ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ (Mansoon) ಎಂದು ರಾಜ್ಯ ಹವಾಮಾನ ಇಲಾಖೆ (weather forecasting) ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ,ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ (orange alert) ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.
ಅಲ್ಲದೇ ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲೂ (Bangalore) ಕೂಡ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಸೂಚಿಸಿದೆ. ಹೀಗಾಗಿ ಬೆಂಗಳೂರು ಮಳೆಗೆ ಸಿದ್ಧವಾಗಬೇಕಿದ್ದು, ಇಲ್ಲವಾದ್ರೆ ಇನ್ನಿಲ್ಲದ ತಾಪತ್ರೆಯ ಎದುರಿಸಬೇಕಾಗಿದೆ.