• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಡ್ರಗ್ಸ್ ಪಾರ್ಟಿಯನ್ನು ಎನ್‌ಸಿಬಿ ಪೊಲೀಸರು ಭೇದಿಸಿದ್ದು ಹೇಗೆ? ಇದರ ಹಿಂದಿನ ಅಸಲಿ ಕಥೆಯೇನು?

ನಚಿಕೇತು by ನಚಿಕೇತು
October 5, 2021
in ದೇಶ
0
ಡ್ರಗ್ಸ್ ಪಾರ್ಟಿಯನ್ನು ಎನ್‌ಸಿಬಿ ಪೊಲೀಸರು ಭೇದಿಸಿದ್ದು ಹೇಗೆ? ಇದರ ಹಿಂದಿನ ಅಸಲಿ ಕಥೆಯೇನು?
Share on WhatsAppShare on FacebookShare on Telegram

ಸಮುದ್ರದ ಮಧ್ಯೆ ನಡೆಯುತ್ತಿದ್ದ ರೇವ್ ಪಾರ್ಟಿಯನ್ನ ಭೇದಿಸುವಲ್ಲಿ ಎನ್‌ಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಜೊತೆಗೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಸೇರಿ ಮೂವರು ಆರೋಪಿಗಳನ್ನು ಬಲೆಗೆ ಬೀಳಿಸಿದ್ದಾರೆ. ಹಾಗಾದ್ರೆ, ಎನ್‌ಸಿಬಿಗೆ ಈ ಹೈಪ್ರೊಫೈಲ್ ಪಾರ್ಟಿಯ ಮಾಹಿತಿ ಸಿಕ್ಕಿದ್ದೇಗೆ? ಜೊತೆಗೆ ಆರೋಪಿಗಳಿಗೆ ಅಧಿಕಾರಿಗಳು ಖೆಡ್ಡಾ ತೋಡಿದ್ದೇಗೆ? ಇಲ್ಲಿದೆ ಸಂಪೂರ್ಣ ವಿವರ.

ADVERTISEMENT

ಬಾಲಿವುಡ್‌ ಬಾದ್‌ ಶಾ ಶಾರುಖ್‌ ಖಾನ್ ಪುತ್ರ ಆರ್ಯನ್‌ ಖಾನ್ ಸೇರಿ 8 ಮಂದಿ ಆರೋಪಿಗಳನ್ನ ಎನ್‌ಸಿಬಿ ಬಲೆಗೆ ಬೀಳಿಸಿದ್ದೇ ಬಲು ರೋಚಕ. ರೇವ್ ಪಾರ್ಟಿ ಆಯೋಜಕರು ಚಾಪೆ ಕೆಳಗೆ ತೂರಿದರೆ, ಎನ್‌ಸಿಬಿ ಅಧಿಕಾರಿಗಳು ರಂಗೋಳಿ ಕೆಳಗೆ ತೂರಿ ಮಾದಕ ಜಾಲವನ್ನ ಬೇಟೆಯಾಡಿದ್ದಾರೆ. ಸಮುದ್ರದ ಮಧ್ಯೆ ನಡೆಯುತ್ತಿದ್ದ ರೇವ್‌ ಪಾರ್ಟಿಯನ್ನ ಪತ್ತೆ ಹಚ್ಚಿ, ಇಡೀ ಬಾಲಿವುಡ್‌ ಮಂದಿಗೆ ಆಘಾತ ನೀಡಿದ್ದಾರೆ.

ಐಷಾರಾಮಿ ಕ್ರೂಸ್‌ನಲ್ಲಿ ರೇವ್ ಪಾರ್ಟಿ ನಡೆಯಬಹುದು ಎಂದು 2 ವಾರಗಳಿಂದಲೇ ಎನ್‌ಸಿಬಿ ಅಧಿಕಾರಿಗಲು ಹದ್ದಿನ ಕಣ್ಣಿಟ್ಟಿದ್ದರು. ಜೊತೆಗೆ ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಕ್ರೂಸ್ ಶಿಪ್‌ನಲ್ಲಿ ಗಾಂಧಿ ಜಯಂತಿ ದಿನದಂದೇ ಪಾರ್ಟಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂಬ ಮಾಹಿತಿಯನ್ನ ಈ ಮೊದಲೇ ಎನ್‌ಸಿಬಿ ಅಧಿಕಾರಿಗಳು ಕಲೆ ಹಾಕಿದ್ದರು. ಇದೇ ಖಚಿತ ಮಾಹಿತಿ ಆಧಾರದ ಮೇಲೆ ಎನ್‌ಸಿಬಿ ಹಡಗಿನ ಮೇಲೆ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಐಷಾರಾಮಿ ಕ್ರೂಸ್‌ನಲ್ಲಿ ಹಲವು ಯುವಕ ಯುವತಿಯರು ಇದ್ದರು. ಅದರಲ್ಲಿ ಒಬ್ಬರು  ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ಕೂಡ  ದಾಖಲಾಗಿದೆ ಎಂದು ಎನ್‌ಸಿಬಿ ಮುಖ್ಯಸ್ಥ ಎಸ್.ಎನ್. ಪ್ರಧಾನ್ ತಿಳಿಸಿದ್ದಾರೆ.

ಡ್ರಗ್ ಕೇಸ್‌ ಪ್ರಕರಣದಲ್ಲಿ ಬಾಲಿವುಡ್ ಲಿಂಕ್ ಇರುವುದು ಖಚಿತವಾಗಿದೆ. ತನಿಖೆಯಲ್ಲಿ ಎಲ್ಲದರ ಬಗ್ಗೆ ಇಂಚಿಂಚೂ ಮಾಹಿತಿಯನ್ನ ಎನ್‌ಸಿಬಿ ಕಲೆ ಹಾಕಿದೆ. ಸದ್ಯ, ಆರ್ಯನ್ ಖಾನ್, ನಟ ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚಾ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ, ಈ ಎಂಟು ಜನರನ್ನು ಶಿಪ್ ಪಾರ್ಟಿಯಲ್ಲಿಯೇ ಬಂಧಿಸಲಾಗಿದೆ.

ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಜೊತೆಗೆ ವಿಚಾರಣೆಗೆ ಹಾಜರಾಗುವಂತೆ ಕ್ರೂಸ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಎನ್‌ಸಿಬಿ ಮುಖ್ಯಸ್ಥ ಎಸ್.ಎನ್. ಪ್ರಧಾನ್ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಔಷಧಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇನ್ನೂ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ ಎಂದು ಎನ್ಸಿಬಿ ಅಧಿಕಾರಿಯೊಬ್ಬರು ಅಕ್ಟೋಬರ್ 5, 2021 ಮಂಗಳವಾರ ತಿಳಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಸಾವಿನ ಬಳಿಕ ಬಾಲಿವುಡ್‌ ಡ್ರಗ್ಸ್ ದಂಧೆ ಮೇಲೆ ಎನ್‌ಸಿಬಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ರು. ಹೀಗಾಗಿ ಎನ್‌ಸಿಬಿ ಫುಲ್ ಅಲರ್ಟ್‌ ಆಗಿ ಈ ಪ್ರಕರಣವನ್ನ ಭೇದಿಸಿದೆ. ಜೊತೆಗೆ ಈ ರೇವ್ ಪಾರ್ಟಿ ಮೂಲಕ ಬಾಲಿವುಡ್ ಮಂದಿ ಮೇಲೆ ಮತ್ತಷ್ಟು ಅನುಮಾನಗಳು ಹೆಚ್ಚಾಗಿವೆ. ಜೊತೆಗೆ ಮತ್ತಷ್ಟು ನಟ ನಟಿಯರು ಈ ಕೇಸ್‌ನಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಕಾರ್ಡೆಲಿಯಾ ಕ್ರೂಸ್‌ನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದೆ ಬಾಲಿವುಡ್ ನಟ, ನಟಿಯರ ಲಿಂಕ್ ಇರುವ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಅಲ್ಲದೇ ಪಾರ್ಟಿಯಲ್ಲಿದ್ದವರು ಹಲವರು ನಟ, ನಟಿಯರ ಫ್ರೆಂಡ್ಸ್ ಎಂಬ ಮಾಹಿತಿ ಎನ್‌ಸಿಬಿ ದೊರೆತಿದೆ. ಜೊತೆಗೆ ಇದಕ್ಕೂ ಮೊದಲು ಇವರೆಲ್ಲಾ ಹಲವು ಪಾರ್ಟಿಗಳನ್ನ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆ ಪಾರ್ಟಿಯಲ್ಲಿ ನಟ, ನಟಿಯರು ಭಾಗಿಯಾಗಿರುವ ಶಂಕೆ ಮೂಡಿದ್ದು, ಈಗಿರುವ ಕೆಲ ಡ್ರಗ್ಸ್ ಕೇಸ್‌ಗಳನ್ನು ರೀ ಓಪನ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರ್ಯನ್‌ ಖಾನ್‌ ಬಂಧನದ ಬಳಿಕ ಮತ್ತಷ್ಟು ಬಾಲಿವುಡ್ ಮಂದಿಗೆ ಆಘಾತ ಎದುರಾಗಿದೆ.  ಇವರನ್ನೆಲ್ಲಾ ಬಲೆಗೆ ಬೀಳಿಸಲು ಎನ್‌ಸಿಬಿ ಮತ್ಯಾವ ತಂತ್ರ ಹೆಣೆಯಲಿದೆ ಎಂದು ಕಾದು ನೋಡಬೇಕಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಎನ್‌ಸಿಬಿಕರೋನಾಕೋವಿಡ್-19ಡ್ರಗ್ಸ್ ಪಾರ್ಟಿನರೇಂದ್ರ ಮೋದಿಪೊಲೀಸರುಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋವಿಡ್ ಸಂದರ್ಭದಲ್ಲಿ ಸರ್ಕಾರಕ್ಕಿಂತ ಹೆಚ್ಚು ಕಾಂಗ್ರೆಸ್ ಜನರಿಗೆ ಸಹಾಯ ಮಾಡಿದೆ – N.Chaluvaraya Swamy

Next Post

ಮೈಸೂರು – ಪಾರ್ಕ್ ಅನ್ನೇ ನಿವೇಶನವಾಗಿ ಫೋರ್ಜರಿ ಮಾಡಿದ ಭೂಪರು : ನೊಂದಣಿ ರದ್ದು ಗೊಳಿಸಿದ ಮುಡಾ ಅಧ್ಯಕ್ಷ ರಾಜೀವ್

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಮೈಸೂರು – ಪಾರ್ಕ್ ಅನ್ನೇ ನಿವೇಶನವಾಗಿ ಫೋರ್ಜರಿ ಮಾಡಿದ ಭೂಪರು : ನೊಂದಣಿ ರದ್ದು ಗೊಳಿಸಿದ ಮುಡಾ ಅಧ್ಯಕ್ಷ ರಾಜೀವ್

ಮೈಸೂರು - ಪಾರ್ಕ್ ಅನ್ನೇ ನಿವೇಶನವಾಗಿ ಫೋರ್ಜರಿ ಮಾಡಿದ ಭೂಪರು : ನೊಂದಣಿ ರದ್ದು ಗೊಳಿಸಿದ ಮುಡಾ ಅಧ್ಯಕ್ಷ ರಾಜೀವ್

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada