• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ: ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in ಕರ್ನಾಟಕ, ರಾಜಕೀಯ, ವಾಣಿಜ್ಯ
0
ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ: ಸಚಿವ ಕೆ.ಜೆ.ಜಾರ್ಜ್
Share on WhatsAppShare on FacebookShare on Telegram
  • ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರವಿಲ್ಲದಂತೆ ನೋಡಿಕೊಳ್ಳಲು ನಿರ್ದೇಶನ

ಬೆಂಗಳೂರು, ಜ. 3, 2025: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು.

ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, “ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ ಅದಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಹೊಸ ದಾಖಲೆ ಸ್ಥಾಪಿಸಬೇಕು. ಅದಕ್ಕಾಗಿ ಎಲ್ಲಾ ಉತ್ಪಾದನಾ ಘಟಕಗಳನ್ನು ಸನ್ನದ್ಧವಾಗಿ ಇಡಬೇಕು”, ಎಂದು ನಿರ್ದೇಶನ ನೀಡಿದರು.

Chaluvaraya Swamy: ಕುಮಾರಸ್ವಾಮಿ ಹೇಳಿಕೆಗೆ ಸಚಿವ ಚಲುವಣ್ಣ ತಿರುಗೇಟು..! #hdkumaraswamy #jds #congress

“ರಾಯಚೂರು, ಯರಮರಸ್ ಮತ್ತು ಬ್ಳಾರಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕೆಲವು ಉತ್ಪಾದನಾ ಘಟಕಗಳು ಸ್ಥಗಿತಗೊಂಡಿರುವ ಕುರಿತು ಮಾಹಿತಿ ಪಡೆದ ಸಚಿವರು, ಕಾಲಮಿತಿ ಹಾಕಿಕೊಂಡು ಸ್ಥಾವರಗಳ ವಾರ್ಷಿಕ ನಿರ್ವಹಣೆ ಅಥವಾ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಘಕಗಳನ್ನು (ಆರ್ ಟಿಪಿಎಸ್ ನ ಒಂದು ಘಟಕ ಹೊರತುಪಡಿಸಿ) ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಿದ್ಧಗೊಳಿಸಬೇಕು”, ಎಂದು ಸೂಚಿಸಿದರು.

ವಿದ್ಯುತ್ ವಿನಿಮಯಕ್ಕೆ ಒತ್ತು:
ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸುವ ಬದಲು ವಿದ್ಯುತ್ ವಿನಿಮಯಕ್ಕೆ ಆದ್ಯತೆ ನೀಡಬೇಕು. ಈ ಬಗ್ಗೆ ಈಗಿನಿಂದಲೇ ಅನ್ಯ ರಾಜ್ಯಗಳೊಂದಿಗೆ ಒಪ್ಪಂದಕ್ಕೆ ಮಾತುಕತೆ ನಡೆಸಬೇಕು. ಅದೇ ರೀತಿ ಅಲ್ಪಾವಧಿ ವಿದ್ಯುತ್ ಖರೀದಿ ದುಬಾರಿಯಾಗಿರುವುದರಿಂದ ಕಡಿಮೆ ದರಕ್ಕೆ ದೀರ್ಘಾವಧಿ ವಿದ್ಯುತ್ ಖರೀದಿಗೆ ಒತ್ತು ನೀಡಬೇಕು. ಹಾಗೆ ಮಾಡಿದಲ್ಲಿ ಹೆಚ್ಚುವರಿ ವಿದ್ಯುತ್ ಅನ್ನು ಪೀಕ್ ಅವರ್ ನಲ್ಲಿ ಹೆಚ್ಚು ದರಕ್ಕೆ ಮಾರಾಟ ಮಾಡಿ ಹೊರೆ ಕಡಿಮೆ ಮಾಡಬೇಕು ಎಂದು ಸೂಚನ ನೀಡಿದರು.

“ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿರುವುದರಿಂದ ಹಗಲು ವೇಳೆಯೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಬೇಕು. ಉಷ್ಣ ವಿದ್ಯುತ್ ಮತ್ತು ಜಲ ವಿದ್ಯುತ್ ಸ್ಥಾವರಗಳಲ್ಲಿ ಸಾಧ್ಯವಾದಷ್ಟು ರಾತ್ರಿ ವೇಳೆಯ ಬಳಕೆಗೆ ವಿದ್ಯುತ್ ಉತ್ಪಾದಿಸಬೇಕು. ಆ ಮೂಲಕ ಬೇಡಿಕೆ ಮತ್ತು ಪೂರೈಕೆಯ ನಡುವೆ ಅಂತವಿಲ್ಲದಂತೆ ಎಚ್ಚರಿಕೆ ವಹಿಸಬೇಕು” ಎಂದರು.

ಇಂಧನ ಇಲಾಖೆ ಸರ್ಕಾರದ ಅಪರ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್, ಕೆಪಿಸಿಎಲ್ ನಿರ್ದೇಶಕ (ಹಣಕಾಸು) ಆರ್.ನಾಗರಾಜ್, ನಿರ್ದೇಶಕ (ತಾಂತ್ರಿಕ) ಎಸ್.ಕೃಷ್ಣಮೂರ್ತಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Tags: active voice passive voice in gujarati lectureall questions paper from english grammarall the tenses in gujaratiart in schoolsdgvcl paper solution 2020english grammar complete lecture in gujaratienglish grammar in gujaratienglish grammar in gujarati tricgeorge washington universitygujarati grammar complete lecture in gujaratimost imp in english grammarsupply chainthe covenant nationvidhyut sahayak paper solution 2020
Previous Post

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ:ಸಚಿವ ಕೆ.ಜೆ.ಜಾರ್ಜ್

Next Post

ಲೈಂಗಿಕ ದೌರ್ಜನ್ಯ ಸಂತ್ರಸ್ಥೆ ನೀಡಿದ ದೂರಿನ ಮೇರೆಗೆ ಡಿವೈಎಸ್‌ಪಿ ಬಂಧನ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಲೈಂಗಿಕ ದೌರ್ಜನ್ಯ  ಸಂತ್ರಸ್ಥೆ ನೀಡಿದ ದೂರಿನ ಮೇರೆಗೆ ಡಿವೈಎಸ್‌ಪಿ ಬಂಧನ

ಲೈಂಗಿಕ ದೌರ್ಜನ್ಯ ಸಂತ್ರಸ್ಥೆ ನೀಡಿದ ದೂರಿನ ಮೇರೆಗೆ ಡಿವೈಎಸ್‌ಪಿ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada