• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕುಂಭಮೇಳ: ಯೋಗೇಶ್ವರ್ ದತ್ ಅವರನ್ನು ಟ್ವಿಟ್ಟರಿನಲ್ಲಿ‌ ಪ್ರಶ್ನಿಸಿದ ಅಭಿನವ್ ಬಿಂದ್ರಾ

by
April 21, 2021
in ದೇಶ
0
ಕುಂಭಮೇಳ: ಯೋಗೇಶ್ವರ್ ದತ್ ಅವರನ್ನು ಟ್ವಿಟ್ಟರಿನಲ್ಲಿ‌ ಪ್ರಶ್ನಿಸಿದ ಅಭಿನವ್ ಬಿಂದ್ರಾ
Share on WhatsAppShare on FacebookShare on Telegram

ಭಾರತವು 260,533 ಹೊಸ ಕೋವಿಡ್ -19 ಪ್ರಕರಣಗಳನ್ನು ಮತ್ತು 1,492 ಸಾವುಗಳನ್ನು ದಾಖಲಿಸಿದ ಹಿನ್ನೆಲೆಯಲ್ಲಿ ದೇಶದ ಏಕೈಕ ವೈಯಕ್ತಿಕ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ, ಹರಿದ್ವಾರ ಕುಂಭಮೇಳವನ್ನು ಮುಂದುವರಿಸುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ‘ವೈರಸ್‌ಗೆ ಧರ್ಮಗಳ ನಡುವೆ ತಾರತಮ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ಗಂಗಾ ನದಿಯಲ್ಲಿ ಸ್ನಾನ‌‌ಮಾಡಲು ಹರಿದ್ವಾರದಲ್ಲಿ ಲಕ್ಷಾಂತರ ಭಕ್ತರು ಸೇರಿರುವುದರಿಂದ ಕುಂಭ ಮೇಳವು ಕರೋನಾ ಹರಡುವಿಕೆಯ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಳ್ಳುತ್ತಿದೆ. ಏಪ್ರಿಲ್ 10 ರಿಂದ 14 ರ ನಡುವಿನ ಅಧಿಕೃತ ಅಂಕಿಅಂಶಗಳು ಸೋಂಕಿತರ ಸಂಖ್ಯೆಯನ್ನು 1,701 ಎಂದು ಸೂಚಿಸುತ್ತಿದೆ. “ಸಾಂಕ್ರಾಮಿಕ ರೋಗವು ಭಾರತದಲ್ಲಿ ಈ ರೀತಿ ಹರಡುತ್ತಿರುವಾಗ ಕುಂಭ ಮೇಳ ನಡೆಸಬೇಕೇ?” ಎಂದು ಕೇಳಿದ್ದಾರೆ. ಒಲಿಪಿಂಕ್ ತಾಮ್ರದ ಪದಕ ವಿಜೇತ ಕುಸ್ತಿಪಟು ಪ್ರಸ್ತುತ ಭಾರತೀಯ ಜನತಾ ಪಕ್ಷದ ಸದಸ್ಯರಾಗಿರುವ ಯೋಗೇಶ್ವರ ದತ್ ಅವರ ಟ್ವೀಟ್‌ಗೆ ಅವರು ಪ್ರತಿಕ್ರಿಯಿಸುತ್ತಾ ಈ‌ ಪ್ರಶ್ನೆ ಕೇಳಿದ್ದಾರೆ.

ಭಾರತದಾದ್ಯಂತ ಕರೋನ ವೈರಸ್ ಸೋಂಕುಗಳು ತೀವ್ರವಾಗಿ ಏರುತ್ತಿದ್ದರೂ ಕುಂಭಮೇಳವನ್ನು ನಡೆಸಲು ಅವಕಾಶ ನೀಡಿದ ಸರ್ಕಾರದ ನಡೆಯನ್ನು ತೀವ್ರವಾಗಿ ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ನಡೆಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು ಯೋಗೀಶ್ವರ್ ದತ್.

ಭಕ್ತರನ್ನು ಅವಮಾನಿಸಲಾಗುತ್ತಿದೆ ಮತ್ತು ಅವರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ದತ್ ಹೇಳಿದ್ದಾರೆ.

“ಭದ್ರತೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಯಾರೂ ಉಗುಳುವುತ್ತಿಲ್ಲ, ಆಡಳಿತದಿಂದ ತಲೆಮರೆಸಿಕೊಂಡ ಯಾರೂ ಓಡಿಹೋಗುವುತ್ತಿಲ್ಲ ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ನಡೆದ ತಬ್ಲೀಗಿ‌ ಜಮಾತ್ ಸಮಾವೇಶ ಮತ್ತು ಕುಂಭ ಮೇಳದ ನಡುವಿನ ಯಾವುದೇ ಹೋಲಿಕೆಯನ್ನು ತಿರಸ್ಕರಿಸುವ ಕಳೆದ ಬಿಜೆಪಿಯ ಪ್ರಯತ್ನದ ಮುಂದುವರೆದ ಭಾಗವಾಗಿ ದತ್ ಅವರ ಟ್ವೀಟನ್ನು ಪರಿಗಣಿಸಲಾಗುತ್ತಿದೆ. ಹಾಗಾಗಿಯೇ ಅವರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.

ಈ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಬಿಂದ್ರಾ “ಅಥ್ಲೀಟ್‌ಗಳು ತಮ್ಮ ಗಮನವನ್ನು ಚೆಂಡಿನ‌ ಮೇಲಿಡಬೇಕು, ಅವರ ಗಮನ ಅಚಲವಾಗಿರುವುದು, ಜೀವಗಳನ್ನು ಉಳಿಸುವುದು, ಕೆಲಸ ಮಾಡಬಲ್ಲ ಪರಿಹಾರಗಳನ್ನು ಕಂಡುಹಿಡಿಯುವುದು ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಹಾನುಭೂತಿ ತೋರಿಸುವುದು ಅತ್ಯಂತ ಪ್ರಮುಖ ಸಂಗತಿಯಾಗಿರುತ್ತದೆ. ಇಂತಹ ಹೇಳಿಕೆಗಳ ಮೂಲಕ ಇಡೀ ಕ್ರೀಡಾ ಸಮುದಾಯವನ್ನು ನೀವು ಅವಮಾನಕ್ಕೀಡು ಮಾಡುತ್ತಿದ್ದೀರಿ “ಎಂದು ಟ್ವೀಟ್ ಮಾಡಿದ್ದಾರೆ.

ಸರ್ಕಾರವು ಜಾಹೀರಾತುಗಳ ಮೂಲಕ ಈ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಯಾತ್ರಾರ್ಥಿಗಳನ್ನು ಆಹ್ವಾನಿಸಿತ್ತು. ಈಗ ಯು ಟರ್ನ್ ಹೊಡೆದಿರುವ ಸರ್ಕಾರವು ಈ‌ ಉತ್ಸವದಲ್ಲಿ ಹಾಜರಾತಿ ‘ಸಾಂಕೇತಿಕ’ ಆಗಿರಬೇಕು ಎಂದು ಹೇಳುತ್ತಿದೆ. ಸರ್ಕಾರದ ಮನವಿಯನ್ನು ಅನುಸರಿಸಿ, ಹರಿದ್ವಾರದ ಜುನಾ ಅಖಾರಾದ ಸ್ವಾಮಿ ಅವ್ಧೇಶಾನಂದ್ ಅವರು COVID-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಕ್ತರು ಎಲ್ಲಾ ಪ್ರೋಟೋಕಾಲ್‌ಗಳಿಗೆ ಬದ್ಧರಾಗಿರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಮಧ್ಯಪ್ರದೇಶದ ಮಹಾ ನಿರ್ವಾಣಿ ಅಖಾರ ಮಹಾಮಂಡಲೇಶ್ವರ ಸ್ವಾಮಿ ಕಪಿಲ್ ದೇವ್ ಅವರು ಏಪ್ರಿಲ್ 13 ರಂದು COVID-19 ಗೆ ತುತ್ತಾದ ಹಿನ್ನೆಲೆಯಲ್ಲಿ ಮೋದಿ ಮತ್ತು ಅವಧೇಶಾನಂದ್ ಅವರ ಮನವಿ ಬಂದಿದೆ. ಅಖಿಲ್ ಭಾರತೀಯ ಅಖರಾ ಪರಿಷತ್ ಅಧ್ಯಕ್ಷ, ಮಹಂತ್ ನರೇಂದ್ರ ಗಿರಿ , ಕಳೆದ ವಾರ ಕೋವಿಡ್ ದೃಢಪಟ್ಟಿತ್ತು ಮತ್ತು ಅವರು ಈ ಸಂಬಂಧ ಹೃಷಿಕೇಶದ AIIMSಗೆ ದಾಖಲಾಗಿದ್ದರು.

ಉತ್ತರಾಖಂಡದ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್ ಅವರು ನಂಬಿಕೆ ಮತ್ತು ಗಂಗಾ ಮಾತೆ ಹರಿದ್ವಾರದಲ್ಲಿರುವ ಯಾತ್ರಿಕರನ್ನು ಕರೋನವೈರಸ್‌ನಿಂದ ರಕ್ಷಿಸುತ್ತದೆ ಎಂದು ಹೇಳಿದ್ದರು, ಇದೀಗ ಸ್ವತಃ ಅವರಿಗೇ COVID ದೃಢಪಟ್ಟಿದೆ.

Previous Post

ಕರೋನಾ ಕೈಮೀರುತ್ತಿದೆ: ಸರ್ಕಾರದ ಕೈಜಾರುತ್ತಿದೆ ವೈದ್ಯಕೀಯ ವ್ಯವಸ್ಥೆ..!

Next Post

ಪ. ಬಂ: ಕರೋನಾ ಹಿನ್ನೆಲೆಯಲ್ಲಿ ತನ್ನೆಲ್ಲಾ ಚುನಾವಣಾ ರ‍್ಯಾಲಿಯನ್ನು ರದ್ದುಗೊಳಿಸಿದ ರಾಹುಲ್ ಗಾಂಧಿ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಪ. ಬಂ: ಕರೋನಾ ಹಿನ್ನೆಲೆಯಲ್ಲಿ ತನ್ನೆಲ್ಲಾ ಚುನಾವಣಾ ರ‍್ಯಾಲಿಯನ್ನು ರದ್ದುಗೊಳಿಸಿದ ರಾಹುಲ್ ಗಾಂಧಿ

ಪ. ಬಂ: ಕರೋನಾ ಹಿನ್ನೆಲೆಯಲ್ಲಿ ತನ್ನೆಲ್ಲಾ ಚುನಾವಣಾ ರ‍್ಯಾಲಿಯನ್ನು ರದ್ದುಗೊಳಿಸಿದ ರಾಹುಲ್ ಗಾಂಧಿ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada