• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಾಲ್ಕು ವರ್ಷಗಳಲ್ಲಿ ಒಳಚರಂಡಿ, ಮಲಗುಂಡಿ ಸ್ವಚ್ಛತೆ ವೇಳೆ 330 ಜನರ ಮೃತ್ಯು

Any Mind by Any Mind
August 5, 2022
in ದೇಶ
0
ನಾಲ್ಕು ವರ್ಷಗಳಲ್ಲಿ ಒಳಚರಂಡಿ, ಮಲಗುಂಡಿ ಸ್ವಚ್ಛತೆ ವೇಳೆ 330 ಜನರ ಮೃತ್ಯು
Share on WhatsAppShare on FacebookShare on Telegram

ಭಾರತದಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳು ಇಲ್ಲವೇ ಇಲ್ಲ ಎಂದು ಸರ್ಕಾರ ಹಿಂದಿನಿಂದಲೂ ಹೇಳುತ್ತಲೇ ಬಂದಿದೆ. ಆದರೆ, ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ 2017ರಿಂದ 2021ರವರೆಗೆ ಒಳಚರಂಡಿ ಮತ್ತು ಮಲಗುಂಡಿ ಸ್ವಚ್ಛತೆ ವೇಳೆ 330 ಜನರು ಸಾವನ್ನಪ್ಪಿದ್ದಾರೆ.

ADVERTISEMENT

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಎಂದರೆ, ಮಲಗುಂಡಿಗಳಲ್ಲಿ ತುಂಬಿಕೊಂಡಿರುವ ಮಲವನ್ನು ಕೈಗಳಿಂದ ಬಾಚುವ ಕೆಲಸ. ಮ್ಯಾನ್ಯುವಲ್ ಸ್ಕ್ಯಾವೆಂಜರ್ ಕಾಯ್ದೆ 2013ರ ಅನ್ವಯ ಭಾರತದಲ್ಲಿ ಇದು ನಿಷಿದ್ಧ. ಆದರೆ, ಆಭರತದ ಹಲವು ಭಾಗಗಳಲ್ಲಿ ಇದು ಇನ್ನೂ ಜ್ವಲಂತವಾಗಿರುವ ಸಮಸ್ಯೆ.

ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳ ಕುರಿತಾದ ಮಾಹಿತಿಯನ್ನು ಲೋಕಸಭೆಗೆ ನೀಡಿರುವ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ರಾಮದಾಸ್ ಅಠಾವಳೆ, ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳಾಗಿ ಯಾರನ್ನೂ ನೇಮಿಸಿಕೊಳ್ಳುತ್ತಿಲ್ಲ. ಡಿಸೆಂಬರ್ 6, 2013ರಿಂದ ಈ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳನ್ನು ನಿಯುಕ್ತಿಗೊಳಿಸಲು ಅವಕಾಶವಿಲ್ಲ ಎಂಧು ಹೇಳಿದ್ದಾರೆ.

ಆದರೆ, ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 58,098 ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳನ್ನು ಗುರುತಿಸಲಾಗಿದೆ. ಜುಲೈ 19ರಂದು ಲೋಕಸಭೆಗೆ ನೀಡಿದ ಮಾಹಿತಿಯಲ್ಲಿ 2017ರಿಂದ 347 ಸಫಾಯಿ ಕರ್ಮಚಾರಿಗಳು ಸಾವನಪ್ಪಿರುವುದಾಗಿ ಹೇಳಿದ್ದಾರೆ.

ಸಾವನ್ನಪ್ಪಿರುವ ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳಲ್ಲಿ ಬಹುತೇಕರು ದಿನಗೂಲಿ ನೌಕರರು.

ಈ ಕುರಿತಾಗಿ ಈ ಹಿಂದೆ ಮಾತನಾಡಿದ್ದ ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗದ ಹಿಂದಿನ ಅಧ್ಯಕ್ಷ ಕೆ ಶಿವಣ್ಣ ಕೋಟೆ, ಸಾವನ್ನಪ್ಪಿರುವವರನ್ನು ತಾಂತ್ರಿಕವಾಗಿ ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳೆಂದು ಕರೆಯಲಾಗುವುದಿಲ್ಲ. ಮ್ಯಾನ್ಯುವಲ್ ಸ್ಕ್ಯಾವೆಂಜರ್, ಸಫಾಯಿ ಕರ್ಮಚಾರಿ ಅಥವಾ ಪೌರ ಕಾರ್ಮಿಕರನ್ನು ಸ್ಥಳೀಯಾಡಳಿತ ಸಂಸ್ಥೆಗಳು ನೇಮಿಸುತ್ತವೆ. ಅವರನ್ನು ಮ್ಯಾನ್ಯುವಲ್ ಸ್ಕ್ಯಾವೆಂಜರ್’ಗಳೆಂದು ನೇರವಾಗಿ ನೇಮಕ ಮಾಡಿಕೊಳ್ಳುವುದಿಲ್ಲ, ಎಂದು ಹೇಳಿದ್ದರು.

ಇದೇ ಮಾತನ್ನು ಗುರುವಾರ ಲೋಕಸಭೆಯಲ್ಲಿ ಹೇಳಿರುವ ಸಚಿವ ರಾಮದಾಸ್ ಅಠಾವಳೆ, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್’ನಿಂದ ಯಾರೂ ಸಾವನ್ನಪ್ಪಿಲ್ಲ. ಆದರೆ, ಮಲಗುಂಡಿ ಮತ್ತು ಒಳಚರಂಡಿಗೆ ಇಳಿದು ಸ್ವಚ್ಛತಾ ಕಾರ್ಯ ಕೈಗೊಳ್ಳುವಾಗ 330 ಜನರು ಸತ್ತಿದ್ದಾರೆ ಎಂದು ಉತ್ತರ ನೀಡಿದ್ದಾರೆ.

ಈ 330 ಪ್ರಕರಣಗಳಲ್ಲಿ 47 ಉತ್ತರ ಪ್ರದೇಶ, 43 ತಮಿಳುನಾಡು, 42 ದೆಹಲಿ, 36 ಹರಿಯಾಣ ಮತ್ತು 30 ಮಹಾರಾಷ್ಟ್ರದಲ್ಲಿ ದಾಖಲಾಗಿವೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಭಾರತದ ಪ್ರತಿ ಸ್ವತಂತ್ರ ಸಂಸ್ಥೆಯೂ BJP-RSS ನಿಯಂತ್ರಣದಲ್ಲಿದೆ : ರಾಹುಲ್‌ ಗಾಂಧಿ ವಾಗ್ದಾಳಿ

Next Post

ನ.1ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ

Related Posts

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
0

ನವದೆಹಲಿ: ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು....

Read moreDetails
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

November 17, 2025
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025
ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

November 17, 2025
Next Post
ನ.1ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ

ನ.1ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ

Please login to join discussion

Recent News

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!
Top Story

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

by ಪ್ರತಿಧ್ವನಿ
November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?
Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada