• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಯೋಗಿ ಸಂಪುಟ : ಜಾತಿ ಲೆಕ್ಕಾಚಾರದಲ್ಲಿ ಡಿಸಿಎಂ ಪಟ್ಟ ಉಳಿಸಿಕೊಂಡ ಕೇಶವಪ್ರಸಾದ್ ಮೌರ್ಯ

Shivakumar A by Shivakumar A
March 26, 2022
in ದೇಶ
0
ಯೋಗಿ ಸಂಪುಟ : ಜಾತಿ ಲೆಕ್ಕಾಚಾರದಲ್ಲಿ ಡಿಸಿಎಂ ಪಟ್ಟ ಉಳಿಸಿಕೊಂಡ ಕೇಶವಪ್ರಸಾದ್ ಮೌರ್ಯ
Share on WhatsAppShare on FacebookShare on Telegram

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಸ್ಥಾನವನ್ನೂ ಉಳಿಸಿಕೊಳ್ಳಲು ಅಶಕ್ತರಾದ ಕೇಶವಪ್ರಸಾದ್ ಮೌರ್ಯ ಅವರನ್ನು ಬಿಜೆಪಿ ಹೈಕಮಾಂಡ್, ಉತ್ತರ ಪ್ರದೇಶ ಉಪಮುಖ್ಯಮಂತ್ರಿಯಾಗಿ ಮುಂದುವರೆಸಿದೆ. ಯೋಗಿ ನೇತೃತ್ವದ ಸಚಿವ ಸಂಪುಟದಲ್ಲಿ ಮೌರ್ಯ ಅವರಿಗೆ ಸ್ಥಾನ ನೀಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಬಿಸಿ ಮತಗಳನ್ನು ಸೆಳೆಯುವ ತಂತ್ರ ಬುಜೆಪಿ ಹೈಕಮಾಂಡಿದ್ದು.

ADVERTISEMENT

ಅಪ್ನಾ ದಳ (ಕಮೇರವಾಡಿ) ಪಕ್ಷದ ಪಲ್ಲವಿ ಪಟೇಲ್ ಅವರ ವಿರುದ್ದ ಕೇಶವಪ್ರಸಾದ್ ಮೌರ್ಯ ಚುನಾವಣೆಯನ್ನು ಸೋತಿದ್ದರು. ಈ ಕಾರಣಕ್ಕೆ ಬಹುತೇಕ ಬಿಜೆಪಿ ನಾಯಕರು, ಕೇಶವ ಪ್ರಸಾದ್ ಮೌರ್ಯ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಅವರನ್ನು ಸಂಸತ್ತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದ್ದರು. ಆದರೆ, ಅವರ ಆಗ್ರಹವನ್ನು ಸಾರಸಗಟಾಗಿ ತಿರಸ್ಕರಿಸಿರುವ ಮೌರ್ಯ, ತಾನು ರಾಜ್ಯ ರಾಜಕಾರಣದಿಲ್ಲಿಯೇ ಮುಂದುವರೆಯುವುದಾಗಿ ಹೇಳಿದ್ದಾರೆ.

ಯಾದವಯೇತರ ಮತ ಬ್ಯಾಂಕ್ ಸೆಳೆಯಲು ಸಮಾಜವಾದಿ ಪಕ್ಷ ತೀವ್ರವಾಗಿ ಪ್ರಯತ್ನ ಪಡುತ್ತಿದೆ. ಬಿಜೆಪಿಯ ಒಬಿಸಿ ಮುಖಂಡ ಎಂದೇ ಪ್ರಖ‌್ಯಾತರಾಗಿರುವ ಮೌರ್ಯ ಅವರು, ಈ ಮತಬ್ಯಾಂಕ್ ಅನ್ನು ಬಿಜೆಪಿಯೊಂದಿಗೆ ಉಳಿಸಿಕೊಳ್ಳಲು ಸಹಕಾರಿ ಎಂದು ಹೈಕಮಾಂಡ್ ಅರಿತಿದೆ. ಒಂದು ವೇಳೆ, ಮುಂದಿನ ಲೋಕಸಭಾ ಚುನಾವಣೆವರೆಗೆ ಮೌರ್ಯ ಅವರು ರಾಜಕಾರಣದ ಹಿನ್ನೆಲೆಗೆ ಸರಿದುಬಿಟ್ಟರೆ, ಒಬಿಸಿ ಮತಗಳು ಕೈತಪ್ಪುವ ಎಲ್ಲಾ ಸಾಧ್ಯತೆಗಳಿವೆ. ಹೀಗಾಗಿ, ಒಬಿಸಿ ನಾಯಕನ ಮುಖವನ್ನು ಮತದಾರರು ಪ್ರತಿದಿನ ಗಮನಿಸುವಂತೆ ಅವರನ್ನು ಡಿಸಿಎಂ ಆಗಿ ಮುಂದುವರೆಸಲಾಗಿದೆ.

ಉತ್ತರ ಪ್ರದೇಶದಲ್ಲಿ ಅತ್ಯಂತ ಪ್ರಮುಖವಾಗಿರುವ ಕಚ್ಚಿ, ಕುಶ್ವಾಹ, ಶಕ್ಯ, ಮೌರ್ಯ, ಸೈನಿ, ಮಾಲಿ ಸಮುದಾಯಗಳನ್ನು ಕೇಶವ ಪ್ರಸಾದ್ ಅವರು ಪ್ರತಿನಿಧಿಸುತ್ತಾರೆ. ಈ ಸಮುದಾಯಗಳು ಒಟ್ಟು ಒಬಿಸಿಯ ಶೇ. 6.69ರಷ್ಟು ಮತಗಳನ್ನು ಹೊಂದಿವೆ. ಸಂಪೂರ್ಣ ರಾಜ್ಯದಲ್ಲಿ ಶೇ. 43.13ರಷ್ಟು ಜನರು ಒಬಿಸಿ ಸಮುದಾಯಗಳಿಗೆ ಸೇರುತ್ತಾರೆ. ಅದರಲ್ಲಿಯೂ ಗ್ರಾಮೀಣ ಭಾಗದಲ್ಲಿ ಈ ಸಂಖ್ಯೆ ಶೇ. 54.05ರಷ್ಟಿದೆ ಎಂದು 2001ರ ಸಾಮಾಜಿಕ ನ್ಯಾಯ ಸಮಿತಿ ವರದಿ ತಿಳಿಸಿದೆ.

ಬಿಜೆಪಿಗೆ ಕುರ್ಮಿ ಸಮುದಾಯವನ್ನು ಪ್ರತಿನಿಧಿಸುವ ಸಮರ್ಪಕ ನಾಯಕ ಇನ್ನೂ ಲಭಿಸಿಲ್ಲ. ಈ ಸಮುದಾಯವು ಈಗ ಸಮಾಜವಾದಿ ಪಕ್ಷದ ಪ್ರಮುಖ ಮತಬ್ಯಾಂಕ್ ಆಗಿದೆ. ಯಾದವರನ್ನು ಹೊರತುಪಡಿಸಿದರೆ, ಕುರ್ಮಿ ಸಮುದಾಯವು ಒಬಿಸಿ ಅಡಿ ಬರುವ ಎರಡನೇ ಅತಿ ದೊಡ್ಡ ಸಮುದಾಯ. ಈ ಕಾರಣದಿಂದಾಗಿಯೇ, ಹಿಂದಿನ ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆಲವರು ಈ ಬಾರಿ ಎಸ್.ಪಿ. ಅಭ್ಯರ್ಥಿ ಎದುರು ಸೋಲನ್ನಪ್ಪಿದ್ದಾರೆ. ಇವರಲ್ಲಿ ಕೇಶವಪ್ರಸಾದ್ ಮೌರ್ಯ ಕೂಡಾ ಒಬ್ಬರು.

ಚುನಾವಣೆಗೂ ಮೊದಲೇ ಬಿಜೆಪಿ ತೊರೆದಿದ್ದ ಕೇಶವಪ್ರಸಾದ್ ಮೌರ್ಯ ಆಪ್ತರಾದ ಸ್ವಾಮಿಪ್ರಸಾದ್ ಮೌರ್ಯ, ಕೇಶವಪ್ರಸಾದರನ್ನು ಅಸಹಾಯಕ ನಾಯಕ ಎಂದು ಕರೆದಿದ್ದರು. ಇನ್ನು, ಬಿಜೆಪಿಯ ಮಿತ್ರಪಕ್ಷವಾದ ಅಪ್ನಾ ದಳ (ಸೋನೆಲಾಲ್)ನ ಮತದಾರರು ಕೂಡಾ ಬಿಜೆಪಿಗೆ ಸಹಕಾರ ನೀಡಲಿಲ್ಲ. ಇದು ಕೇಶವಪ್ರಸಾದ್ ಮೌರ್ಯ ಅವರಿಗೆ ಮುಳುವಾಗಿ ಪರಿಣಮಿಸಿತು.

ಇಷ್ಟಾದರೂ, ಕೇಶವಪ್ರಸಾಧ್ ಮೌರ್ಯ ಅವರು ತಮ್ಮ ಡಿಸಿಎಂ ಹುದ್ದೆಯನ್ನು ಜಾತಿ ಲೆಕ್ಕಾಚಾರದ ಆಧಾರದಲ್ಲಿ ಉಳಿಸಿಕೊಂಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯ ವೇಳೆ, ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತದೆಯೋ, ಅಥವಾ ರಾಜ್ಯ ರಾಜಕಾರಣದಲ್ಲಿಯೇಅವರು ಮುಂದುವರೆಯುತ್ತಾರೆಯೋ ಎಂದು ನೋಡಬೇಕಿದೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ನಾನು ಬರೆದಿರುವ ‘ಬಾಂಬೆ ಡೇಸ್’ ಪುಸ್ತಕ ಬಿಡುಗಡೆ ಮಾಡದಂತೆ ಒತ್ತಡ ಬರುತ್ತಿದೆ : ಎಚ್. ವಿಶ್ವನಾಥ್

Next Post

ಯುಗಾದಿ ಹೊತ್ತಿಗೆ ಗ್ರಾಹಕರ ಪಾಲಿಗೆ ಭಾರಿ ‘ಕಹಿ’ಯಾಗಲಿರುವ ಜೀವರಕ್ಷಕ ಔಷಧಗಳು

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಯುಗಾದಿ ಹೊತ್ತಿಗೆ ಗ್ರಾಹಕರ ಪಾಲಿಗೆ ಭಾರಿ ‘ಕಹಿ’ಯಾಗಲಿರುವ ಜೀವರಕ್ಷಕ ಔಷಧಗಳು

ಯುಗಾದಿ ಹೊತ್ತಿಗೆ ಗ್ರಾಹಕರ ಪಾಲಿಗೆ ಭಾರಿ ‘ಕಹಿ’ಯಾಗಲಿರುವ ಜೀವರಕ್ಷಕ ಔಷಧಗಳು

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada