• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

New State Government | ನೂತನ ರಾಜ್ಯ ಸರ್ಕಾರ, ಹೇಗಿದೆ ಭದ್ರತೆ..? ಟ್ರಾಫಿಕ್,​​​ ಕಾಂಗ್ರೆಸ್​ ಗ್ಯಾರಂಟಿ..!

ಕೃಷ್ಣ ಮಣಿ by ಕೃಷ್ಣ ಮಣಿ
May 20, 2023
in Top Story, ಇತರೆ / Others, ಇದೀಗ, ರಾಜಕೀಯ
0
New State Government | ನೂತನ ರಾಜ್ಯ ಸರ್ಕಾರ, ಹೇಗಿದೆ ಭದ್ರತೆ..? ಟ್ರಾಫಿಕ್,​​​ ಕಾಂಗ್ರೆಸ್​ ಗ್ಯಾರಂಟಿ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇವರ ಜೊತೆಗೆ ಸುಮಾರು 25 ಜನರು ಸಚಿವರಾಗಿ ಪ್ರಮಾಣ ಸ್ವೀಕಾರಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಕಲ ತಯಾರಿಗಳು ನಡೆದಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದು, ಎಂಟು ಜನ ಡಿಸಿಪಿಗಳ ನೇತೃತ್ವದಲ್ಲಿ 1500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಕಂಠೀರವ ಸ್ಟೇಡಿಯಂನ ಐದು ಗೇಟ್​​ಗಳ ಮೂಲಕ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದು, 1 ಗೇಟ್​​ನಲ್ಲಿ ವಿವಿಐಪಿ ಜನರು, 2 ಮತ್ತು 3ನೇ ಗೇಟ್​ನಲ್ಲಿ ವಿಐಪಿ ಜನರು ಇನ್ನುಳಿದ 4 ಮತ್ತು 5ನೇ ಗೇಟ್​​ನಲ್ಲಿ ಸಾರ್ವಜನಿಕರು ಒಳ ಪ್ರವೇಶ ಪಡೆಯಬಹುದು. ಇನ್ನು ಜನರಿಗೆ ಯಾವುದೇ ರೀತಿಯ ಪಾಸ್​ ಅವಶ್ಯಕತೆ ಇರುವುದಿಲ್ಲ. ಎಲ್ಲರೂ ಬನ್ನಿ ಎಂದು ಸ್ವತಃ ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್​ ಬಹಿರಂಗ ಆಹ್ವಾನ ನೀಡಿದ್ದಾರೆ.

ADVERTISEMENT

ಸ್ಟೇಜ್​ ಬಳಿ ತಯಾರಿ ಹೇಗಿದೆ..? CET ಪರಿಕ್ಷಾರ್ಥಿಗಳ ಕಥೆ..?

ಇಡೀ ವೇದಿಕೆಗೆ ಎಲ್​ಇಡಿ ಬ್ಯಾಕ್ ಗ್ರೌಂಡ್ ಹಾಕಲಾಗಿದೆ, ಸ್ಟೇಜ್ ಮತ್ತು ಸ್ಟೇಜ್​ನ ಮುಂಭಾಗ ರೆಡ್ ಕಾರ್ಪೆಟ್​ ವ್ಯವಸ್ಥೆ ಮಾಡಲಾಗಿದೆ. ಸ್ಟೇಜ್​ನ ಎಡಭಾಗ ಮತ್ತು ಬಲಭಾಗ ಇನ್ನೂರಕ್ಕೂ ಹೆಚ್ಚು ಸೀಟ್​ಗಳ ವ್ಯವಸ್ಥೆ ಮಾಡಲಾಗಿದೆ. ಅತಿಥಿಗಳು ಹಾಗು ಅವರ ಕುಟುಂಬಸ್ಥರು, ಆಪ್ತ ಸಹಾಯಕರಿಗೆ ಆಸನದ ವ್ಯವಸ್ಥೆ ಇರಲಿದೆ. ಕಂಠೀರವ ಸ್ಟೇಡಿಯಂನಲ್ಲಿ ಸುಮಾರು 35 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರೀಯ ನಾಯಕರು, ಬೇರೆ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಖಾಕಿ ಕೋಟೆಯನ್ನೇ ನಿರ್ಮಿಸಲಾಗಿದೆ. ಈ ನಡುವೆ ಕಂಠೀರವ ಸ್ಟೇಡಿಯಂ ಸುತ್ತಮುತ್ತ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆದಷ್ಟು ಬೇಗ ಪರೀಕ್ಷಾ ಕೇಂದ್ರ ಸೇರಿಕೊಳ್ಳುವಂತೆ ಸೂಚನೆ ಕೊಡಲಾಗಿದೆ. ಅಷ್ಟು ಮಾತ್ರವಲ್ಲದೆ ಒಂದು ಪರೀಕ್ಷೆ ಆದ ಬಳಿಕ ಪರೀಕ್ಷ ಕೇಂದ್ರದಲ್ಲೇ ಊಟದ ವ್ಯವಸ್ಥೆ ಮಾಡುವಂತೆಯೂ ಸೂಚನೆ ಕೊಡಲಾಗಿದೆ ಎಂದು ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್​ ತಿಳಿಸಿದ್ದಾರೆ.

ಟ್ರಾಫಿಕ್​ ನಿಯಂತ್ರಣಕ್ಕೆ ಪೊಲೀಸ್ರ ವ್ಯವಸ್ಥೆ ಏನು..?

ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಲಕ್ಷ ಲಕ್ಷ ಜನರು ಸೇರುವ ಹಿನ್ನೆಲೆಯಲ್ಲಿ ಬೆಂಗಳೂರು ಟ್ರಾಫಿಕ್​ ಪೊಲೀಸರು ಸಾಕಷ್ಟು ಮಾರ್ಗ ಬದಲಾವಣೆ ಮಾಡಿದ್ದಾರೆ. ಹಲಸೂರು ಮಾರ್ಗವಾಗಿ MG ರೋಡ್, ರಿಚ್ ಮಂಡ್ ಸರ್ಕಲ್​ ಮೂಲಕ ಕಾರ್ಪೊರೇಷನ್ ಕಡೆಗೆ ಸಂಚಾರ ಮಾಡುವ ವಾಹನಗಳು ಹಲಸೂರು ಲೇಕ್ ಮೂಲಕ ಶಿವಾಜಿನಗರ ತಲುಪಿ ಅಲ್ಲಿಂದ ವಿಧಾನಸೌಧ ಮಾರ್ಗವಾಗಿ ಮೆಜೆಸ್ಟಿಕ್ ತಲುಪಬೇಕು. ಇನ್ನು ಕೆ.ಆರ್​ ಮಾರ್ಕೆಟ್ ಕಡೆಗೆ ಬರುವ ವಾಹನಗಳು ರಿಚ್ಮಂಡ್ ಸರ್ಕಲ್​ನಿಂದ ಲಾಲ್ ಬಾಗ್ ಮಾರ್ಗದಲ್ಲಿ ಸಂಚರಿಸಿ ಮಾರ್ಕೆಟ್​​ ತಲುಪಬೇಕು. ಹಾಗು ಮೆಜೆಸ್ಟಿಕ್​ನಿಂದ ಕಾರ್ಪೊರೇಷನ್ ಕಡೆ​ಗೆ ಬರುವ ವಾಹನಗಳು ವಿಧಾನಸೌಧ ಮೂಲಕ ತಿಮ್ಮಯ್ಯ ರಸ್ತೆಗೆ ಬಂದು ಅಲ್ಲಿಂದ ಇನ್​ಫಾಂಟ್ರಿ ರಸ್ತೆ ಮೂಲಕ ಸಂಚಾರ ಮಾಡಬಹುದು. ಬೆಂಗಳೂರಿನ ಕೇಂದ್ರ ವಿಭಾಗದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ನಿರೀಕ್ಷೆ ಇದ್ದು, ಮೈಸೂರ್ ಬ್ಯಾಂಕ್ ಸರ್ಕಲ್, ರಿಚ್ಮಂಡ್ ರೋಡ್, ಟೌನ್ ಹಾಲ್ ರಸ್ತೆಯನ್ನು ಪೊಲೀಸ್ರು ನಿಯಂತ್ರಣಕ್ಕೆ ತೆಗೆದುಕೊಳ್ಳಲಿದ್ದಾರೆ. ಶನಿವಾರ ಮಧ್ಯಾಹ್ನದ ತನಕ ಈ ರಸ್ತೆಗಳಿಂದ ದೂರ ಇರುವುದು ಉತ್ತಮ.

ಕಾಂಗ್ರೆಸ್​ ಗ್ಯಾರಂಟಿ ಇಂದು ಸಿಕ್ಕೇ ಸಿಗುತ್ತಾ..? ಇಲ್ವಾ..?

ಈ ಬಗ್ಗೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್​ ನಾಯಕರು ಘೋಷಣೆ ಮಾಡಿದ್ದರು. ಮೊದಲ ಕ್ಯಾಬಿನೆಟ್​​ನಲ್ಲೇ ಕಾಂಗ್ರೆಸ್​​ನ 5 ಗ್ಯಾರಂಟಿಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ನಿನ್ನೆಯಷ್ಟೇ ಮಾತನಾಡಿರುವ ಡಿ.ಕೆ ಶಿವಕುಮಾರ್​, ನಾವು ಕೊಟ್ಟ ಮಾತು ಈಡೇರಿಸುತ್ತೇವೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ನಾನೂ ಸೇರಿ ಗ್ಯಾರಂಟಿ ಕೊಟ್ಟಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಅದನ್ನ ಜಾರಿ ಮಾಡ್ತೀವಿ ಎಂದಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ನಿಗದಿಯಾಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ಗಣರೊಂದಿಗೆ ಭೋಜನ ವ್ಯವಸ್ಥೆ ಇರಲಿದೆ. ಆ ನಂತರ ಸಂಪ್ರದಾಯದಂತೆ ಸಚಿಒವ ಸಂಪುಟ ಸಭೆ ನಡೆಯಲಿದೆ. ಆ ಬಳಿಕ ಮಾಧ್ಯಮಗೋಷ್ಠಿ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಸೇರಿದಂತೆ 25 ಜನ ಸಚಿವರ ತಂಡ, ರಾಜ್ಯದ ಜನರಿಗೆ ನೀಡಿರುವ 5 ಗ್ಯಾರಂಟಿಗಳುನ್ನು ಸಾಕಾರಗೊಳಿಸುತ್ತಾರೆ. ಆದರೆ ಒಂದಿಷ್ಟು ನಿಯಮಗಳನ್ನು ಹಾಕಬಹುದು. ಸಾಧ್ಯವಾದಷ್ಟು ಮಂದಿಗೆ ಈ ಯೋಜನೆ ಲಾಭ ಸಿಗುವುದಂತೂ ಖಚಿತ.

ಕೃಷ್ಣಮಣಿ

Tags: BengalorebengalorepoliceCongress PartyDKShivakumarkarantakacmMallikarjun Khargerahulgandhisiddaramaiahಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Karnataka cm Oath-Ttaking ; ನಾಳೆ ಸಿಎಂ, ಡಿಸಿಎಂ ಪ್ರಮಾಣವಚನ ; ಬೆಂಗಳೂರಿನಲ್ಲಿ ಸಂಚಾರ ಬದಲಾವಣೆ

Next Post

Bajrangi didn’t come to BJP’s help | ಬಿಜೆಪಿ ಸಹಾಯಕ್ಕೆ ಭಜರಂಗಿ ಬರಲಿಲ್ಲ, ಮುಂದೆ ​ಶ್ರೀರಾಮನೂ ಬರಲ್ವಾ..!?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
Bajrangi didn’t come to BJP’s help | ಬಿಜೆಪಿ ಸಹಾಯಕ್ಕೆ ಭಜರಂಗಿ ಬರಲಿಲ್ಲ, ಮುಂದೆ ​ಶ್ರೀರಾಮನೂ ಬರಲ್ವಾ..!?

Bajrangi didn't come to BJP's help | ಬಿಜೆಪಿ ಸಹಾಯಕ್ಕೆ ಭಜರಂಗಿ ಬರಲಿಲ್ಲ, ಮುಂದೆ ​ಶ್ರೀರಾಮನೂ ಬರಲ್ವಾ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada