿ ವಿವರಿಸಿದ್ರು ಅಂದು ಆ ಸಂಶೋಧನೆ ರಾಮನ್ ಪರಿಣಾಮ ರಾಮನ್ ಎಫೆಕ್ಟ್ ಎಂದು ಜಗತ್ತು ಪ್ರಸಿದ್ಧವಾಯಿತು.
ಸಿ.ವಿ. ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ . ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ 1888ರ ನವೆಂಬರ್ 7ರಂದು . ಅವರ ತಂದೆ ಚಂದ್ರಶೇಖರ್ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ರಾಮನ್ ಅವರು ಕಲ್ಕತಾ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಮುಂದೆ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿ ದೇಶ ವಿದೇಶಗಿರಿಗೂ ಸಹ ಮಾದರಿ ಆದರು.
ವಿ ರಾಮನ್ ಅವರ ಸಾಧನೆಗಾಗಿ ಅವರಿಗೆ 1930ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲ ನೊಬೆಲ್ ಪುರಸ್ಕಾರವೂ ಹೌದು.ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯದ ಮೊತ್ತಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ನಮ್ಮ ಭಾರತ ದೇಶವನ್ನು ವಿಜ್ಞಾನ ಜಗತ್ತಿನಲ್ಲಿ ಭಾರತವನ್ನು ಶಿಖರಕ್ಕೆ ಕೊಂಡೊಯ್ಯುವುದರ ಮೂಲಕ ಅಂದರೆ, Global Science for Global Wellbeing ಎಂಬ ಥೀಮ್ ನಡಿ ಈ ದಿನವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಒಂದೊಂದು ಘೋಷವಾಕ್ಯದಡಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಜಾಗತಿಕ ಸೌಖ್ಯಕ್ಕಾಗಿ ಜಾಗತಿಕ ವಿಜ್ಞಾನ ಎಂಬ ಘೋಷವಾಕ್ಯವಿದೆ. ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯದ ಮೊತ್ತಮೊದಲ ವಿಜ್ಞಾನಿ ಸಿ.ವಿ.ರಾಮನ್ ಅವರು.
ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಈ ಕಾರಣದಿಂದ ಈದಿನವನ್ನು ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ ಹೀಗೆ ನಾನಾ ಚಟುವಟಿಕೆಗಳನ್ನು ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ.