• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒಕ್ಕಲಿಗರು, ಲಿಂಗಾಯತರನ್ನು ಎದುರು ಹಾಕಿಕೊಳ್ಳುತ್ತಾ ಸರ್ಕಾರ..?

Any Mind by Any Mind
October 11, 2023
in ಕರ್ನಾಟಕ
0
ಒಕ್ಕಲಿಗರು, ಲಿಂಗಾಯತರನ್ನು ಎದುರು ಹಾಕಿಕೊಳ್ಳುತ್ತಾ ಸರ್ಕಾರ..?
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಪ್ರಭಾವ ಹೊಂದಿರುವ ಜಾತಿಗಳು ಎಂದರೆ ಒಕ್ಕಲಿಗರು ಹಾಗು ಲಿಂಗಾಯತರು ಎನ್ನುವುದು ಅಲಿಖಿತ ನಿಯಮ. ಯಾವುದೇ ಸರ್ಕಾರ ಜಾರಿಗೆ ಬಂದರೂ ಯಾವುದೇ ನಾಯಕರು ಮುಖ್ಯಮಂತ್ರಿ ಆದರೂ ಕೂಡ ಸಚಿವ ಸಂಪುಟದಲ್ಲಿ ಲಿಂಗಾಯತ ಹಾಗು ಒಕ್ಕಲಿಗ ಸಮುದಾಯ ನಾಯಕರು ಪ್ರಮುಖ ಖಾತೆಗಳು ಹಾಗು ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ ಎನ್ನುವುದು ಇಲ್ಲೀವರೆಗೂ ನಡೆದುಕೊಂಡು ಬಂದಿರುವ ವಿಚಾರ. ಆದರೆ ಇನ್ಮುಂದೆ ಈ ರೀತಿ ರಾಜಕೀಯ ಪ್ರಭಾವ ಕಡಿಮೆ ಆಗುತ್ತೆ ಅನ್ನೋ ಆತಂಕ ಎರಡೂ ಸಮುದಾಯದ ನಾಯಕರನ್ನು ಕಾಡುತ್ತಿದೆ. ಇದಕ್ಕೆ ಜಾತಿಗಣತಿ ಕಾರಣ ಆಗಿದೆ. ಈ ರೀತಿಯ ಆತಂಕವನ್ನು ಸೃಷ್ಟಿಸಿರುವುದು ಸಿದ್ದರಾಮಯ್ಯ ಸರ್ಕಾರ ತೆಗೆದುಕೊಳ್ತಿರೋ ನಿರ್ಧಾರ.

ಜಾತಿಗಣತಿ ಬಿಡುಗಡೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ..

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿಗಣತಿ ಮಾಡಿಸುವುದಾಗಿ ಈಗಾಗಲೇ ರಾಹುಲ್‌ ಗಾಂಧಿ ಘೋಷಣೆ ಮಾಡಿ ಆಗಿದೆ. ಆದರೆ ಅದಕ್ಕೂ ಮೊದಲೇ ಕರ್ನಾಟಕದಲ್ಲಿ ಈಗಾಗಲೇ ತಯಾರಾಗಿರುವ ಜಾತಿಗಣತಿ ಬಿಡುಗಡೆ ಮಾಡಲು ಅಂದಿನ ಕಾಂಗ್ರೆಸ್‌ ಸರ್ಕಾರ ಹಿಂದೇಟು ಹಾಕಿತ್ತು. ಆ ಬಳಿಕ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲೂ ಮೌನಕ್ಕೆ ಶರಣಾಗಿತ್ತು. ಆ ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿ ಮಾತ್ರ ಜಾತಿಗಣತಿ ಬಿಡುಗಡೆ ಮಾಡುವ ಬಗ್ಗೆ ಚಕಾರ ಎತ್ತದೆ ಸುಮ್ಮನಾಗಿತ್ತು. ಆದರೀಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಜಾತಿಗಣತಿ ಬಿಡುಗಡೆ ಮಾಡಲು ತುದಿಗಾಲಲ್ಲಿ ನಿಂತಿದೆ. ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಕೂಡ ಒಕೆ ಹೇಳಿದೆ ಎನ್ನಲಾಗಿದೆ. ಅದರಲ್ಲೂ ರಾಹುಲ್‌ ಗಾಂಧಿ ಜಾತಿಗಣತಿ ಬಗ್ಗೆ ಬಹಿರಂಗ ಹೇಳಿಕೆ ಜೊತೆಗೆ ಕರ್ನಾಟಕದಲ್ಲಿ ಬಿಡುಗಡೆ ಮಾಡುವಂತೆಯೂ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಜಾತಿಗಣತಿ ಬಿಡುಗಡೆಗೆ ಚರ್ಚೆ ನಡೆಸಿರುವ ಸಿಎಂ ಸಿದ್ದರಾಮಯ್ಯ..

ಜಾತಿಗಣತಿ ಬಿಡುಗಡೆಗೆ ಕಾಂಗ್ರಸ್‌ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದ ಹಾಗೆ ರಾಜ್ಯ ಸರ್ಕಾರ ಆ್ಯಕ್ಟೀವ್ ಆಗಿದ್ದು, ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಹೊಂದಿರೋ ಪ್ರಬಲ ಜಾತಿಗಳ ವಿರೋಧದ ನಡುವೆಯೂ ಜಾತಿಗಣತಿ ಬಿಡುಗಡೆಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಪ್ರಬಲ ನಾಯಕರ ವಿರೋಧ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೈ ಕೊಡುತ್ತಾರಾ..? ಅನ್ನೋ ಲೆಕ್ಕಾಚಾರವೂ ಶುರುವಾಗಿದೆ. ಲಾಭ ತರುವ ಲೆಕ್ಕಾಚಾರದಲ್ಲಿ ವರದಿ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಚಿಂತನೆ ಮಾಡಿದ್ದಾರೆ ಎನ್ನಲಾಗ್ತಿದೆ. ರಾಹುಲ್ ಗಾಂಧಿ ಅಭಯ ಸಿಕ್ಕಿರುವ ಹಿನ್ನೆಲೆ, ಜಾತಿಗಣತಿ ಬಿಡುಗಡೆಗೆ ಉತ್ಸುಕತೆ ತೋರಿಸಿದ್ದು, ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಸಭೆ ಮಾಡಿದ್ದಾರೆ. ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಜೊತೆಗೂ ಸಭೆ ಮಾಡಿದ್ದು, ವರದಿಯ ಕೆಲಸದ ಬಗ್ಗೆ ವಿಸ್ತೃತ ಚರ್ಚೆ ಮಾಡಿದ್ದು, ಯಾವ ಹಂತದಲ್ಲಿ ಕೆಲಸ ಸಾಗುತ್ತಿದೆ..? ವರದಿಯನ್ನು ಯಾವಾಗ ಕೊಡಬಹುದು. ವರದಿಯ ಸಾಧಕ- ಬಾಧಕಗಳ ಬಗ್ಗೆ ಸಭೆ ನಡೆಸಲಾಗಿದೆ.

ಕಾಂಗ್ರೆಸ್‌ಗೆ ರಾಜಕೀಯ ಲಾಭ ತರುವುದು ಹೇಗೆ..?

ಕಾಂಗ್ರೆಸ್‌ ಜಾತಿಗಣತಿ ಹಿಂದೆ ಬಿದ್ದಿರುವುದು ಸರಿಯೋ ತಪ್ಪೋ..? ಅನ್ನೋದು ಬೇರೆ ಸಂಗತಿ. ಆದರೆ ಕಾಂಗ್ರೆಸ್‌ ಮಾತ್ರ ರಾಜಕೀಯ ಲಾಭ ತಂದುಕೊಂಡುವ ಲೆಕ್ಕಾಚಾರದಲ್ಲಿದೆ. ರಾಜ್ಯದಲ್ಲಿ ಒಕ್ಕಲಿಗರು ಹಾಗು ಲಿಂಗಾಯತ ಸಮುದಾಯ ರಾಜಕೀಯವಾಗಿ ಹೆಚ್ಚಿನ ಶಕ್ತಿ ಪಡೆದುಕೊಂಡಿದೆ. ಆದರೆ ರಾಜ್ಯದಲ್ಲಿ ಪರಿಶಿಷ್ಟ ವರ್ಗ ಹಾಗು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆ ಇದ್ದಾರೆ. ಅದೇ ರೀತಿಯಲ್ಲಿ ಮುಸ್ಲಿಮರು ಕೂಡ ಹೆಚ್ಚಿನ ಜನಸಂಖ್ಯೆ ಹೊಂದಿದ್ದಾರೆ ಎನ್ನುವುದು ವರದಿಯಲ್ಲಿದೆ ಎನ್ನಲಾಗ್ತಿದೆ. ಈ ಸಮುದಾಯಗಳು ರಾಜ್ಯದಲ್ಲಿ ಹೆಚ್ಚಾಗಿದ್ದಾರೆ ಎಂದು ರಾಜ್ಯದ ಎದುರಿಗೆ ಇಟ್ಟರೆ, ಆ ಸಮುದಾಯಗಳ ಮತಗಳು ಕಾಂಗ್ರೆಸ್‌ಗೆ ಬರಲಿವೆ ಅನ್ನೋದು ಕಾಂಗ್ರೆಸ್‌‌ ನಾಯಕರ ಲೆಕ್ಕ. ಅದೂ ಸತ್ಯವೂ ಕೂಡ ಇರಬಹುದು. ಈಗಾಗಲೇ ಕಳೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಕಾಂಗ್ರೆಸ್‌‌ ಬೆಂಬಲಿಸಿತ್ತು. ಇದೀಗ ಬಲಾಢ್ಯ ಸಮುದಾಯಗಳು ಪರಿಶಿಷ್ಟ ವರ್ಗ ಹಾಗು ಪರಿಶಿಷ್ಟ ಪಂಗಡ ಎಂದು ಘೋಷಣೆ ಮಾಡುವ ಮೂಲಕ ಲಾಭ ಪಡೆಯುವ ಲೆಕ್ಕಾಚಾರದಲ್ಲಿದೆ ಎನ್ನಬಹುದು.

ಕೃಷ್ಣಮಣಿ

Previous Post

ಕಾಣಿಕೆಯ ರೂಪದ ಕಪ್ಪುಹಣ ಮತ್ತು ಭ್ರಷ್ಟಾಚಾರ

Next Post

ಹುರುನ್‌ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟ: ನಂ.2 ಸ್ಥಾನಕ್ಕೆ ಕುಸಿದ ಅದಾನಿ ಗ್ರೂಪ್‌ನ ಗೌತಮ್‌ ಅದಾನಿ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಹುರುನ್‌ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟ: ನಂ.2 ಸ್ಥಾನಕ್ಕೆ ಕುಸಿದ ಅದಾನಿ ಗ್ರೂಪ್‌ನ ಗೌತಮ್‌ ಅದಾನಿ

ಹುರುನ್‌ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟ: ನಂ.2 ಸ್ಥಾನಕ್ಕೆ ಕುಸಿದ ಅದಾನಿ ಗ್ರೂಪ್‌ನ ಗೌತಮ್‌ ಅದಾನಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada