• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವ ಹೈ ವೋಲ್ಟೇಜ್ ಸಭೆಯತ್ತ ಇದೀಗ ಎಲ್ಲರ ಚಿತ್ತ..!

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವ ಹೈ ವೋಲ್ಟೇಜ್ ಸಭೆಯತ್ತ ಇದೀಗ ಎಲ್ಲರ ಚಿತ್ತ..!
Share on WhatsAppShare on FacebookShare on Telegram

ಇದೀಗ ರಾಜ್ಯದ ಎಲ್ಲರ ಚಿತ್ತ ಭದ್ರಾ ಡ್ಯಾಂನತ್ತ ನೆಟ್ಟಿದೆ. ಯಾಕೆಂದರೆ ಭದ್ರಾ ಜಲಾಶಯದಿಂದ ಆಗಸ್ಟ್ 10ರಿಂದ ನೀರು ಹರಿಸಲಾಗುತ್ತಿದೆ. ಇದು ಈಗ ಪರ -ವಿರೋಧಕ್ಕೂ ಕಾರಣವಾಗಿದೆ. ಈ ಬೆಳವಣಿಗೆ ನಡುವೆಯೇ ಸೆಪ್ಟಂಬರ್ 6 ರಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಕಾಡ ಸಭೆ ಕರೆದಿದ್ದು, ನೀರು ನಿರ್ವಹಣಾ ಸಮಿತಿಯು ಯಾವ ನಿರ್ಧಾರಕ್ಕೆ ಬರುತ್ತದೆ ಎಂಬ ಕುತೂಹಲವೂ ಎಲ್ಲರಲ್ಲೂ ಸಾಕಷ್ಟು ಮನೆ ಮಾಡಿದೆ. ಹೀಗಾಗಿ ಯಾವ ರೀತಿಯಾದಂತಹ ನಿರ್ಧಾರಗಳು ಹೊರ ಬೀಳುತ್ತವೆ ಅನ್ನೋದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ರಾಜ್ಯದ ಜಿಲ್ಲೆಗಳಾದಂತಹ ಶಿವಮೊಗ್ಗ, ಚನ್ನಗಿರಿ ಸೇರಿದಂತೆ ಹಲವೆಡೆ ಈಗಾಗಲೇ ಭದ್ರಾ ಡ್ಯಾಂನಿಂದ ನೀರು ಹರಿಸುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗ್ತಿದೆ. ಪ್ರತಿಭಟನೆಗಳೂ ನಡೆಯುತ್ತಿವೆ. ಇನ್ನು ದಾವಣಗೆರೆಯಲ್ಲಿ ನೀರು ಹರಿಸುತ್ತಿರುವ ಕ್ರಮ ಸರಿಯಾಗಿಯೇ ಇದೆ. ಇದನ್ನು ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಪುನರ್ ಪರಿಶೀಲನೆ ಮಾಡಬಾರದು. ಈಗ ತೆಗೆದುಕೊಂಡಿರುವ ನಿರ್ಧಾರವೇ ಮುಂದುವರೆಯಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ನಡುವೆ ಭಾರತೀಯ ರೈತ ಒಕ್ಕೂಟವು ಸೆಪ್ಟೆಂಬರ್ 5ಕ್ಕೆ ಸಭೆ ಕರೆದಿದೆ.

ಕಬ್ಬು ಇತರೆ ಬೆಳೆಗಳನ್ನು ನೀರಿಗೆ ತಕ್ಕಂತೆ ಬೆಳೆಯಲಾಗುತ್ತಿದೆ. ಆದರೆ ಸೆಪ್ಟೆಂಬರ್ 6ಕ್ಕೆ ಕಾಡಾ ಸಭೆಯನ್ನು ಕರೆದು ಮರು ತೀರ್ಮಾನಕ್ಕೆ ಸಜ್ಜಾಗಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಮರು ತೀರ್ಮಾನವಾಗದಂತೆ ತಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಕ್ಷಾತೀತವಾಗಿ ಆಗಮಿಸುವಂತೆ ಒಕ್ಕೂಟದ ಅಧ್ಯಕ್ಷ ಹೆಚ್.ಆರ್.ಲಿಂಗರಾಜ ಮನವಿ ಮಾಡಿದ್ದಾರೆ.

ನೀರಾವರಿ ಇಲಾಖೆಯು ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆ ಆನವೇರಿ ಶಾಖಾನಾಲೆ, ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾನಾಲೆ ಹರಿಹರ ಮತ್ತು ಗೋಂದಿ ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು.

ಇನ್ನೊಂದೆಡೆ ಸಭೆ ರದ್ದುಪಡಿಸಲು ಒತ್ತಾಯ
ಭದ್ರಾ ನೀರು ಹರಿಸುವ ವೇಳಾಪಟ್ಟಿಯನ್ನು ಪರಿಷ್ಕರಿಸಲು ಸೆಪ್ಟೆಂಬರ್ 6ರಂದು ಐಸಿಸಿ ಸಭೆಯನ್ನು ಕರೆಯಲಾಗಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಈ ಸಭೆ ರದ್ದುಪಡಿಸಲು ಒತ್ತಾಯಿಸಬೇಕು. ಶಿವಮೊಗ್ಗದ ಮಲವಗೊಪ್ಪದಲ್ಲಿನ ಕಾಡಾ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಸಭೆ ಕರೆದಿದ್ದು, ಈ ಸಭೆ ನಡೆಸದಂತೆ ಸೂಚಿಸಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ.

ಓಟ್ಟಾರೆಯಾಗಿ ಭದ್ರಾ ಡ್ಯಾಂನಿಂದ ಎಷ್ಟು ಟಿಎಂಸಿ ನೀರು ಹೊರಬರಲಿದೆ..? ಮತ್ತು ಅಚ್ಚುಕಟ್ಟು ಪ್ರದೇಶಗಳಿಗೆ ಯಾವ ಪ್ರಮಾಣದಲ್ಲಿ ನೀರು ಸಿಗಲಿದೆ ಮತ್ತು ಈ ಸಭೆ ಏನಾದ್ರೂ ರದ್ದುಗೊಳ್ಳುವ ಸಾಧ್ಯತೆಗಳಿವೆಯಾ ಅಂತಾ ಪ್ರಶ್ನೆಗಳು ಮನೆ ಮಾಡಿವೆ.

Tags: BJPHigh Court of KarnatakaJDSKrishna RiverKRSsupreme courtTunga Bhadra Dam
Previous Post

ಅಂಕಣ | ಗೌರಿ ಲಂಕೇಶ್ ಕೊಲೆಯಾದಾಗ ವಿಕೃತಿ ಮೆರೆದಿದ್ದ ಜಾತಿವ್ಯಾಧಿ ಮಾಧ್ಯಮಗಳು

Next Post

ಇಂದು ದೇಶದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಇಂದು ದೇಶದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

ಇಂದು ದೇಶದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada