ಸೆ.2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬರುವ ಕಾರ್ಯಕ್ರಮದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ವಿಷಯ ರವಾನಿಸಿದ ಕುರಿತು ಎರಡು ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಒಂದು ಪ್ರಕರಣದಲ್ಲಿ ಒಂದು ಫೋಟೋ ಮೇಲೆ ಗುರುತು ಮಾಡಿ ಆಕ್ಷೇಪಾರ್ಹ ಸಂದೇಶ ರವಾನೆ ಮಾಡಲಾಗುತ್ತಿತ್ತು. ಇನ್ನೊಂದು ಪ್ರಕರಣದಲ್ಲಿ ಪ್ರಧಾನಿ ಕಾರ್ಯಕ್ರಮದ ಬಗ್ಗೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಿದರೆ ಅಂಥವರ ಮೇಲೆ ಪ್ರಕರಣ ದಾಖಲಿಸಿ, ಅಗತ್ಯವಿದ್ದರೆ ಬಂಧಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಎರಡು ಪ್ರಕಾರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.






