ಮೋದಿಯವರು ಪ್ರಧಾನಿಯಾದ ಬಳಿಕ ಕೇವಲ ವಿರೋಧ ಪಕ್ಷದವರನ್ನೇ ಗುರಿಯಾಗಿಸಿಕೊಂಡು ED,CBI ಮತ್ತು IT ದಾಳಿ ನಡೆದಿದೆ. ಆದರೆ ಬಿಜೆಪಿಯ ಒಬ್ಬರೇ ಒಬ್ಬರ ಮೇಲೆ ದಾಳಿ ನಡೆದಿಲ್ಲ. ಹಾಗಾದರೆ BJPಯವರೇನು ಸಚ್ಛಾರಿತ್ರ್ಯರೆ? ಸದ್ಗುಣ ಸಂಪನ್ನರೆ? EDಯವರ ಪ್ರಕಾರ ಆಪರೇಷನ್ ಕಮಲದಲ್ಲಿ ಕೈ ಬದಲಾದ ಸಾವಿರಾರು ಕೋಟಿ ಹಣ ಅಕ್ರಮ ಸಂಪತ್ತಲ್ಲವೆ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ರಾಜಕೀಯ ಎದುರಾಳಿಗಳನ್ನು ಸೈದಾಂತಿಕವಾಗಿ ಎದುರಿಸಲಾಗದ BJP, ED ಮತ್ತು CBI ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ED ಸಮನ್ಸ್ ನೀಡಿರುವುದು BJPಯ ಕುತಂತ್ರದ ಭಾಗ. ED&CBI ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಆದರೆ ಈ ಸಂಸ್ಥೆಗಳು BJPಯ ಅಂಗಸಂಸ್ಥೆಯಾಗಿವೆ ಎಂದು ಕಿಡಿಕಾರಿದ್ದಾರೆ.
ಮೋದಿಯವರು ಪ್ರಧಾನಿಯಾದ ಬಳಿಕ ಕೇವಲ ವಿರೋಧ ಪಕ್ಷದವರನ್ನೇ ಗುರಿಯಾಗಿಸಿಕೊಂಡು ED,CBI ಮತ್ತು IT ದಾಳಿ ನಡೆದಿದೆ. ಆದರೆ ಬಿಜೆಪಿಯ ಒಬ್ಬರೇ ಒಬ್ಬರ ಮೇಲೆ ದಾಳಿ ನಡೆದಿಲ್ಲ. ಹಾಗಾದರೆ BJPಯವರೇನು ಸಚ್ಛಾರಿತ್ರ್ಯರೆ? ಸದ್ಗುಣ ಸಂಪನ್ನರೆ? EDಯವರ ಪ್ರಕಾರ ಆಪರೇಷನ್ ಕಮಲದಲ್ಲಿ ಕೈ ಬದಲಾದ ಸಾವಿರಾರು ಕೋಟಿ ಹಣ ಅಕ್ರಮ ಸಂಪತ್ತಲ್ಲವೆ? ಎಂದು ಪ್ರಶ್ನಿಸಿದ್ದಾರೆ.
![](https://pratidhvani.com/wp-content/uploads/2022/06/file6ysp1v8mmfb3cqm3aw81530772-1024x809.jpg)
ಆಳುವ ಸರ್ಕಾರದ ಕೈಗೊಂಬೆಯಾಗಿ ದ್ವೇಷದ ಸಾಧನವಾಗಿರುವ ED ಸಾಂವಿಧಾನಿಕ ಸಂಸ್ಥೆ ಎಂದು ಕರೆಸಿಕೊಳ್ಳುವ ಅರ್ಹತೆಯೇ ಇಲ್ಲ. ಆಳುವ ಸರ್ಕಾರವೊಂದು ಸಾಂವಿಧಾನಿಕ ಸಂಸ್ಥೆಗಳನ್ನು ಇಷ್ಟು ಕೀಳುಮಟ್ಟದಲ್ಲಿ ದುರುಪಯೋಗಿಸಿಕೊಂಡ ಉದಾಹರಣೆ ಇತಿಹಾಸದಲ್ಲೇ ಇಲ್ಲ. BJPಯ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ. ಇದನ್ನು ಪ್ರಜ್ಞಾವಂತ ಸಮಾಜ ಖಂಡಿಸಬೇಕಿದೆ ಎಂದು ಹೇಳಿದ್ದಾರೆ.