• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!

Shivakumar by Shivakumar
July 21, 2021
in ಕರ್ನಾಟಕ, ದೇಶ, ರಾಜಕೀಯ
0
ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!
Share on WhatsAppShare on FacebookShare on Telegram

“ದೇಶದಲ್ಲಿ ಕರೊನಾ ಎರಡನೇ ಅಲೆಯಲ್ಲಿಆಮ್ಲಜನಕ ಕೊರತೆಯಿಂದ ಒಂದೇ ಒಂದು ಸಾವು ಸಂಭವಿಸಿಲ್ಲ” – ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ನೀಡಿದ ಆಘಾತಕಾರಿ ಹೇಳಿಕೆ.

ADVERTISEMENT

ದೇಶದಲ್ಲಿ ಕಳೆದ ಏಪ್ರಿಲ್-ಮೇ ಅವಧಿಯಲ್ಲಿ ಕರೋನಾ ಎರಡನೇ ಅಲೆ ಭೀಕರ ಸಾವು-ನೋವುಗಳ ರುದ್ರನರ್ತನ ನಡೆಯುತ್ತಿರುವಾಗ ದೇಶದ ಉದ್ದಗಲಕ್ಕೆ ಆಮ್ಲಜನಕ ಕೊರತೆಯಿಂದ, ಸಕಾಲದಲ್ಲಿ ಜೀವವಾಯು ಲಭ್ಯವಾಗದೆ ಲಕ್ಷಾಂತರ ಮಂದಿ ಸಾವು ಕಂಡಿದ್ದರು. ಜನ ಹಾಗೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಗದೆ ಸಾವು ಕಾಣುತ್ತಿರುವುದನ್ನು ರೋಗಿಗಳ ಸಂಬಂಧಿಕರು, ಆಸ್ಪತ್ರೆಯ ವೈದ್ಯರು, ಆಸ್ಪತ್ರೆಗಳ ಆಡಳಿತ ಮಂಡಳಿಗಳು, ಮಾಧ್ಯಮಗಳು ಮತ್ತು ಬಹುತೇಕ ರಾಜ್ಯ ಸರ್ಕಾರಗಳು ಕೂಡ ವರದಿ ಮಾಡಿದ್ದವು. ಜನರ ಜೀವ ಉಳಿಸುವ ನಿಟ್ಟಿನಲ್ಲಿ ಸಕಾಲದಲ್ಲಿ ಅಗತ್ಯ ಪ್ರಮಾಣದ ಆಮ್ಲಜನಕ ಸರಬರಾಜು ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ಮತ್ತು ಅಸಹಾಯಕತೆಯ ಮಾತುಗಳು ಈ ಎಲ್ಲಾ ವಲಯದಿಂದ ಕೇಳಿಬಂದಿದ್ದವು.

ಆ ಹಿನ್ನೆಲೆಯಲ್ಲಿ ಸ್ವಯಂ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ನ್ಯಾಯಮೂರ್ತಿಗಳ ನೇತೃತ್ವದ ಕಾರ್ಯಪಡೆ ರಚಿಸಿ ಇಡೀ ಅವ್ಯವಸ್ಥೆಯನ್ನು ಸರಿಪಡಿಸುವ ಯತ್ನ ಮಾಡಿತ್ತು ಮತ್ತು ಆಮ್ಲಜನಕ ವ್ಯವಸ್ಥೆ ಮಾಡುವಲ್ಲಿ ಮೈಮರೆತ, ಕರ್ತವ್ಯಲೋಪ ಎಸಗಿದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಚಾಟಿ ಬೀಸಿತ್ತು. ಪ್ರತಿ ದಿನವೂ ಆಮ್ಲಜನಕ, ಆಸ್ಪತ್ರೆ ಹಾಸಿಗೆ, ಔಷಧಿ, ಚಿಕಿತ್ಸೆ ವಿಷಯದಲ್ಲಿ ನಿರಂತರ ವಿಚಾರಣೆ ಮತ್ತು ಮೇಲ್ವಿಚಾರಣೆಯ ಮೂಲಕ ಸರ್ಕಾರದ ಜುಟ್ಟು ಹಿಡಿದು ಜನರ ಜೀವ ಉಳಿಸುವ ಕೆಲಸ ಮಾಡಿತ್ತು.

ಆದರೆ, ಜನರ ಕಣ್ಣೆದುರಲ್ಲೇ ನಡೆದ ಆ ಎಲ್ಲವೂ ಕನಸು ಎಂಬಂತೆ ಇದೀಗ ಪ್ರಧಾನಿ ಮೋದಿಯವರ ಸರ್ಕಾರ ದೇಶದ ಸಂಸತ್ತಿನಲ್ಲಿ ಇಡೀ ದೇಶದಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಸತ್ಯದ ತಲೆಮೇಲೆ ಹೊಡೆದಂತಹ ಸುಳ್ಳು ಹೇಳಿದೆ! ಈ ಸುಳ್ಳು ಕೇಳಿ ದೇಶದ ಜನ ಬೆಚ್ಚಿಬಿದ್ದಿದ್ದಾರೆ.

ಇಂತಹ ಹಸೀ ಸುಳ್ಳನ್ನು ಮಂಗಳವಾರ ಕೇಂದ್ರ ಆರೋಗ್ಯ ಖಾತೆ ಕ್ಯಾಬಿನೆಟ್ ದರ್ಜೆ ಸಚಿವ ಮನಸುಖ್ ಮಾಂಡವೀಯ ಮತ್ತು ರಾಜ್ಯಖಾತೆ ಸಚಿವ ಭಾರತಿ ಪ್ರವೀಣ್ ಪವಾರ್ ಇಬ್ಬರೂ ಹೇಳಿದ್ದಾರೆ. ಒಬ್ಬರು ರಾಜ್ಯಸಭೆಯಲ್ಲಿ ಹೇಳಿದ್ದರೆ, ಮತ್ತೊಬ್ಬರು ಲೋಕಸಭೆಯಲ್ಲಿ ಹೇಳಿದ್ದಾರೆ. ಆ ಸುಳ್ಳಿಗೆ ಅವರು ನೀಡಿದ ಸಮರ್ಥನೆ ಆರೋಗ್ಯ ವಿಷಯ ರಾಜ್ಯಗಳ ವ್ಯಾಪ್ತಿಗೆ ಸೇರುತ್ತದೆ. ಹಾಗಾಗಿ ಸಾವುಗಳ ಬಗ್ಗೆ ಮಾಹಿತಿ ನೀಡಬೇಕಾದದ್ದು ರಾಜ್ಯಗಳ ಹೊಣೆ. ಆದರೆ, ಈವರೆಗೆ ಯಾವುದೇ ರಾಜ್ಯವೂ ನಿರ್ದಿಷ್ಟವಾಗಿ ಆಮ್ಲಜನಕ ಕೊರತೆಯಿಂದ ಸಾವುಕಂಡವರ ಬಗ್ಗೆ ವರದಿ ನೀಡಿಲ್ಲ ಎಂಬುದು.

ಆದರೆ, ಕರ್ನಾಟಕದ ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಬರೋಬ್ಬರಿ 29 ಮಂದಿ ರೋಗಿಗಳು ಒಂದೇ ರಾತ್ರಿ ಸಾವು ಕಂಡಿದ್ದರು. ಹಾಗೇ ದೆಹಲಿಯ ಆಸ್ಪತ್ರೆಯೊಂದರಲ್ಲಿ 21 ಮಂದಿ ಒಂದೇ ದಿನ ಆಮ್ಲಜನಕ ಸಿಗದೆ ಉಸಿರುಗಟ್ಟಿ ಸತ್ತಿದ್ದರು. ಗೋವಾದಲ್ಲಿ ಐದು ದಿನಗಳ ಅಂತರದಲ್ಲಿ ಬರೋಬ್ಬರಿ 80 ಮಂದಿ ಆಮ್ಲಜನಕವಿಲ್ಲದೆ ಸಾವು ಕಂಡಿದ್ದರು. ಆಂಧ್ರಪ್ರದೇಶದ ತಿರುಪತಿಯಲ್ಲಿ ಒಂದೇ ದಿನ 11 ಮಂದಿ ಆಮ್ಲಜನಕ ಸಿಗದೆ ಸತ್ತಿದ್ದರು. ತೆಲಂಗಾಣದ ಹೈದರಾಬಾದ್ ಆಸ್ಪತ್ರೆಯಲ್ಲಿ 7 ಮಂದಿ ಆಮ್ಲಜನಕ ಕೊರತೆಗೆ ಬಲಿಯಾಗಿದ್ದರು. ಈ ಎಲ್ಲಾ ಘಟನೆಗಳು ಒಂದೇ ದಿನದಲ್ಲಿ ಆಮ್ಲಜನಕ ಸಿಗದೆ ಸಂಭವಿಸಿದ ಭಾರೀ ಸಾವುಗಳ ಕಾರಣಕ್ಕೆ ದೇಶದ ಗಮನ ಸೆಳೆದಿದ್ದವು. ಕಳೆದ ಮೇನಲ್ಲಿ ಸಂಭವಿಸಿದ ಈ ಆಘಾತಕಾರಿ ಘಟನೆಗಳಷ್ಟೇ ಅಲ್ಲದೆ, ಏಪ್ರಿಲ್ ಮತ್ತು ಮೇ ಅಂತ್ಯದ ವರೆಗೆ ದಿನ ನಿತ್ಯ ದೇಶಾದ್ಯಂತ ಪ್ರತಿ ದಿನ ನೂರಾರು ಮಂದಿ ಸಕಾಲದಲ್ಲಿ ಆಮ್ಲಜನಕ ಸಿಗದ ಒಂದೇ ಒಂದು ಕಾರಣಕ್ಕೆ ಜೀವ ಕಳೆದುಕೊಂಡಿದ್ದರು.

ಆಡಳಿತರೂಢ ಸರ್ಕಾರ ಮತ್ತು ವೈದ್ಯಕೀಯ ವ್ಯವಸ್ಥೆಯ ಹೊಣೆಗೇಡಿತನ, ಜನರ ಜೀವದ ಬಗೆಗಿನ ಉಡಾಫೆಯ ಕಾರಣಕ್ಕೆ ಸಂಭವಿಸಿದ ಈ ಸರಣಿ ಸಾವುಗಳ ಕಾರಣದಿಂದಾಗಿಯೇ ಕೋವಿಡ್ ಎರಡನೇ ಅಲೆಯಲ್ಲಿ ದೇಶದ ಕೋವಿಡ್ ಸಾವುಗಳ ಸಂಖ್ಯೆ ಇಡೀ ಜಗತ್ತೇ ಬೆಚ್ಚಿಬೀಳುವ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದೇಶದ ಸರ್ವೋಚ್ಛ ನ್ಯಾಯಾಲಯ ಆಮ್ಲಜನಕ ಕೊರತೆ ಸೇರಿದಂತೆ ಆರೋಗ್ಯ ವ್ಯವಸ್ಥೆಯ ಮೇಲೆ ನಿತ್ಯ ಕಣ್ಗಾವಲು ಇಡಲು ವಿಶೇಷ ಕಾರ್ಯಪಡೆ ತಂಡವನ್ನೇ ರಚಿಸಿತ್ತು. ಸುಪ್ರೀಂಕೋರ್ಟ್ ಮಧ್ಯಪ್ರವೇಶದ ಬಳಿಕ ಎಚ್ಚೆತ್ತುಕೊಂಡಿದ್ದ ಚೌಕಿದಾರ್ ಮೋದಿಯವರ ಸರ್ಕಾರ, ಆ ಬಳಿಕವಷ್ಟೇ ಹಂತಹಂತವಾಗಿ ಆಮ್ಲಜನಕ ಸರಬರಾಜು ವ್ಯವಸ್ಥೆಯನ್ನು ಸುಸೂತ್ರಗೊಳಿಸಿತ್ತು. ಆ ಹಿನ್ನೆಲೆಯಲ್ಲಿ ಜೂನ್ ಆರಂಭದ ಹೊತ್ತಿಗೆ ದೇಶದ ಕರೋನಾ ಸಾವುಗಳ ಸಂಖ್ಯೆಯಲ್ಲಿ ಸಮಾಧಾನಕರ ಇಳಿಕೆ ಕಂಡುಬಂದಿತ್ತು.

ಆದರೆ, ಈ ಎಲ್ಲಾ ಸಂಗತಿಗಳು ದೇಶದ ಜನಮಾನಸದಲ್ಲಿ ಇನ್ನೂ ಹಚ್ಚ ಹಸಿರಾಗಿ ಇರುವಾಗಲೇ ಪ್ರಧಾನಿ ಮೋದಿಯವರ ಸರ್ಕಾರ ದೇಶದಲ್ಲಿ ಆಮ್ಲಜನಕ ಕೊರತೆಯಿಂದ ಒಂದೇ ಒಂದು ಸಾವು ಸಂಭವಿಸಿಲ್ಲ ಎಂಬಂತಹ ನಾಚಿಕೆಗೇಡಿನ ವರಸೆ ಪ್ರದರ್ಶಿಸಿದೆ. ಇದು ಹೇಯ ಮತ್ತು ಲಜ್ಜೆಗೆಟ್ಟ ಸುಳ್ಳುಬುರಕತನ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇಂತಹ ಸುಳ್ಳುಗಳು ದೇಶದ ಹೀನಾಯ ಆರೋಗ್ಯ ವ್ಯವಸ್ಥೆಯ ಕಾರಣಕ್ಕೆ ಜೀವ ಕಳೆದುಕೊಂಡ ಲಕ್ಷಾಂತರ ಮಂದಿಗೆ ಮಾಡುವ ಅವಮಾನ ಮತ್ತು ನ್ಯಾಯಾಂಗಕ್ಕೆ ಮಾಡುವ ಅಪಮಾನ ಎಂಬ ಕನಿಷ್ಟ ಹಿಂಜರಿಕೆಯೂ ಇಲ್ಲದೆ ಹೀಗೆ ಮೋದಿಯವರ ಸರ್ಕಾರ ಹಸೀಸುಳ್ಳುಗಳ ಮೂಲಕ ತನ್ನ ಹೊಣೆಗಾರಿಕೆ ಕೊಡವಿಕೊಳ್ಳುವ ಮಟ್ಟಕ್ಕೆ ಕುಸಿದಿದೆ.

ಇದು ಭಾರತೀಯ ಜನತಾ ಪಕ್ಷದ ಆಡಳಿತ ತಲುಪಿರುವ ನೈತಿಕ ಅಧಃಪತನದ ಮಹಾ ಕುಸಿತ ಎನ್ನದೇ ಇನ್ನೇನು ಹೇಳಲು ಸಾಧ್ಯ?

Tags: ಕರೋನಾಕೋವಿಡ್ಪ್ರಧಾನಿ ಮೋದಿಬಿಜೆಪಿಮನಸುಖ್ ಮಾಂಡವೀಯಸುಪ್ರೀಂಕೋರ್ಟ್
Previous Post

2023 ವಿಧಾನಸಭೆ ಚುನಾವಣೆಗೆ ಅಡಿಪಾಯ; ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿಗೆ ಹೈಕಮಾಂಡ್ ಮೆಗಾ ಪ್ಲಾನ್

Next Post

KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada