ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಮುಂದಿನ ಸಿಎಂ ಯಾರಾಗಬಹುದು ಎಂಬ ಚರ್ಚೆ ದೇಶಾದ್ಯಂತ ಚರ್ಚೆಯಾಗಿತ್ತು. ಇದಕ್ಕೆಲ್ಲ ನೆನ್ನೆ ಹೈಕಮಾಂಡ್ ತೆರೆ ಎಳೆದು ಬಸವರಾಜ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿತ್ತು.
ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿಯವರು ರಾಜ್ಯಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.






