• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೆಂಟಲ್ ಗಿರಾಕಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ರಮೇಶ್ ಜಾರಕಿಹೊಳಿಗೆ ಡಿ.ಕೆ. ಶಿವಕುಮಾರ್ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
March 13, 2023
in ಕರ್ನಾಟಕ, ರಾಜಕೀಯ
0
ಮೆಂಟಲ್ ಗಿರಾಕಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ರಮೇಶ್ ಜಾರಕಿಹೊಳಿಗೆ ಡಿ.ಕೆ. ಶಿವಕುಮಾರ್ ತಿರುಗೇಟು
Share on WhatsAppShare on FacebookShare on Telegram

ಬೆಂಗಳೂರು:‘ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಸೋಮವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ADVERTISEMENT

ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ’ ಎಂದು ತಿರುಗೇಟು ನೀಡಿದರು.ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, ‘ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ’ ಎಂದರು.

ಧೃವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವಂತೆ ಒತ್ತಡ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧೃವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಇನ್ನು ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾದ ಧೃವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ನೀಡಿದ್ದೇನೆ. ಧೃವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ. ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧೃವನಾರಾಯಣ . ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದೆ’ ಎಂದು ತಿಳಿಸಿದರು.

ಪಕ್ಷದ ಟಿಕೆಟ್ ಪಟ್ಟಿ ಅಂತಿಮವಾಗುವುದು ಯಾವಾಗ ಎಂದು ಕೇಳಿದಾಗ, ‘ಮಾ.16 ರಂದು ಇಲ್ಲಿ ಒಂದು ಸಭೆ ಕರೆದಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ’ ಎಂದು ತಿಳಿಸಿದರು.ಪ್ರಧಾನಮಂತ್ರಿಗಳು ರೌಡಿ ಶೀಟರ್ ಗೆ ಕೈಮುಗಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರ ಪಕ್ಷ, ಅವರಿಗೆ ಯಾರು ಬೇಕೋ ಅವರನ್ನು ಸೇರಿಸಿಕೊಂಡಿದ್ದಾರೆ. ಅವರು ಸ್ಯಾಂಟ್ರೋ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಫೈಟರ್ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಅತ್ಯಾಚಾರಿಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಲಿ, ಲಂಚಕೋರರನ್ನಾದರೂ ಇಟ್ಟುಕೊಳ್ಳಲಿ. ಅದು ಅವರ ಪಕ್ಷದ ವಿಚಾರ. ಅದರ ಬಗ್ಗೆ ನಾನ್ಯಾಕೆ ಮಾತನಾಡಲಿ’ ಎಂದು ಕೇಳಿದರು.

ರಾಜಾಜಿನಗರದ ಆಕಾಂಕ್ಷಿಗಳು ತಮ್ಮನ್ನು ಭೇಟಿ ಮಾಡಿ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡುವುದು ಬೇಡ ಎಂಬ ಬೇಡಿಕೆ ಇಟ್ಟಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾವು ಅವರಿಗೆ ಟಿಕೆಟ್ ನೀಡುತ್ತಿದ್ದೇವೆ ಎಂದು ಯಾರು ಹೇಳಿದರು? ಪಕ್ಷದ ಅನುಕೂಲಕ್ಕೆ ತಕ್ಕಂತೆ ಪಕ್ಷ ತೀರ್ಮಾನ ಮಾಡಲಿದೆ. ಯಾರ ಬೆದರಿಕೆಗೂ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ. ಪಕ್ಷ ಈ ವಿಚಾರವಾಗಿ ಯಾವ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ’ ಎಂದರು.

ಮಂಡ್ಯವನ್ನು ರಾಷ್ಟ್ರದಲ್ಲಿ ಮಾದರಿ ಜಿಲ್ಲೆ ಮಾಡುವುದಾಗಿ ಪ್ರಧಾನಿ ಹೇಳಿದ್ದಾರಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಮಂಡ್ಯದಲ್ಲಿ ಮೋದಿ ಅವರು ಯಾರ ಬಗ್ಗೆ ಮಾತನಾಡಿದ್ದಾರೆ, ಯಾರ ಬಗ್ಗೆ ಮಾತನಾಡಿಲ್ಲ ಎಂದು ನಾನು ಹೇಳಬೇಕಾಗಿಲ್ಲ, ಮಾಧ್ಯಮಗಳು ವರದಿ ಮಾಡಿವೆ. ಜನರಿಗೆ ಅದು ತಿಳಿದಿದೆ’ ಎಂದು ತಿಳಿಸಿದರು.ಕೆಪಿಟಿಸಿಎಲ್ ನೌಕರರು ವಿದ್ಯುತ್ ಕಡಿತ ಮಾಡಿ ಕೆಲಸಕ್ಕೆ ಗೈರಾಗಿ ವೇತನ ಪರಿಷ್ಕರಣೆಗೆ ಒತ್ತಾಯಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.

Tags: dk SivakumarRamesh Jarakiholiಕಾಂಗ್ರೆಸ್​ಡಿ.ಕೆ ಶಿವಕುಮಾರ್ರಮೇಶ್​ ಜಾರಕಿಹೊಳಿ
Previous Post

ಕಾಫಿನಾಡಲ್ಲಿ ಮತ್ತೆ ಭುಗಿಲೆದ್ದ ಧರ್ಮ ದಂಗಲ್​ : ದರ್ಗಾದ ವಿಚಾರಕ್ಕೆ ಮತ್ತೊಂದು ಗಲಾಟೆ

Next Post

ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಖಾಕಿ ಗುಂಡೇಟಿನ ಸದ್ದು : ಡಕಾಯಿತಿ ಗ್ಯಾಂಗ್​ ಲೀಡರ್​ ಮೇಲೆ ಫೈರಿಂಗ್​

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಖಾಕಿ ಗುಂಡೇಟಿನ ಸದ್ದು : ಡಕಾಯಿತಿ ಗ್ಯಾಂಗ್​ ಲೀಡರ್​ ಮೇಲೆ ಫೈರಿಂಗ್​

ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಖಾಕಿ ಗುಂಡೇಟಿನ ಸದ್ದು : ಡಕಾಯಿತಿ ಗ್ಯಾಂಗ್​ ಲೀಡರ್​ ಮೇಲೆ ಫೈರಿಂಗ್​

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada