ಪ್ರವಾದಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ತಲೆಮರೆಸಿಕೊಂಡಿರುವ ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ವಿರುದ್ಧದ ಎಲ್ಲಾ ಪ್ರಕರಣಗಳ ತನಿಖೆಯ ಜವಾಬ್ದಾರಿಯನ್ನು ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ಹಸ್ತಾಂತರಿಸಿದೆ.
ಬೇರೆ ಬೇರೆ ರಾಜ್ಯಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಒಂದೆ ಕಡೆ ವಿಚಾರಣೆ ನಡೆಸುವಂತೆ ನೂಪುರ್ ಶರ್ಮ ನ್ಯಾಯಾಲಯದ ಬಾಗಿಲನ್ನು ಪದೆಪದೆ ಬಡಿದಿದ್ದರು. ಕೊನೆಗೂ ಅವರ ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ದೆಹಲಿ ಪೊಲೀಸರಿಗೆ ವರ್ಗಾಯಿಸಿದೆ.
ನೂಪುರ್ ಶರ್ಮ ವಿರುದ್ಧ ದೇಶದ ವಿವಿಧ ಜಿಲ್ಲೆಗಳಲ್ಲಿ ದೂರು ದಾಖಲಾಗಿದ್ದು, ಎಫ್ ಐಆರ್ ಮಾಡಲಾಗಿದೆ. ಈ ಎಲ್ಲಾ ಎಫ್ ಐಆರ್ ಗಳನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ದೆಹಲಿ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಗೃಹ ಸಚಿವ ಅಮಿತ್ ಶಾ ಅವರ ವ್ಯಾಪ್ತಿಗೆ ಇದು ಬರಲಿದೆ.