• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಣ್ಣ ಅಲ್ಲ.. ಸೆಗಣಿ ಎರಚಿ ಇಲ್ಲಿ ಓಕುಳಿ ಆಡ್ತಾರೆ!

ಪ್ರತಿಧ್ವನಿ by ಪ್ರತಿಧ್ವನಿ
August 5, 2022
in ಕರ್ನಾಟಕ
0
ಬಣ್ಣ ಅಲ್ಲ.. ಸೆಗಣಿ ಎರಚಿ ಇಲ್ಲಿ ಓಕುಳಿ ಆಡ್ತಾರೆ!
Share on WhatsAppShare on FacebookShare on Telegram

ಬಣ್ಣ ಎರಚಿ ಓಕುಳಿ ಆಡಿರ್ತಿರಾ.. ರಾಜ ಮಹಾರಾಜರ ಕಾಲದಲ್ಲಿ ಹಾಲೋಕುಳಿ ನಡೀತಿತ್ತು ಅಂತಾ ಕೇಳಿರ್ತಿರಾ.. ಆದ್ರೆ, ಗದಗ ನಗರದಲ್ಲಿ ಸೆಗಣಿ ಓಕುಳಿ ಅನ್ನೋ ವಿಶಿಷ್ಟ ಆಚರಣೆ ಜಾರಿಯಲ್ಲಿದೆ..

ADVERTISEMENT

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಪರಸ್ಪರ ಸಗಣೆ ಎರಚಾಡುವ ಮೂಲಕ, ನೂರಾರು ವರ್ಷದಿಂದ ಆಚರಿಸಿಕೊಂಡು ಬಂದಿರೋ ವಿಶಿಷ್ಟ ಹಬ್ಬವನ್ನ ಜೀವಂತವಾಗಿಡಲಾಗಿದೆ..

ನಾಗರ ಪಂಚಮಿ ಹೆಣ್ಣು ಮಕ್ಕಳ ಹಬ್ಬ.. ಹೊಸ ಬಟ್ಟೆ ಹಾಕ್ಕೊಂಡು ನಾಗರ ಕಟ್ಟೆಗೆ ತೆರಳಿ ಹೆಣ್ಣುಮಕ್ಕಳು ಹಾಲು ಸಪರ್ಪಿಸಿ ಹಬ್ಬ ಆಚರಸ್ತಾರೆ.. ಪಂಚಮಿಯ ಮರುದಿನ ಷಷ್ಠಿ, ಕರಿಕಟ್ಟಂಬಲಿ ದಿನ ಗಂಡ್ ಹೈಕ್ಳು ಸೇರಿಕೊಂಡು ಈ ವಿಶೇಷ ಹಬ್ಬ ಆಚರಸ್ತಾರೆ..

ಸೆಗಣಿ ಆಟಕ್ಕೆ ತಿಂಗಳಿಂದ ನಡೆಯುತ್ತೆ ಪ್ರಿಪರೇಷನ್..!

ಪಂಚಮಿ ಮರುದಿನ ನಡೆಯೋ ಈ ವಿಶಿಷ್ಟ ಆಟಕ್ಕೆ ತಿಂಗಳಿಂದ ತಯಾರಿ ನಡೆಯುತ್ತೆ.. ಕರಿಕಟ್ಟಂಬಲಿ ದಿನ ಆಟ ಆಡೋದಕ್ಕೆ ಅಂತಾ ತಿಂಗಳು ಹಿಂದೆಯೇ ಸೆಗಣಿ ಸಂಗ್ರಹ ಕಾರ್ಯ ನಡೆಯುತ್ತೆ.. ಬಡಾವಣೆಯ ಯುವಕರ ಗುಂಪು ಕಟ್ಕೊಂಡು, ದನ ಕರುಗಳಿರುವ ಮನೆಗಳಿಗೆ ತೆರಳಿ ಅವರಿಂದ ಸೆಗಣೆ ಬೇಡಿ ಪಡೀತಾರೆ..

ಪಂಚಮಿ ಮರುದಿನ ಸಂಜೆ ಹೊತ್ತಲ್ಲಿ ನಡೆಯುತ್ತೆ ಸೆಗಣಿ ಕಾಳಗ..!

ಸೆಗಣಿ ಕಾಳಗ ನೋಡೋದಕ್ಕೆ ಥೇಟ್ ಹೋಳಿ ಹುಣ್ಣಿಮೆಯ ರಂಗಿನಾಟ ಅನ್ಸುತ್ತೆ.. ಆದ್ರೆ ಬಣ್ಣದ ಬದ್ಲು ಇಲ್ಲಿ ಸೆಗಣಿ ಎರಚಲಾಗುತ್ತೆ.. ಬಡಾವಣೆಯ ಮುಖ್ಯರಸ್ತೆಯಲ್ಲಿ ಸೆಗಣಿಯ ಗುಂಪು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕುತ್ತಾರೆ. ಯುವಕರು ಎರಡು ತಂಡ ಕಟ್ಕೊಂಡು ಹತ್ತಿರದ ತೋಟದಲ್ಲಿ ತೆರಳಿ ಸಗಣೆ ಆಟಕ್ಕೆ ರೆಡಿ ಆಗ್ತಾರೆ.. ಡಿಫರೆಂಟ್ ಓಕುಳಿಗೆ ಡಿಫರೆಂಟಾಗೇ ರೆಡಿಯಾಗುವ ಯುವಕರು, ಕೊರಳಲ್ಲಿ ಬದನೆಕಾಯಿ, ಸೌತೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳ ಹಾರ ಮಾಡಿಕೊಂಡು ಹಾಕ್ಕೊತಾರೆ… ಅಲ್ಲದೆ, ವಿಚಿತ್ರ ವೇಶಭೂಷಣ ಧರಿಸಿ ಗಮನ ಸೆಳೀತಾರೆ.. ಹುಡುಗ್ರು, ಹಿಡುಗೀರ ಉಡುಪು ಧರಸಿ ಖುಷಿ ಪಡ್ತಾರೆ.. ರೆಡಿಯಾದ ಯುವಕ್ರು, ತೋಟದಿಂದ ದುರ್ಗಾದೇವಿ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆರಳಿ ಪೂಜೆ ಸಲ್ಲಿಸುತ್ತಾರೆ.. ಅಲ್ಲಿಂದ ಆಟಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಂತಾಗುತ್ತೆ.. ಸುಮಾರು ಎರಡು ಗಂಟೆಗಳ ಕಾಲ ಸೆಗಣಿ ಆಟ ಆಡಿ ಯುವಕರು ಫುಲ್ ಎಂಜಾಯ್ ಮಾಡ್ತಾರೆ.

ಚರ್ಮ ರೋಗ ದೂರು ಮಾಡಲು ಸೆಗಣಿ ಆಟ..!

ಆಯುರ್ವೇದದಲ್ಲಿ ಸೆಗಣಿಗೆ ವಿಶೇಷ ಸ್ಥಾನ ಇದೆ.. ಸೆಗಣಿ ಇಲ್ಲದೇ ರೈತ್ರ ಜೀವನ ಊಹಿಸೋದಕ್ಕೆ ಸಾಧ್ಯವಿಲ್ಲ.. ರೈತ ಸಮುದಾಯ ಸಗಣೆಗೆ ದೈವ ಸ್ಥಾನ ನೀಡಿದೆ.. ಸೆಗಣಿಯ ಪಾವಿತ್ರತೆ ಸಾರುವ ನಿಟ್ಟಿನಲ್ಲಿ ಸಗಣೆ ಓಕುಳಿಯನ್ನ ನೂರಾರು ವರ್ಷದಿಂದ ನಡೆಸಿಕೊಂಡು ಬರಲಾಗ್ತಿದೆ.. ಅಲ್ದೆ, ಔಷಧಿಗುಣ ಹೊಂದಿರೋ ಸೆಗಣಿಯನ್ನ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ..

ಸೆಗಣಿಯ ಮಹತ್ವ ವನ್ನ ಸಾರುವ ಅತ್ಯಂತ ವಿಶಿಷ್ಟ ಆಚರಣೆ ನಡೆಯೋದು ಗದಗದಲ್ಲೆ.. ಸೆಗಣಿ ಇಲ್ಲದೇ ರೈತರ ಜೀವನ ಇಲ್ಲ ಅನ್ನೋ ಸಂದೇಶವನ್ನ ಈ ಆಚರಣೆ ಮೂಲಕ ಜನ ಮತ್ತೊಮ್ಮೆ ಸಾರಿದ್ದಾರೆ.. ಮನರಂಜನೆಯ ಆಟದ ಜೊತೆಗೆ ಯುವಕರಲ್ಲಿ ಸೆಗಣಿ ಮಹತ್ವ ಸಾರೋದು ಹಿರಿಯರ ಉದ್ದೇಶ ಆಗುತ್ತು.. ಹೀಗಾಗಿ ಇಂಥ ಆಚರಣೆ ಈಗ್ಲೂ ನಡ್ಕೊಂಡು ಬಂದಿವೆ…

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಲಾಲ್ ಬಾಗ್ ಫ್ಲವರ್ ಶೋಗೆ ಅದ್ದೂರಿ ಚಲಾನೆ : ಗಂಧದಗುಡಿಯ ಕುಡಿಗೆ ಪುಷ್ಪ ಗೌರವ.. ಅಪ್ಪು ನೋಡಿ ಭಾವುಕರಾದ ಜನರು!

Next Post

ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada