• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮುಖ್ಯಮಂತ್ರಿ ಆಗಲು ಬಯಸುವುದು ತಪ್ಪೇನಲ್ಲ, ಅಂತಿಮ ತೀರ್ಮಾನ ಹೈಕಮಾಂಡಿನದ್ದು -ಸಿದ್ದರಾಮಯ್ಯ

Any Mind by Any Mind
October 18, 2021
in Uncategorized
0
ಮುಖ್ಯಮಂತ್ರಿ ಆಗಲು ಬಯಸುವುದು ತಪ್ಪೇನಲ್ಲ, ಅಂತಿಮ ತೀರ್ಮಾನ ಹೈಕಮಾಂಡಿನದ್ದು -ಸಿದ್ದರಾಮಯ್ಯ
Share on WhatsAppShare on FacebookShare on Telegram

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು  ಸಿದ್ದರಾಮಯ್ಯ ಭೇಟಿಯಾದ ಬಳಿಕ  ಸಿದ್ದರಾಮಯ್ಯ ಅವರು ರಾಷ್ಟ್ರೀಯ ರಾಜಕಾರಣಕ್ಕಾಗಿ ರಾಜಕಾರಣದಿಂದ ನಿರ್ಗಮಿಸುವ ಊಹಾಪೋಹಗಳು ಎದ್ದಿದ್ದವು.

ಆದಾಗ್ಯೂ, ಇದು ಕೇವಲ ಊಹಾಪೋಹ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದೀಗ ಮತ್ತೆ ರಾಷ್ಟ್ರೀಯ ರಾಜಕಾರಣದಲ್ಲಿ ಆಸಕ್ತಿಯಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.

ದಿ ಪ್ರಿಂಟ್‌ಗೆ ನೀಡಿದ ಸಂದರ್ಶದ ವೇಳೆ “ಅಂತಹ ಯಾವುದೇ ಪ್ರಸ್ತಾಪವಿಲ್ಲ ಅಥವಾ ರಾಷ್ಟ್ರೀಯ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ. ನನ್ನ ರಾಜಕೀಯ ಜೀವನವು ಕರ್ನಾಟಕದಲ್ಲಿದೆ ಮತ್ತು ಅದು ಹಾಗೆಯೇ ಮುಂದುವರಿಯುತ್ತದೆ.” ಎಂದು ತಿಳಿಸಿದ್ದಾರೆ.

ಜೈಲಿಗೆ ಕಳುಹಿಸುತ್ತೇವೆ ಎಂದು ಬೆದರಿಸಿ ಬಿಜೆಪಿ ಹೈಕಮಾಂಡ್ ಬಿಎಸ್‌ವೈ ರಾಜೀನಾಮೆ ಪಡೆದಿದೆ: ಸಿದ್ದರಾಮಯ್ಯ

ADVERTISEMENT

ಮತ್ತೆ ಮುಖ್ಯಮಂತ್ರಿಯಾಗುವ ಆಸೆಯನ್ನು ನಿರಾಕರಿಸದ ಅವರು,  “ಹೈಕಮಾಂಡ್ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತದೆ ಆದರೆ, ಮೊದಲು, ನಾವು ಬಹುಮತದಿಂದ ಗೆಲ್ಲಬೇಕು. ನಂತರ ಶಾಸಕರು ಅವರ ಆಯ್ಕೆಯನ್ನು ನಿರ್ಧರಿಸಬೇಕು, ”ಎಂದು ಅವರು ಹೇಳಿದ್ದಾರೆ.

ಮೋದಿಯ ಜನಪ್ರಿಯತೆ ಕುಸಿದಿದೆ, ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರಲಿದೆ – ಸಿದ್ದರಾಮಯ್ಯ

ತಾವು ಮುಂದಿನ ಮುಖ್ಯಮಂತ್ರಿ ಎಂದು ಯಾರೂ ಹೇಳಿಕೊಳ್ಳಲು ಸಾಧ್ಯವಿಲ್ಲ. ನಾನು ಮುಖ್ಯಮಂತ್ರಿಯಾಗುತ್ತೇನೋ ಇಲ್ಲವೋ ಗೊತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ರಾಜ್ಯವನ್ನು ಹಾಳು ಮಾಡುತ್ತಿರುವ ಬಿಜೆಪಿಯನ್ನು ಸೋಲಿಸುವುದು ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.

“ಮುಖ್ಯಮಂತ್ರಿಯಾಗುವ ಆಕಾಂಕ್ಷೆಗಳಿವೆ ಎಂಬುದನ್ನು ನಾನು ನಿರಾಕರಿಸುವುದಿಲ್ಲ. ಮುಖ್ಯಮಂತ್ರಿಯಾಗಲು ಬಯಸುವುದರಲ್ಲಿ ತಪ್ಪೇನಿಲ್ಲ ಮುಖ್ಯಮಂತ್ರಿ ಆಗಬೇಕೆಂಬ ಕಾರಣಕ್ಕೆ ಪಕ್ಷದ ನಾಯಕರೊಳಗೆ ಭಿನ್ನಾಭಿಪ್ರಾಯಗಳಿಲ್ಲ, ”ಎಂದು ಅವರು ಹೇಳಿದ್ದಾರೆ.

“ಜಿ. ಪರಮೇಶ್ವರ, ಡಿ.ಕೆ. ಶಿವಕುಮಾರ್ ಮತ್ತು ಎಂ.ಬಿ. ಪಾಟೀಲ್ ಮೊದಲಾದವರೂ ಸಿಎಂ ಆಗಬೇಕೆಂದು ಆಸೆ ಹೊಂದಿದ್ದಾರೆ.  ಆದರೆ, ಅಂತಿಮವಾಗಿ, ಎಲ್ಲರೂ ಹೈಕಮಾಂಡ್ ಹೇಳುವುದನ್ನು ಕೇಳುತ್ತಾರೆ. ನಾನು ಕೂಡ ಹೈಕಮಾಂಡ್ ಹೇಳುವುದನ್ನು ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ

ಡಿಕೆ ಶಿವಕುಮಾರ್‌ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಒತ್ತಿ ಹೇಳಿದ ಅವರು ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ. ನಾವು ಒಗ್ಗಟ್ಟಾಗಿದ್ದೇವೆ ಮತ್ತು ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Previous Post

ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ – ಜಮೀರ್ ಅಹಮದ್

Next Post

ದೇವಸ್ಥಾನ ಜಾತ್ರೆಯ ದಿನ ಬೆಳಿಗ್ಗೆ 11 ಗಂಟೆಯವರೆಗೆ ಮುಸಲ್ಮಾನನೊಬ್ಬ ಅಂಗಡಿಯನ್ನು ತೆರೆದಿರುವುಕ್ಕೆ ಆಕ್ರೋಶ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ದೇವಸ್ಥಾನ ಜಾತ್ರೆಯ ದಿನ ಬೆಳಿಗ್ಗೆ 11 ಗಂಟೆಯವರೆಗೆ  ಮುಸಲ್ಮಾನನೊಬ್ಬ ಅಂಗಡಿಯನ್ನು ತೆರೆದಿರುವುಕ್ಕೆ ಆಕ್ರೋಶ

ದೇವಸ್ಥಾನ ಜಾತ್ರೆಯ ದಿನ ಬೆಳಿಗ್ಗೆ 11 ಗಂಟೆಯವರೆಗೆ ಮುಸಲ್ಮಾನನೊಬ್ಬ ಅಂಗಡಿಯನ್ನು ತೆರೆದಿರುವುಕ್ಕೆ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada