ಹುಬ್ಬಳ್ಳಿ: ‘2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ’ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರ್ತಾರೆ ಅಂತ ಅವರ ಲೆಕ್ಕಾಚಾರ ಇದೆ. ಆದರೆ, ನಮ್ಮ ಲೆಕ್ಕಾಚಾರದ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ ಎಂದು ತಿಳಿಸಿದರು.
“ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಉಲ್ಟಾ ಆಗೋ ಸಾಧ್ಯತೆಗಳಿವೆ’’ ಎಂದು ಹೇಳಿದ ಅವರು, ನೋಡೋಣ ಯಾರ ಲೆಕ್ಕಾಚಾರ ನಿಜ ಆಗುತ್ತೆ ಎಂದು ಭವಿಷ್ಯ ನುಡಿದರು. “ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಕೆಲವರು ಬರ್ತೀದಾರೆ. ನಮಗೇನೂ ಭಯ ಇಲ್ಲ. ಬಿಜೆಪಿ ಬಿಟ್ಟು ಯಾಕೆ ಬರ್ತೀದಾರೆ ಅವರನ್ನೇ ಕೇಳಿ. ಲೋಕಸಭೆ ಚುನಾವಣೆಗೆ ಸಿದ್ದತೆ ನಡೆದಿದಿದ್ದು ಭಾರತೀಯ ಜನತಾ ಪಕ್ಷದಕರ್ಮಕಾಂಡ ಜನರಿಗೆ ಮುಟ್ಟಿಸುತ್ತೇವೆ” ಎಂದರು.