![](https://pratidhvani.com/wp-content/uploads/2024/06/FB_IMG_1717748883095-821x1024.jpg)
JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೊಡ್ಡ ಸ್ಟೇಟ್ಮೆಂಟ್ ಮಾಡಿದ್ದಾರೆ .ಇನ್ಮುಂದೆ ಸಿನಿಮಾ ಮಾಡಲ್ಲ . 247 ರಾಜಕಾರಣ ಅನ್ನೋದ್ರ ಮೂಲಕ ಸಿನಿ ಪ್ರೇಕ್ಷಕರಿಗೆ ದೊಡ್ಡ ಶಾಕ್ ನೀಡಿದ್ದಾರೆ . ಮಂಡ್ಯದಲ್ಲಿ ಮಾತಾಡಿರೋ ನಿಖಿಲ್ ಕುಮಾರಸ್ವಾಮಿ, ನಾನು ಈಗ 247 ರಾಜಕಾರಣಿ. ಇನ್ಮುಂದೆ ಸಿನಿಮಾ ಮಾಡೋದನ್ನು ನಾನು ಬಂದ್ ಮಾಡಿದ್ದೇನೆ ಎಂದಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜೆಡಿಎಸ್ ಮಂಡ್ಯ, ಕೋಲಾರ ಕ್ಷೇತ್ರವನ್ನು ಗೆದ್ದು ಬೀಗಿದೆ.
![](https://pratidhvani.com/wp-content/uploads/2024/06/FB_IMG_1717748870146.jpg)
ಈ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರಸ್ವಾಮಿ ಅವರು ನಾನು ಇನ್ನು ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ. ನಾನು ಇನ್ನು ಫುಲ್ ಟೈಮ್ ರಾಜಕಾರಣಿ ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಸಿನಿಮಾ ಮಾಡೋದು ಬಂದ್ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿರುವ ನಿಖಿಲ್ ಕುಮಾರಸ್ವಾಮಿ ಅವರು, 2019ರ ನನ್ನ ಸೋಲು ಸೋಲಾಗಿರಲಿಲ್ಲ. ನಮ್ಮಲ್ಲಾದ ತಪ್ಪುಗಳಿಂದ ಹಿನ್ನಡೆ ಆಯಿತು. ಮಂಡ್ಯ ಜನ ನನಗೆ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಕುಮಾರಣ್ಣ ಸಿಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ. ಕುಮಾರಣ್ಣ ಸ್ಪರ್ಧೆಗೆ ಕಾರ್ಯಕರ್ತರ ಅಪೇಕ್ಷೆ ಇತ್ತು. ಮಹಿಳೆಯರು, ರೈತರು, ಹಿರಿಯರು ಎಲ್ಲಾ ವರ್ಗದವರು ಕುಮಾರಣ್ಣ ಅವ್ರನ್ನ ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ಮುಂದಿನ 5 ವರ್ಷ ಮಂಡ್ಯ ಸಂಸದರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಕುಮಾರಣ್ಣರ ಮೇಲೆ ಇಟ್ಟಿರುವ ಗೌರವ ಪ್ರೀತಿ, ವಿಶ್ವಾಸ ಉಳಿಸಿಕೊಳ್ತೀವಿ. ಕಾಂಗ್ರೆಸ್ಸಿಗರ ಟೀಕೆಗಳಿಗೆ ಮಂಡ್ಯ ಜನ ಉತ್ತರ ಕೊಟ್ಟಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.