
ದೊಡ್ಡಬಳ್ಳಾಪುರ: 2023ರ ವಿಧಾನಸಭಾ ಚುನಾವಣಾ ಸಮಯದಲ್ಲಿ ಪೇ ಸಿಎಂ ಎಂಬ ಕ್ಯಾಂಪೇನ್ ಮಾಡಿದ್ದರು. ಬಹಳ ಘಂಟಾಘೋಷವಾಗಿ ಇಡೀ ರಾಜ್ಯಕ್ಕೆ ಮನ ಮುಟ್ಟುವಂತೆ ಕ್ಯಾಂಪೇನ್ ಮಾಡಿದ್ದರು. ಭ್ರಷ್ಟಾಚಾರವನ್ನ ಸಂಪೂರ್ಣವಾಗಿ ಹೋಗಲಾಡಿಸುತ್ತೇವೆ ಎಂದು ಸಿಎಂ, ಡಿಸಿಎಂ ಶಪಥ ಮಾಡಿದ್ದರು. ಕರ್ನಾಟಕವನ್ನು ಅನೇಕ ನಾಯಕರು, ಪಕ್ಷಗಳು ಆಳ್ವಿಕೆ ಮಾಡಿವೆ. ಆದರೆ ಈ ಸರಕಾರ ಪ್ರತಿನಿತ್ಯ ಹಗರಣದಲ್ಲಿ ಮುಳುಗಿದೆ. ರಾಜ್ಯದಲ್ಲಿ ನೇರವಾಗಿ ಸಿಎಂ ಅವರೇ ಭ್ರಷ್ಟಾಚಾರದಲ್ಲಿ ಸಿಲುಕಿರುವುದನ್ನು ನೋಡಿದ್ದೀರಿ ಎಂದಿದ್ದಾರೆ.
ಹಲವು ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಆ ಹಣವನ್ನ ಪಕ್ಕದ ರಾಜ್ಯಗಳ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಇಂಥ ಕೀಳು ಸರಕಾರವನ್ನು ಇದೇ ಮೊದಲ ಬಾರಿಗೆ ನೋಡಿರುವುದು. ಪ್ರಿಯಾಂಕ್ ಖರ್ಗೆ ಪೆನ್ ಡ್ರೈವ್ ಬಗ್ಗೆ ಪ್ರಶ್ನೆ ಮಾಡಿದ ವಿಚಾರವಾಗಿ ಮಾತನಾಡಿ, ಬೇರೆ ಪೆನ್ ಡ್ರೈವ್ನ ಯಾವ ಒಬ್ಬ ಮಹಾನುಭಾವ ಬಿಡುಗಡೆ ಮಾಡಿದ ಎಂದು ಎಲ್ಲರಿಗೂ ಗೊತ್ತಿದೆ. ಹೆಣ್ಣು ಮಕ್ಕಳ ಮಾನವನ್ನ ಸಾರ್ವಜನಿಕವಾಗಿ ಕಳಯುವಂತ ಪ್ರಯತ್ನ ಆಗಿದೆ. ಕನಿಷ್ಠ ಪಕ್ಷ ಹೆಣ್ಣು ಮಕ್ಕಳನ್ನು ಬ್ಲರ್ ಮಾಡಿ ಬಿಡುಗಡೆ ಮಾಡಬೇಕು ಎಂಬ ಪರಿಜ್ಞಾನ ಇಲ್ಲದೇ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಜನ ಎಲ್ಲವನ್ನು ಗಮನಿಸುತ್ತಾರೆ. ಮುಂದಿನ ದಿನಗಳಲ್ಲಿ ಜನನೇ ಪಾಠ ಕಲಿಸುತ್ತಾರೆ. ಅಲ್ಲಿಯವರೆಗು ನಾವು ಕಾಯಬೇಕು ಅಷ್ಟೆ ಎಂದಿದ್ದಾರೆ. ಇನ್ನು ನಿಖಿಲ್ ಸೋಲಿನ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೇಂದ್ರದ ಸಚಿವರಾಗಿ ಇತ್ತೀಚಿಗೆ ಪಾರ್ಲಿಮೆಂಟ್ ಸೆಷನ್ನಲ್ಲಿ ಬಹಳ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬೇಕು, ಉದ್ಯೋಗ, ಕೈಗಾರಿಕೆ ತರಬೇಕು ಎಂದು ಕೆಲಸ ಮಾಡುತ್ತಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಕುಸಿದಿಲ್ಲ ಎನ್ನುವ ಮೂಲಕ