ಗರಡಿ ಚಿತ್ರದ ನಾಯಕ ನಟ ಯಶಸ್ ಸೂರ್ಯನಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಪ್ರಕರಣ ಸಂಬಂಧ ನಟ ಯಶಸ್ ಸೂರ್ಯಗೆ ನೋಟಿಸ್ ನೀಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ..

ಕೊಲೆಗೂ ಮುನ್ನ ರಾಜರಾಜೇಶ್ವರಿ ನಗರದ ಸ್ಟೋನಿ ಬ್ರೂಕ್ ರೆಸ್ಟೊಬಾರ್ನಲ್ಲಿ ನಟ ದರ್ಶನ್ ಹಾಗು ಹಾಸ್ಯನಟ ಚಿಕ್ಕಣ್ಣ ಜೊತೆಗಿದ್ದ ನಟ ಯಶಸ್ ಸೂರ್ಯ. ನಿನ್ನೆ ನಟ ಚಿಕ್ಕಣ್ಣ ತನಿಖೆ ವೇಳೆ ಮಾಹಿತಿ ಬಹಿರಂಗ ಆಗಿದೆ.

ನಟ ಯಶಸ್ ಸೂರ್ಯ ಕೂಡ ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ರಿಂದ ಸಾಕ್ಷಿಯನ್ನಾಗಿ ಪರಿಗಣಿಸುವ ಸಾಧ್ಯತೆ ಇದೆ.. ಈ ಸಂಬಂಧ ಇವತ್ತು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನಟ ದರ್ಶನ್ ಕೆಲಸದ ಬಗ್ಗೆ ಚರ್ಚೆ ಮಾಡಿದ್ದರೆ ಸಂಕಷ್ಟ ಎದುರಾಗುವ ಸಾಧ್ಯತೆಯೂ ಇದೆ.
