• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ನವೆಂಬರ್ 19: 580 ವರ್ಷಗಳಲ್ಲೇ ಅತ್ಯಂತ ಸುದೀರ್ಘ ಚಂದ್ರಗ್ರಹಣವು ಭಾರತದಲ್ಲಿ ಸಂಭವಿಸಲಿದೆ

ಫಾತಿಮಾ by ಫಾತಿಮಾ
November 15, 2021
in ಅಭಿಮತ
0
ನವೆಂಬರ್ 19: 580 ವರ್ಷಗಳಲ್ಲೇ ಅತ್ಯಂತ ಸುದೀರ್ಘ ಚಂದ್ರಗ್ರಹಣವು ಭಾರತದಲ್ಲಿ ಸಂಭವಿಸಲಿದೆ
Share on WhatsAppShare on FacebookShare on Telegram

ನವೆಂಬರ್ 19 ರಂದು ಪಾರ್ಶ್ವ ಚಂದ್ರಗ್ರಹಣವು ಗೋಚರಿಸಲಿದ್ದು 580 ವರ್ಷಗಳಲ್ಲಿ ಇದು ಅತ್ಯಂತ ಸುದೀರ್ಘ ಚಂದ್ರಗ್ರಹಣವಾಗಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.  ಫೆಬ್ರವರಿ 18, 1440 ರಂದು ಕೊನೆಯ ಬಾರಿಗೆ ಅಂತಹ ದೀರ್ಘ ಪಾರ್ಶ್ವ ಚಂದ್ರಗ್ರಹಣ ಸಂಭವಿಸಿತ್ತು ಮತ್ತು ಮುಂದಿನ ಬಾರಿ ಇದೇ ರೀತಿಯ ಗ್ರಹಣವು ಫೆಬ್ರವರಿ 8, 2669 ರಂದು ಸಂಭವಿಸಲಿದೆ ಎಂದು ಖಗೋಳ ವಿಜ್ಞಾನಿಗಳು ವಿವರಿಸಿದ್ದಾರೆ.

ADVERTISEMENT

ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬಂದಾಗ ಭಾಗಶಃ ಚಂದ್ರಗ್ರಹಣ ಸಂಭವಿಸುತ್ತದೆ. ಸಾಮಾನ್ಯವಾಗಿ ಸೂರ್ಯ, ಭೂಮಿ ಮತ್ತು ಚಂದ್ರ ಒಂದೇ ಸರಳ ರೇಖೆಯಲ್ಲಿದ್ದಾಗ ಗ್ರಹಣ ಸಭವಿಸುತ್ತದೆ. ಆದರೆ ಪಾರ್ಶ್ವ ಚಂದ್ರಗ್ರಹಣವು ಇವು ಪರಿಪೂರ್ಣ ಸರಳ ರೇಖೆಯಲ್ಲಿ ಇಲ್ಲದಿದ್ದಾಗ ಮಾತ್ರ ಸಂಭವಿಸುತ್ತದೆ. ಚಂದ್ರನ ಒಂದು ಸಣ್ಣ ಭಾಗವು ಭೂಮಿಯ ನೆರಳಿನಿಂದ ಮುಚ್ಚಲ್ಪಟ್ಟು ನಾವು ಕೆಂಪು ಚಂದ್ರನನ್ನೂ ನೋಡಬಹುದು. 

ಭಾಗಶಃ ಚಂದ್ರಗ್ರಹಣವು ಉತ್ತರ ಅಮೆರಿಕಾ, ದಕ್ಷಿಣ ಅಮೆರಿಕಾ, ಪೂರ್ವ ಏಷ್ಯಾ, ಆಸ್ಟ್ರೇಲಿಯಾ ಮತ್ತು ಪೆಸಿಫಿಕ್ ಪ್ರದೇಶದಲ್ಲಿ ಗೋಚರಿಸಲಿದೆ. ಭಾರತದಲ್ಲಿ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂನ ಒಂದು ಸಣ್ಣ ಭಾಗದಲ್ಲಿ ಭಾಗಶಃ ಗ್ರಹಣವು ಗೋಚರಿಸಲಿದೆ ಎಂದು  ಎಂಪಿ ಬಿರ್ಲಾ ತಾರಾಲಯದ ಸಂಶೋಧನಾ ಮತ್ತು ಶೈಕ್ಷಣಿಕ ನಿರ್ದೇಶಕ ಡಬಿಪ್ರೋಸಾದ್ ದುವಾರಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ದುವಾರಿ ಅವರು “ಪಾರ್ಶ್ವ ಗ್ರಹಣವು ಸುಮಾರು 12:48 IST ಗೆ ಪ್ರಾರಂಭವಾಗುತ್ತದೆ ಮತ್ತು 16:17 IST ಗೆ ಕೊನೆಗೊಳ್ಳುತ್ತದೆ.  ಭಾಗಶಃ ಗ್ರಹಣದ ಅವಧಿಯು 3 ಗಂಟೆ 28 ನಿಮಿಷಗಳು ಮತ್ತು 24 ಸೆಕೆಂಡುಗಳವರೆಗೆ ಇರುತ್ತದೆ, ಇದು 21 ನೇ ಶತಮಾನದ ಸುದೀರ್ಘ ಗ್ರಹಣವಾಗಿದೆ ಮತ್ತು ಕಳೆದ 600 ವರ್ಷಗಳಲ್ಲಿ ಅತಿ ಉದ್ದವಾಗಿದೆ” ಎಂದಿದ್ದಾರೆ.

ಭಾಗಶಃ ಚಂದ್ರಗ್ರಹಣ ಮಾತ್ರವಲ್ಲದೆ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್‌ನವರು ಪೆನಂಬ್ರಲ್ ಗ್ರಹಣದ ಕೊನೆಯ ಭಾಗವನ್ನು  ಅದೇ ದಿನ ನೋಡಬಹುದು.  ಚಂದ್ರ, ಸೂರ್ಯ ಮತ್ತು ಭೂಮಿಯನ್ನು ಅಪೂರ್ಣವಾಗಿ ಜೋಡಿಸಿದಾಗ ಮತ್ತು ಚಂದ್ರನು ಪೆನಂಬ್ರಾ ಎಂದು ಕರೆಯಲ್ಪಡುವ ಭೂಮಿಯ ನೆರಳಿನ ಹೊರ ಭಾಗದ ಮೂಲಕ ಚಲಿಸಿದಾಗ ಪೆನಂಬ್ರಾಲ್ ಚಂದ್ರ ಗ್ರಹಣ ಸಂಭವಿಸುತ್ತದೆ ಎಂದು‌ ಖಗೋಳ ವಿಜ್ಞಾನಿಗಳು ವಿವರಿಸಿದ್ದಾರೆ.

ಭಾಗಶಃ ಗ್ರಹಣಕ್ಕೆ ಮುಂಚಿನ ಮತ್ತು ನಂತರದ ಪೆನಂಬ್ರಾಲ್ ಗ್ರಹಣವು ಸುಮಾರು 11:32 IST ಗೆ ಪ್ರಾರಂಭವಾಗಿ ಮತ್ತು 17:33 IST ಕ್ಕೆ ಕೊನೆಗೊಳ್ಳಲಿದೆ.  ಭಾಗಶಃ ಗ್ರಹಣದಲ್ಲಿ, ಭಾರತೀಯ ಕಾಲಮಾನದ ಪ್ರಕಾರ ಸುಮಾರು 14:34ಕ್ಕೆ ಚಂದ್ರನ 97% ಭೂಮಿಯ ನೆರಳಿನಿಂದ ಮುಚ್ಚಲ್ಪಡುತ್ತದೆ ಮತ್ತು ಚಂದ್ರನು ರಕ್ತ ಕೆಂಪು ಬಣ್ಣದಲ್ಲಿ ಕಾಣಿಸಿಕೊಳ್ಳಲಿದೆ. ಇದು ಸೂರ್ಯನ ಬೆಳಕಿನ ಕೆಂಪು ಭಾಗವು ಭೂಮಿಯ ಮೂಲಕ ಹಾದುಹೋಗಬೇಕಾಗಿದ್ದು ಆದರೆ ವಾತಾವರಣದ ಕಡಿಮೆ ವಿಚಲನದಿಂದಾಗಿ ನೇರವಾಗಿ ಚಂದ್ರನ ಮೇಲೆ ಬೀಳುವುದರಿಂದ ಸಂಭವಿಸಲಿದೆ.  ಇದು ಚಂದ್ರನಿಗೆ ಅಪರೂಪದ ಕೆಂಪು ಛಾಯೆ ನೀಡಲಿದೆ.

ಮುಂದಿನ ಸಂಪೂರ್ಣ ಚಂದ್ರಗ್ರಹಣವು ಮೇ 16, 2022 ರಂದು ಸಂಭವಿಸಲಿದೆ. ಆದರೆ ಇದು ಭಾರತದಲ್ಲಿ ಗೋಚರಿಸುವುದಿಲ್ಲ.  ನವೆಂಬರ್ 8, 2022 ರಂದು ಭಾರತದಲ್ಲಿ ಮುಂದಿನ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ.

Tags: Indiamooneclipsenovember
Previous Post

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

Next Post

3.9 ಕೋಟಿ ಅಸಂಘಟಿತ ಕಾರ್ಮಿಕರಿಗೆ ಸಬ್ಸಿಡಿಯೇ ಇಲ್ಲ!

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
3.9 ಕೋಟಿ ಅಸಂಘಟಿತ ಕಾರ್ಮಿಕರಿಗೆ ಸಬ್ಸಿಡಿಯೇ ಇಲ್ಲ!

3.9 ಕೋಟಿ ಅಸಂಘಟಿತ ಕಾರ್ಮಿಕರಿಗೆ ಸಬ್ಸಿಡಿಯೇ ಇಲ್ಲ!

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada