• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

by
February 4, 2020
in ದೇಶ
0
NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?
Share on WhatsAppShare on FacebookShare on Telegram

ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಎನ್‌ಆರ್‌ಸಿ ದೇಶದಾದ್ಯಂತ ಜಾರಿಗೊಳಿಸುತ್ತೇವೆ ಎಂದು ಖಡಾಖಂಡಿತವಾಗಿ ಹೇಳಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸಮಾವೇಶವೊಂದರಲ್ಲಿ ಮಾತನಾಡುತ್ತಾ ಇದನ್ನು ನಿರಾಕರಿಸಿದ್ದರು. ಇದರಿಂದಾಗಿ ಎನ್‌ಆರ್‌ಸಿ ಜಾರಿ ಮಾಡುವ ಕುರಿತು ಬಿಜೆಪಿಯಲ್ಲೇ ಗೊಂದಲ ಮೂಡಿದೆಯೇ ಎಂದ ಪ್ರಶ್ನೆ ಎಲ್ಲೆಡೆಯಿಂದ ಕೇಳಿ ಬಂದಿತ್ತು. ಹಾಗೂ ಈ ರೀತಿಯ ಹೇಳಿಕೆಗಳಿಂದ ಭಾರತೀಯರಲ್ಲಿ ಮತ್ತಷ್ಟು ಗೊಂದಲ ಮನೆ ಮಾಡಿತ್ತು.

ADVERTISEMENT

ಇಂದು ಸಂಸತ್ತಿನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಕುರಿತಾದ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಕೇಂದ್ರ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇದುವರೆಗೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಸಂಸತ್‌ಗೆ ಸ್ಪಷ್ಟಪಡಿಸಿದೆ. ಸಿಎಎ ಜೊತೆಗೆ ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ತರಲಾಗುವುದು ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರದ ಎನ್‌ಆರ್‌ಸಿ ಜಾರಿ ಇಲ್ಲ ಎಂದಿದೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಳಿರುವ ಪ್ರಶ್ನೆಯೊಂದಕ್ಕೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಲಿಖಿತ ರೂಪದಲ್ಲಿ ಉತ್ತರಿಸಿ, ಎನ್‌ಆರ್‌ಸಿ ರಾಷ್ಟ್ರೀಯ ಮಟ್ಟದಲ್ಲಿ ಜಾರಿಗೆ ತರವ ನಿರ್ಧಾರವನ್ನು ಇದುವರೆಗೂ ಕೇಂದ್ರ ಸರಕಾರ ಮಾಡಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಗ್ಗೆ ದೇಶದಲ್ಲಿ ದೊಡ್ಡ ಚರ್ಚೆಯೇ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಎನ್‌ಆರ್‌ಸಿ ಪರಿಷ್ಕೃತ ಕರಡು ಪಟ್ಟಿಯಿಂದಾಗಿ ಅಸ್ಸಾಂ ಜನರ ಪ್ರಜಾಪ್ರಭುತ್ವ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ.

ಕೆಲ ದಿನಗಳಿಂದ ದೆಹಲಿಯಲ್ಲಿ ಸಿಎಎ, ಎನ್ಆರ್ ಸಿ ಕುರಿತಾಗಿ ಉದ್ವಿಗ್ನ ವಾತಾವರಣ ಇಡೀ ದೇಶದಲ್ಲಿ ಸೃಷ್ಟಿಯಾಗಿದೆ. ದೆಹಲಿ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಯಾಗಿದೆ. ಚುನಾವಣಾ ತಂತ್ರಗಾರಿಕೆಗೋ ಅಥವಾ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕಾರಣಕ್ಕೋ ಎನ್‌ಆರ್‌ಸಿಯ ಕುರಿತಾದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಕೇಂದ್ರ ಮಾಡುತ್ತಿದೆ.

ಈ ಹಿಂದೆ ಗೃಹ ಸಚಿವ ಅಮಿತ್ ಶಾ ದೇಶಾದ್ಯಂತ ಸಿಎಎ ಜಾರಿಗೊಳಿಸಲಾಗಿದೆ, ಇದರ ಬೆನ್ನಲ್ಲೇ ಎನ್‌ಆರ್‌ಸಿ ಯನ್ನೂ ಜಾರಿಗೊಳಿಸಲಾಗುವುದು. ಅಸ್ಸಾಂನಲ್ಲಿ ಎನ್‌ಆರ್‌ಸಿ ಯನ್ನು ಜಾರಿಗೊಳಿಸಿದಂತೆ ದೇಶವ್ಯಾಪಿಗೊಳಿಸಲಾಗುವುದು. ಸಿಎಎ ನಂತರ ಎನ್‌ಆರ್‌ಸಿ ಜಾರಿ ಖಚಿತ’ ಎಂದು ಹೇಳಿಕೆ ನೀಡಿದ್ದರು. ಇದೀಗ ಗೃಹ ಸಚಿವಾಲಯ ಎನ್‌ಆರ್‌ಸಿ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ ಎಂದು ಲಿಖಿತ ರೂಪದಲ್ಲಿ ಸ್ಪಷ್ಟಪಡಿಸಿದೆ. ಇದಕ್ಕಾಗಿ ಸರ್ಕಾರವು ಪ್ರತ್ಯೇಕವಾಗಿ 8,754 ಕೋಟಿ ರೂ ವ್ಯಯಿಸಬೇಕಾಗುತ್ತದೆ. ಗೃಹ ಸಚಿವರು

ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ಎನ್‌ಆರ್‌ಸಿ, ಎನ್‌ಪಿಆರ್ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ದೆಹಲಿಯ ಶಾಹಿನ್ ಭಾಗ್‌ನಲ್ಲಿ ಮಹಿಳೆಯರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತ್ತಿದೆ. ಜಾಮಿಯಾ ಮಿಲಿಯಾ ಮತ್ತು ಶಾಹಿನ್ ಭಾಗ್ನಲ್ಲಿ ಗುಂಡಿನ ಸದ್ದೂ ಕೇಳಿಸಿವೆ. ಸಂಸತ್ ಅಧಿವೇಶನದಲ್ಲೂ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ನಿಜವಾಗಿಯೂ ತನ್ನ ಮನಸ್ಸನ್ನು ಬದಲಿಸಿದ್ದಾರೆಯೇ, ಅಥವಾ ಎನ್‌ಆರ್‌ಸಿ ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ದೊಡ್ಡ ಪ್ರಮಾಣದ ಪ್ರತಿಭಟನೆಯಿಂದಾದ ಹಿನ್ನಡೆಯೇ ? ಒಂದು ವೇಳೆ ನಿಜವಾಗಿಯೂ ಎನ್‌ಆರ್‌ಸಿಯನ್ನು ಜಾರಿಗೆ ತರುವ ಕುರಿತು ಚರ್ಚೆ ನಡೆಯದೇ ಇದ್ದಲ್ಲಿ, ಅಮಿತ್‌ ಶಾ ಸಂಸತ್ತಿನಲ್ಲಿ ಸುಳ್ಳು ಹೇಳಿದರೇ? ಎನ್ನುವುದು ಇದೀಗ ಎದ್ದಿರುವ ಪ್ರಶ್ನೆಯಾಗಿದೆ.

Tags: NRCಅಮಿತ್ ಶಾ
Previous Post

ಸರ್ದಾರ್‌ ಪಟೇಲರು ಆರ್‌ಎಸ್‌ಎಸ್‌ ನಿಷೇಧಿಸಿ ಇಂದಿಗೆ 72 ವರ್ಷ

Next Post

ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ

ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada