ಕೆಲವೇ ಕ್ಷಣಗಳ ಹಿಂದೆ ದೆಹಲಿಯಲ್ಲಿ ರೋಹಿಂಗ್ಯಾ ನಿರಾಶ್ರಿತರಿಗೆ ವಸತಿ ಕಲ್ಪಿಸುವುದಾಗಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಗೃಹ ಸಚಿವಾಲಯವು ಅಂತಹ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.
ರೋಹಿಂಗ್ಯಾಗಳು ಯಾವುದೇ ಪ್ರದೇಶದಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸುವಂತೆ ದೆಹಲಿ ಸರ್ಕಾರಕ್ಕೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ರೋಹಿಂಗ್ಯಾ ಮುಸಲ್ಮಾನರನ್ನು ಕಾನೂನಿನ ಪ್ರಕಾರ ಗಡಿಪಾರು ಮಾಡುವವರೆಗೆ ಸೆರೆಮನೆಯಲ್ಲಿಡಲಾಗುವುದು ಮತ್ತು ಅವರ ಪ್ರಸ್ತುತ ವಾಸಸ್ಥಳವನ್ನು ಬಂಧನ ಕೇಂದ್ರವನ್ನಾಗಿ ಘೋಷಿಸಲು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಗೃ ಸಚಿವಾಲಯ ಟ್ವೀಟ್ ಮಾಡಿ ತಿಳಿಸಿದೆ.
ರೋಹಿಂಗ್ಯಾ ವಲಸಿಗರ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಗೆ ಸಂಬಂಧಿಸಿದಂತೆ ಹೊಸದಿಲ್ಲಿಯ ಬಕ್ಕರ್ವಾಲಾದಲ್ಲಿರುವ ವಲಸಿಗರಿಗೆ ಯಾವುದೇ ಫ್ಲಾಟ್ಗಳನ್ನು ಒದಗಿಸುವಂತೆ MHA ಆದೇಶಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ರೋಹಿಂಗ್ಯಾ ವಲಸಿಗರನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವ ಕುರಿತು ದೆಹಲಿ ಸರ್ಕಾರದ ಉದ್ದೇಶಿತ ಕ್ರಮದ ಕುರಿತು ಕೇಂದ್ರ ಗೃಹ ಸಚಿವಾಲಯವು ನಿರ್ದೇಶನ ನೀಡಿದ್ದು ರೋಹಿಂಗ್ಯಾ ವಲಸಿಗರನ್ನು ಗಡಿಪಾರು ಮಾಡುವಂತೆ ಈಗಾಗಲೇ ಸೂಚಿಸಲಾಗಿದ್ದು ಅವರುಗಳು ಇರುವ ಸ್ಥಳ ಬಿಟ್ಟು ಬೇರೆಡೆಗೆ ತೆರಳದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ವಿದೇಶಾಂಗ ಇಲಾಖೆಯ ಮೂಲಕ ಅವರು ಸಂಬಂಧಪಟ್ಟ ದೇಶಕ್ಕೆ ವಾಪಸ್ ಕಳುಹಿಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.