• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಮ್ಲಜನಕ ಮಾತ್ರವಲ್ಲ, ವೈದ್ಯರ ಹಾಗೂ ದಾದಿಯರ ಕೊರತೆಯೂ ಇದೆ: ಡಾ. ದೇವಿ ಪ್ರಸಾದ್‌ ಶೆಟ್ಟಿ

Any Mind by Any Mind
May 1, 2021
in ದೇಶ
0
ಆಮ್ಲಜನಕ ಮಾತ್ರವಲ್ಲ, ವೈದ್ಯರ ಹಾಗೂ ದಾದಿಯರ ಕೊರತೆಯೂ ಇದೆ: ಡಾ. ದೇವಿ ಪ್ರಸಾದ್‌ ಶೆಟ್ಟಿ
Share on WhatsAppShare on FacebookShare on Telegram

ಕರೊನಾ 2 ನೇ ಅಲೆ ಇನ್ನೂ 4-5 ತಿಂಗಳು ಭಾರತವನ್ನು ಕಾಡಲಿದೆ. ಮುಂದಿನ ದಿನಗಳಲ್ಲಿ 5 ಲಕ್ಷ ಐಸಿಯು ಬೆಡ್‌ಗಳ ಅಗತ್ಯವಿದೆ. ಭಾರತದಲ್ಲಿ 2 ಲಕ್ಷ ನರ್ಸ್ ಹಾಗೂ 1.5 ಲಕ್ಷ ವೈದ್ಯರ ಅಗತ್ಯ ಬೀಳಬಹುದು ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಮುನ್ಸೂಚನೆ ನೀಡಿದ್ದಾರೆ.

ADVERTISEMENT

 ಸದ್ಯ 3 ಲಕ್ಷಗಳಿಗಿಂತ ಅಧಿಕ ಹೊಸ ಕರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಪ್ರತಿದಿನ ಪತ್ತೆಯಾಗುವ ಪ್ರಕರಣಗಳ ಸಂಖ್ಯೆ ಗರಿಷ್ಠ 5 ಲಕ್ಷಕ್ಕೆ ಏರಬಹುದು. ಸೋಂಕಿತರಲ್ಲಿ ಶೇ. 5 ಕ್ಕಿಂತ ಹೆಚ್ಚು ಜನರಿಗೆ ಐಸಿಯು ಬೆಡ್‌ಗಳ ಅಗತ್ಯವಿದೆ. ಭಾರತದಲ್ಲಿ 90 ಸಾವಿರ ಇರುವ ಐಸಿಯು ಬೆಡ್‌ಗಳನ್ನು 5 ಲಕ್ಷಕ್ಕೆ ಏರಿಸಬೇಕಿದೆ ಎಂದು ದೇವಿ ಶೆಟ್ಟಿ ಎಚ್ಚರಿಸಿದ್ದಾರೆ.

ಭೀಕರ ಪರಿಸ್ಥಿತಿಯನ್ನು ಎದುರಿಸಲು ಆಮೂಲಾಗ್ರ ಪರಿಹಾರಗಳನ್ನು ಸಹ ಸೂಚಿಸಿದ್ದಾರೆ. ಪ್ರಸ್ತುತ, ಭಾರತವು ಕೇವಲ 75,000 ರಿಂದ 90,000 ಐಸಿಯು ಹಾಸಿಗೆಗಳು ಮಾತ್ರ ಇವೆ. ಅದಾಗಲೇ ಬಹುತೇಕ ಎಲ್ಲಾ ಹಾಸಿಗೆಗಳೂ ಭರ್ತಿ ಆಗಿವೆ. ಇನ್ನು ಎರಡನೇ ಅಲೆ ಮಧ್ಯದ ಸ್ಥಿತಿಯಲ್ಲಿದ್ದು ಅದು ಉತ್ತುಂಗಕ್ಕೇರಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ ಎಂದಿದ್ದಾರೆ.

ಕರೋನಾ 3ನೇ ಅಲೆಗೂ ಸಿದ್ಧರಾಗಿ: ಡಾ. ದೇವಿ ಶೆಟ್ಟಿ ಎಚ್ಚರಿಕೆ

ಐಸಿಯುಗಳಲ್ಲಿನ ರೋಗಿಗಳು ಆಮ್ಲಜನಕದ ಕೊರತೆಯಿಂದಾಗಿ ಸಾಯುತ್ತಿದ್ದಾರೆ. ಇದು ಒಂದು ಕಡೆಯಾದರೆ ಮತ್ತೊಂದೆಡೆ ರೋಗಿಗಳನ್ನು ನೋಡಿಕೊಳ್ಳಲು ದಾದಿಯರು ಮತ್ತು ವೈದ್ಯರು ಸಾಲುವುದಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪುಣೆಯ ಸಿಂಬಯೋಸಿಸ್ ಗೋಲ್ಡನ್ ಜುಬಿಲಿ ಆಯೋಜಿಸಿದ ಆನ್‌ಲೈವ್‌ ಸಭೆಯಲ್ಲಿ ಉಪನ್ಯಾಸ ಮಾಡಿದ ಅವರು, ಕೋವಿಡ್ ಪಾಸಿಟಿವ್ ಬಂದ ಪ್ರತಿ ರೋಗಿಯ ಮನೆಯಲ್ಲಿ ಕನಿಷ್ಠ 5 ರಿಂದ 10 ಜನರಿರುತ್ತಾರೆ. ಆದರೆ ಅವರು ಪರೀಕ್ಷೆಗೆ ಒಳಗಾಗುವುದಿಲ್ಲ. ಇದನ್ನು ಲೆಕ್ಕಾಚಾರ ಮಾಡಿದರೆ ಭಾರತದಲ್ಲಿ ಈಗಲೂ ಪ್ರತಿದಿನ 15 ರಿಂದ 20 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದಾರೆ.  

ಸೋಂಕಿಗೆ ಒಳಗಾದವರ ಪೈಕಿ ಹಲವರಿಗೆ ಐಸಿಯು ಹಾಸಿಗೆಯ ಅಗತ್ಯವಿರುತ್ತದೆ. ಸರಾಸರಿ, ಐಸಿಯುನಲ್ಲಿ ರೋಗಿಯು ಕನಿಷ್ಠ 10 ದಿನಗಳ ಕಾಲ ಚಿಕಿತ್ಸೆ ಪಡೆಯಬೇಕಾಗುತ್ತದೆ. ಹಾಗಾಗಿ, ಇನ್ನೂ ಸಾಕಷ್ಟು ಐಸಿಯುಗಳ ಅಗತ್ಯವಿದೆ. ಅದೂ ಅಲ್ಲದೆ, ಕೇವಲ ಐಸಿಯುಗಳಿದ್ದರೆ ಸಾಲದು. ರೋಗಿಗಳಿಗೆ ಚಿಕಿತ್ಸೆ ನೀಡಲು ದಾದಿಯರು, ವೈದ್ಯರು ಮತ್ತು ಅರೆವೈದ್ಯರು ಇರಬೇಕಾಗುತ್ತದೆ. ಐಸಿಯುಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆ ಹೆಚ್ಚಾಗಿ ದಾದಿಯರ ಮೇಲೆ ಅವಲಂಬಿತವಾಗಿರುತ್ತದೆ. ಸಾಂಕ್ರಾಮಿಕ ರೋಗ ಪ್ರಾರಂಭವಾಗುವ ಮೊದಲೇ ಸರ್ಕಾರಿ ಆಸ್ಪತ್ರೆಗಳು ದೇಶಾದ್ಯಂತ ಶೇಕಡಾ 78ರಷ್ಟು ವೈದ್ಯಕೀಯ ತಜ್ಞರ ಕೊರತೆ ಇತ್ತು. ಈಗ, ಮುಂದಿನ ಕೆಲವು ವಾರಗಳಲ್ಲಿ ನಾವು ಕನಿಷ್ಠ ಎರಡು ಲಕ್ಷ ದಾದಿಯರು ಮತ್ತು ಕನಿಷ್ಠ ಒಂದೂವರೆ ಲಕ್ಷ ವೈದ್ಯರನ್ನು ನಿಯೋಜಿಸಬೇಕಿದೆ ಎಂದು ಅವರು ಹೇಳಿದ್ದಾರೆ.  

ಪ್ರಸ್ತುತ ಇರುವ ಕರೋನಾ ಎರಡನೇ ಅಲೆಯು ಸುಮಾರು 4 ರಿಂದ 5 ತಿಂಗಳು ಇರಲಿದ್ದು, ತದನಂತರ ನಾವು ಮೂರನೇ ಅಲೆಗೂ ಸಿದ್ಧರಾಗಿರಬೇಕು ಎಂದು ದೇವಿ ಶೆಟ್ಟಿ ಹೇಳಿದ್ದಾರೆ. 

Previous Post

ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಕೇಂದ್ರದೊಂದಿಗೆ ನಿಲ್ಲಲಿದೆ- ಸೋನಿಯಾ ಗಾಂಧಿ

Next Post

ಆಮ್ಲಜನಕ ಮಾತ್ರವಲ್ಲ, ವೈದ್ಯರ ಹಾಗೂ ದಾದಿಯರ ಕೊರತೆಯೂ ಇದೆ: ಡಾ. ದೇವಿ ಪ್ರಸಾದ್‌ ಶೆಟ್ಟಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post

ಆಮ್ಲಜನಕ ಮಾತ್ರವಲ್ಲ, ವೈದ್ಯರ ಹಾಗೂ ದಾದಿಯರ ಕೊರತೆಯೂ ಇದೆ: ಡಾ. ದೇವಿ ಪ್ರಸಾದ್‌ ಶೆಟ್ಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada