ಸೋಮವಾರ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತವಾಗಿದ್ದು ಹಲವರು ತಮ್ಮ ಹಕ್ಕನ್ನು ಚಲಾಯಿಸಿದರೆ ಇನ್ನು ಹಲವರನ್ನು ಮತದಾನದಿಂದ ದೂರ ಉಳಿದಿದ್ದಾರೆ.
ಈ ಮಧ್ಯೆ ಎನ್ಸಿಪಿ ಹಾಗೂ ಕಾಂಗ್ರೆಸ್ ಶಾಸಕರು ದ್ರೌಪದಿ ಮುರ್ಮುಗೆ ಮತದಾನ ಮಾಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು ನಾವು ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಿದ್ದೇವೆ ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ಎನ್ಸಿಪಿ ಶಾಸಕ ಕಮಲೇಶ್ ಸಿಂಗ್ ಹಾಗೂ ಕಾಂಗ್ರೆಸ್ ಶಾಸಕ ಮೊಹಮ್ಮದ್ ಮೊಕ್ವಿಮ್ ಶಾಸಕರಿಗೆ ತಮ್ಮ ಇಷ್ಟದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅಧಿಕಾರವಿರುತ್ತದೆ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವುದೇ ತರಹದ ವಿಪ್ ಜಾರಿಯಲ್ಲಿರುವುದಿಲ್ಲ ಎಂದು ಹೇಳಿದ್ದಾರೆ.