• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಕುಟುಂಬದ ಭೂಮಿ ವಿವಾದಕ್ಕೆ ನಿಖಿಲ್ ಉತ್ತರ; ಆಸ್ತಿ ವಿವರ ಬಹಿರಂಗ

ಪ್ರತಿಧ್ವನಿ by ಪ್ರತಿಧ್ವನಿ
June 21, 2026
in Top Story
0
ಅಂತರರಾಷ್ಟ್ರೀಯ ಯೋಗ ದಿನ: ಜೈಲಿನಲ್ಲಿ ಯೋಗ ಮಾಡಿದ ನಟ ದರ್ಶನ್
Share on WhatsAppShare on FacebookShare on Telegram

ಜೆಡಿಎಸ್ ಹಮ್ಮಿಕೊಂಡಿರುವ ‘ನಮ್ಮ ಭೂಮಿ, ನಮ್ಮ ಹಕ್ಕು’ ಪಾದಯಾತ್ರೆಯ ವೇಳೆ ಬಿಡದಿಯಲ್ಲಿ ಮಾತನಾಡಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದೇ ವೇಳೆ ತಮ್ಮ ಕುಟುಂಬದ ಆಸ್ತಿ ಹಾಗೂ ರೈತರಿಗಾಗಿ ರೂಪಿಸಿಕೊಂಡಿದ್ದ ಯೋಜನೆಗಳ ಕುರಿತು ಮುಕ್ತವಾಗಿ ಮಾತನಾಡಿದರು.ಕುಮಾರಸ್ವಾಮಿ ಕುಟುಂಬದ ಭೂಮಿ ಕುರಿತು ಕೇಳಿಬಂದ ಆರೋಪಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, “ನನ್ನ ತಾಯಿ ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿ 27 ಎಕರೆ ಮತ್ತು ನನ್ನ ಹೆಸರಿನಲ್ಲಿ 5 ಎಕರೆ ಜಮೀನಿದೆ. ಇದು ಸತ್ಯ. ಆದರೆ ನಮ್ಮ ಬಳಿ ಜಮೀನು ಇದೆ ಎಂಬ ಕಾರಣಕ್ಕೆ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸುತ್ತಿಲ್ಲ. ಇದು ಸಂಪೂರ್ಣ ಕೃಷಿ ಭೂಮಿಯಾಗಿದ್ದು, ನಾವು ಯಾವುದೇ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಲ್ಲ” ಎಂದು ಸ್ಪಷ್ಟಪಡಿಸಿದರು.

ADVERTISEMENT
UT Khader on Siddaramaiah : ಈ ಐತಿಹಾಸಿಕ ಕಾರ್ಯಕ್ರಮ ಮೋದಿ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ..! #pmmodi

ಬಿಡದಿಯ ರೈತರ ಹಿತದೃಷ್ಟಿಯಿಂದ ಸರ್ಕಾರ ಟೌನ್‌ಶಿಪ್ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದ ಅವರು, ಕೋವಿಡ್ ಅವಧಿಯಲ್ಲಿ ರೈತರಿಗೆ ನೆರವಾಗುವ ಉದ್ದೇಶದಿಂದ ತಮ್ಮ ಜಮೀನಿನಲ್ಲಿ ಡೈರಿ ಸ್ಥಾಪಿಸುವ ಯೋಜನೆ ರೂಪಿಸಲಾಗಿತ್ತು ಎಂದು ತಿಳಿಸಿದರು.”ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಉದ್ಯೋಗ ಹಾಗೂ ಆದಾಯದ ಮೂಲ ಸೃಷ್ಟಿಸುವ ನಿಟ್ಟಿನಲ್ಲಿ ಡೈರಿ ಆರಂಭಿಸುವ ನಿರ್ಧಾರ ಮಾಡಿದ್ದೆವು. ಆದರೆ ಆ ಸಮಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಮೇಲಿದ್ದ ರಾಜಕೀಯ ಒತ್ತಡಗಳಿಂದಾಗಿ ಆ ಯೋಜನೆ ಪೂರ್ಣಗೊಳ್ಳಲಿಲ್ಲ” ಎಂದು ಹೇಳಿದರು.

Ramesh katti : ರಾಜಕೀಯದಲ್ಲಿ ಸಂಚಲನ ಮೂಡಿಸಿದ ರಮೇಶ್ ಕತ್ತಿ..! #satishjarkiholi #congress #bjp #pratidhvani

ಡೈರಿ ಯೋಜನೆಗಾಗಿ ಅಗತ್ಯ ಯಂತ್ರೋಪಕರಣಗಳನ್ನು ಈಗಾಗಲೇ ಖರೀದಿಸಿ ಇಟ್ಟಿದ್ದೇವೆ ಎಂದು ಹೇಳಿದ ನಿಖಿಲ್, “ನಮ್ಮ ಪ್ರಾಮಾಣಿಕತೆ ಬಗ್ಗೆ ಅನುಮಾನವಿದ್ದರೆ ಯಾರಾದರೂ ಬಂದು ಪರಿಶೀಲಿಸಬಹುದು” ಎಂದು ಸವಾಲು ಹಾಕಿದರು.ಬಿಡದಿ ಟೌನ್‌ಶಿಪ್ ಯೋಜನೆಯ ಒಟ್ಟು ವೆಚ್ಚ ಸುಮಾರು ₹18 ಸಾವಿರ ಕೋಟಿ ಎಂದು ಹೇಳಲಾಗುತ್ತಿದ್ದು, ರೈತರ ಜಮೀನು ಪಡೆದು ₹33 ಸಾವಿರ ಕೋಟಿ ಲಾಭ ಗಳಿಸುವ ಉದ್ದೇಶ ಇದರ ಹಿಂದೆ ಇದೆ ಎಂಬ ಆರೋಪವನ್ನೂ ಅವರು ಮಾಡಿದರು. “ಈ ಯೋಜನೆಯಿಂದ ನಿಜವಾಗಿ ಯಾರಿಗೆ ಲಾಭವಾಗಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು” ಎಂದು ಪ್ರಶ್ನಿಸಿದರು.

 

ಕೃಷಿ ಭೂಮಿಯನ್ನು ನಾಶಪಡಿಸಿ ಟೌನ್‌ಶಿಪ್ ನಿರ್ಮಿಸುವುದರಿಂದ ಸ್ಥಳೀಯ ರೈತರಿಗೆ ಅನ್ಯಾಯವಾಗಲಿದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಸ್ಪಷ್ಟ ಸಂದೇಶ ನೀಡಿದರು.

Tags: #BidadiTownship#FarmerRights#hdkumaraswamy#jds#KannadaNews#KarnatakaPolitics#LandIssue#NammaBhoomiNammaHakku#Nikhilkumaraswamy#politicalnews#TownshipProjectanithakumaraswamyBidadiFarmerskarnatakanewspratidavani
Previous Post

ನಿಫ್ಟಿ-ಸೆನ್ಸೆಕ್ಸ್‌ಗೆ ಸೋಮವಾರದ ಅಗ್ನಿಪರೀಕ್ಷೆ; ಏರಿಕೆಯಾಗುತ್ತಾ ಅಥವಾ ಕುಸಿತವಾಗುತ್ತಾ?

Next Post

“ಯೂಸ್‌ಲೆಸ್ ಫೆಲೋಸ್!” ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
Next Post
“ಯೂಸ್‌ಲೆಸ್ ಫೆಲೋಸ್!” ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

"ಯೂಸ್‌ಲೆಸ್ ಫೆಲೋಸ್!" ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada