ಬಾಲಸೋರ್: ಜೂ.3: ದೇಶದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಒಡಿಶಾದ ಬಾಲಸೋರ್ನಲ್ಲಿ ಜೂ.2ರಂದು ನಡೆದ ರೈಲು ಭೀಕರ ಅಪಘಾತವು ಒಂದು. ಈ ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು. 900ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ರಕ್ತದ ಅಗತ್ಯವಿದ್ದು, ಒಡಿಶಾ ಆಸ್ಪತ್ರೆಗಳಲ್ಲಿ ರಕ್ತ ನೀಡಲು ಜನ ಸಾಲು ಸಾಲು ನಿಂತಿದ್ದಾರೆ. ಶ್ರೇಷ್ಠ ದಾನಗಳಲ್ಲಿ ರಕ್ತದಾನವು ಒಂದು ಎಂಬ ಮಾತು ಇದೆ. ಇದೀಗ ಈ ಕಾರ್ಯ ಮಾನವೀಯ ದೃಷ್ಟಿಗೆ ಸಾಕ್ಷಿಯಾಗಿದೆ, ಜಾತಿ, ಧರ್ಮದ ಭೇದವಿಲ್ಲದೆ, ಎಲ್ಲರೂ ಈ ಕಾರ್ಯದಲ್ಲಿ ತೋಡಗಿದ್ದಾರೆ.
ಒಂದು ಕಡೆ ದುರಂತದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದ್ದರೆ. ಇನ್ನೊಂದು ಕಡೆ ಗಾಯಗೊಂಡ ಜನರಿಗೆ ರಕ್ತ ನೀಡಿ ಜೀವ ಉಳಿಸುವ ಕಾರ್ಯ ನಡೆಯುತ್ತಿದೆ. ಮನುಷ್ಯ ಮನುಷ್ಯರ ನಡುವೆ ಇರುವ ಮಾನವೀಯತೆಗೆ ಸಾಕ್ಷಿಯಾಗಿದೆ. ಒಬ್ಬ ವ್ಯಕ್ತಿ ಕಷ್ಟದಲ್ಲಿರುವಾಗ ಆತನಿಗೆ ಸಾಹಯ ಮಾಡುವುದು ಮಾನವಕುಲದ ಧರ್ಮ ಎಂದು ನಮ್ಮ ಹಿರಿಯರು ಹೇಳಿರುವ ಮಾತಿಗೆ ಇದು ಉದಾಹರಣೆಯಾಗಿದೆ.
ಸುಮಾರು 200 ಆಂಬ್ಯುಲೆನ್ಸ್ಗಳು, 108 ಫ್ಲೀಟ್ಗಳಲ್ಲಿ 167 ಮತ್ತು 20ಕ್ಕೂ ಹೆಚ್ಚು ಸರ್ಕಾರಿ ಆಂಬ್ಯುಲೆನ್ಸ್ಗಳು ಸೇರಿದಂತೆ 45 ಸಂಚಾರಿ ಆರೋಗ್ಯ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದರೊಂದಿಗೆ ಎಸ್ಸಿಬಿಯ 25 ವೈದ್ಯರ ತಂಡದೊಂದಿಗೆ 50 ಹೆಚ್ಚುವರಿ ವೈದ್ಯರನ್ನೂ ಇಲ್ಲಿ ನಿಯೋಜಿಸಲಾಗಿದೆ.
ರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕೋಲ್ಕತ್ತಾದಿಂದ ಹೆಚ್ಚಿನ ಸೇನಾ ಸಿಬ್ಬಂದಿ ಬಂದಿದೆ ಎಂದು ಭಾರತೀಯ ಸೇನೆಯ ಕರ್ನಲ್ ಎಸ್ಕೆ ದತ್ತಾ ತಿಳಿಸಿದ್ದಾರೆ. ನಾವು ಕಳೆದ ರಾತ್ರಿಯಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದೇವೆ. ಕೋಲ್ಕತ್ತಾದಿಂದ (ಸೇನೆಯ) ಹೆಚ್ಚಿನ ಸೇನೆಗಳು ಬರುತ್ತಿವೆ ಎಂದು ಕರ್ನಲ್ ಎಸ್ಕೆ ದತ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.