• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೂತನ ಡಿಜಿಟಲ್ ಎಕ್ಸರೇ ಯಂತ್ರಕ್ಕೆ ಚಾಲನೆ.ಆರೋಗ್ಯವಂತ ಸಮಾಜಕ್ಕೆ ವೈದ್ಯರ ಸೇವೆ ಅಪಾರ ಶಾಸಕ ಹೆಚ್.ಟಿ.ಮಂಜು

ಪ್ರತಿಧ್ವನಿ by ಪ್ರತಿಧ್ವನಿ
October 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಕೆ.ಆರ್.ಪೇಟೆ:ಸಮುದಾಯ ಆರೋಗ್ಯ ಕೇಂದ್ರಗಳು ಚಿಕಿತ್ಸೆಗೆ ಬರುವ ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಒದಗಿಸುವ ಮೂಲಕ ಜನರ ಹೃದಯ ಗೆಲ್ಲುವಂತಿರಬೇಕು ಎಂದು ಶಾಸಕ ಹೆಚ್.ಟಿ ಮಂಜು ಹೇಳಿದರು.

ADVERTISEMENT

ತಾಲ್ಲೂಕಿನ ಬೂಕನಕೆರೆ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಹಾಗೂ ಆಸ್ಪತ್ರೆಯ ನೂತನ ಡಿಜಿಟಲ್ ಎಕ್ಸರೇ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದರು.ರಕ್ಷಾ ಸಮಿತಿಯವರು ಇಲ್ಲಿನ ಕೊರತೆಗಳನ್ನು ನೀಗಿಸುವಲ್ಲಿ ಮುತುವರ್ಜಿ ವಹಿಸಿ ಕೆಲಸ ಮಾಡಬೇಕು.ಆಸ್ಪತ್ರೆ ಹಾಗೂ ಸಮಾಜದ ನಡುವಿನ ಕೊಂಡಿಯಂತೆ ಕಾರ್ಯನಿರ್ವಹಿಸಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಆರೋಗ್ಯಕ್ಕೆ ಸಂಬಂಧಿಸಿದಂತೆ ಶಿಬಿರಗಳನ್ನು ಮಾಡಿ ಜನರಿಗೆ ಸೇವೆ ನೀಡಬೇಕು ಎಂದರು.

ಈ ಆಸ್ಪತ್ರೆಗೆ ಬರುವ ರೋಗಿಗಳು ಗ್ರಾಮೀಣ ಪ್ರದೇಶದ ಬಡ ಜನರು ಆಗಿದ್ದು ಇವರಿಗೆ ಸೂಕ್ತ ಚಿಕಿತ್ಸೆ ಮತ್ತು ಸ್ಪಂದನೆ ಮಾಡುವುದು ವೈದ್ಯರು ಮತ್ತು ಸಿಬ್ಬಂದಿಗಳ ಮೂಲ ಕರ್ತವ್ಯ.ಆಸ್ಪತ್ರೆಗೆ ಬರುವ ರೋಗಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಮತ್ತು ಔಷಧಿಗಳ ಉಚಿತ ವಿತರಣೆಗೆ ಮೊದಲ ಆದ್ಯತೆ ನೀಡಬೇಕು.ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಹಾಸಿಗೆಗಳು ಮತ್ತು ಅವುಗಳ ಮೇಲೆ ಹಾಕುವ ಬಟ್ಟೆಗಳ ಕಾಲ-ಕಾಲಕ್ಕೆ ಶುಚಿತ್ವ ಗೊಳಿಸಲು ಕ್ರಮ ಕೈಗೊಳ್ಳಲು ಗಮನ ಹರಿಸಬೇಕಾಗಿರುತ್ತದೆ.ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ನಿಗದಿತ ಸಮಯಕ್ಕೆ ಆಸ್ಪತ್ರೆಗೆ ಬಂದು ಕರ್ತವ್ಯ ನಿರ್ವಹಿಸಬೇಕು.ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸಮನ್ವಯದಿಂದ ಕೆಲಸ ನಿರ್ವಹಿಸಿ ಈ ಆಸ್ಪತ್ರೆ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿನ ಜನರಿಗೆ ಸಾಂಕ್ರಾಮಿಕ ರೋಗಗಳು ಪ್ರಾರಂಭವಾಗುವ ಹಂತವನ್ನು ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಅದಕ್ಕೆ ತ್ವರಿತ ಚಿಕಿತ್ಸೆ ನೀಡಲು ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಆದಷ್ಟು ಬೇಗ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಕಳಪೆ ಕಾಮಗಾರಿ ಗುತ್ತಿಗೆದಾರನ ವಿರುದ್ಧ ಸೂಕ್ತ ಕ್ರಮಕ್ಕೆ ಶಾಸಕರ ಸೂಚನೆ.

6.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬೂಕನಕೆರೆ ನೂತನ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಶಾಸಕ ಹೆಚ್.ಟಿ ಮಂಜು ಹಿಂದಿನ ಸರ್ಕಾರ ಸಾರ್ವಜನಿಕರಿಗೆ ಸದ್ಬಳಕೆ ಆಗುವ ನಿಟ್ಟಿನಲ್ಲಿ ಬಹುಕೋಟಿ ಅನುದಾನ ನೀಡಿದೆ ಆದರೆ ಗುತ್ತಿಗೆದಾರನ ಹಣ ಉಳಿತಾಯಕ್ಕಾಗಿ ಕಟ್ಟಡ ಸಂಪೂರ್ಣ ಕಳಪೆ ಅವೈಜ್ಞಾನಿಕ ಕಾಮಗಾರಿಯಿಂದ ಕೂಡಿದೆ ಸಂಬಂಧಪಟ್ಟ ಅಧಿಕಾರಿಗಳು ಈ ಕಾಮಗಾರಿಯ ಗುತ್ತಿಗೆದಾರನನ್ನ ಕಪ್ಪುಪಟ್ಟಿಗೆ ಸೇರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಗಂಭೀರವಾಗಿ ಸ್ಥಳದಲ್ಲಿದ್ದ ಇಂಜಿನಿಯರ್ ಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಹುಲ್ಲೆಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕುರುಬಹಳ್ಳಿ ನಾಗೇಶ್, ತಾಲೂಕು ವೈದ್ಯಾಧಿಕಾರಿ ಡಾ ಅಜಿತ್ ಕುಮಾರ್, ಬೂಕನಕೆರೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ: ಶ್ರೀನಿವಾಸ್ ಗೌಡ, ಹಿರಿಯ ವೈದ್ಯಾಧಿಕಾರಿ ಡಾ : ವೆಂಕಟೇಶ್, ದಂತ ವೈದ್ಯ ಡಾ : ಅರುಣ್ ಕುಮಾರ್,ಬೂಕನಕೆರೆ ಮಂಜುನಾಥ್, ಸೇರಿದಂತೆ ಉಪಸ್ಥಿತರಿದ್ದರು.

Tags: Administrative Medical Officer of Bukanakere Hospital Dr. Srinivas GowdaBukanakere Manjunath.Dentist Dr. Arun KumarFormer member of T.P.M. HullegowdaKurubahalli NageshMLA HT ManjuSenior Medical Officer Dr. VenkateshTaluk Medical Officer Dr. Ajith Kumar
Previous Post

ಮಾಜಿ ಸಿಎಂಗೆ ಮುನಿರತ್ನ ಹನಿಟ್ರ್ಯಾಪ್!;ಸುದ್ದಿಗೋಷ್ಠಿಯಲ್ಲಿ ಬಂಧಿತ ಶಾಸಕನ ವಿರುದ್ಧ ಸಂತ್ರಸ್ಥೆ ಆರೋಪ

Next Post

ಕಾಂಗ್ರೆಸ್‌ ಆತ್ಮಾವಲೋಕನದ ಸಮಯ ಮೀರುತ್ತಿದೆ

Related Posts

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..
Top Story

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

by ಪ್ರತಿಧ್ವನಿ
February 6, 2026
0

ವೈಭವ್ ಸೂರ್ಯವಂಶಿ (Vaibhav Suryavanshi) 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175ರನ್‌ಗಳ ಸಿಡಿಲಬ್ಬರದ ಶತಕ ಸಿಡಿಸಿ...

Read moreDetails
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Next Post
ಕಾಂಗ್ರೆಸ್‌ ಆತ್ಮಾವಲೋಕನದ ಸಮಯ ಮೀರುತ್ತಿದೆ

ಕಾಂಗ್ರೆಸ್‌ ಆತ್ಮಾವಲೋಕನದ ಸಮಯ ಮೀರುತ್ತಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada