
Schizophrenia ಮಾನಸಿಕ ಖಾಯಿಲೆಯಿಂದ 12 ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರುಈ ಸಮಸ್ಯೆಯಿಂದ ಬಳಲುತ್ತಿರೋ ಸದಾ ಭ್ರಮೆಯ ಸ್ಥಿತಿಯಲ್ಲಿ ಇರ್ತಾರೆಯಾವುದೋ ವಿಚಾರ ಕಲ್ಪಿಸಿಕೊಂಡು ಆತಂಕ ಪಡುತ್ತಾ ಇರ್ತಾರೆ. ಇದೆ ಖಾಯಿಲೆಯಿಂದ ಪತಿಯ ಮೇಲೆ ಇಲ್ಲದ ಸಲ್ಲದ ಊಹೆ ಮಾಡಿಕೊಂಡ ಶಂಕೆ ಗನ್ ಹಿಡಿದುಕೊಂಡು ಭಯ ಪಡಿಸ್ತಾ ಇದ್ದಾರೆ ಅಂತ ಸಂಬಂಧಿಕರಿಗೆ ಹಲವು ಬಾರಿ ಹೇಳ್ತಿದ್ದ ಪತ್ನಿ ಈ ಬಗ್ಗೆ ಫ್ಯಾಮಿಲಿ ಗ್ರೂಪ್ ನಲ್ಲಿ ಮೆಸೇಜ್ ಕೂಡ ಮಾಡಿದ್ದ ಪತ್ನಿ ಐಪಿಎಸ್ ಅಧಿಕಾರಿಗಳ ಗ್ರೂಪ್ ನಲ್ಲಿ ಮೆಸೇಜ್ ಮಾಡ್ತಿದ್ದರು ಸ್ಕಿಜೋಫ್ರೇನಿಯಗೆ ಚಿಕಿತ್ಸೆ ಪಡೆಯುತ್ತಿದ್ದ ಓಪ್ರಕಾಶ್ ಪತ್ನಿ

ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆಯಾಗಿದ್ದಾರೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಓಂ ಪ್ರಕಾಶ ಅವರನ್ನು ಅವರ ಪತ್ನಿ ಪಲ್ಲವಿಯವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಾಕುವಿನಿಂದ 8-10 ಬಾರಿ ಇರಿದು ಕೊಲೆ
ಪ್ರಾಥಮಿಕ ತನಿಖೆ ವೇಳೆ, ಪತಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರು 8 ರಿಂದ10 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಚಾಕು ಇರಿತದಿಂದ ಓಂ ಪ್ರಕಾಶ್ ಅವರ ಎದೆ, ಹೊಟ್ಟೆ ಹಾಗೂ ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಇನ್ನು, ಹೊಟ್ಟೆ ಭಾಗಕ್ಕೆ ಸುಮಾರು 4-5 ಬಾರಿ ಚಾಕುವಿನಿಂದ ಇರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಮನೆಯ ಪಡಸಾಲೆ ತುಂಬ ರಕ್ತ ಹರಿದಿದೆ. ಓಂ ಪ್ರಕಾಶ್ ಅವರು ಸುಮಾರು 15-20 ನಿಮಿಷಗಳ ಕಾಲ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಪತಿಯ ನರಳಾಟವನ್ನು ಪತ್ನಿ ಪಲ್ಲವಿ ನೋಡುತ್ತಾ ನಿಂತಿದ್ದರು ಎಂಬ ಮಾಹಿತಿ ದೊರೆತಿದೆ. ನಂತರ, ಪತ್ನಿ ಪಲ್ಲವಿಯವರು ಹೆಚ್ಎಸ್ಆರ್ ಲೇಔಟ್ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
I have Finished monster ಅಂತ ಕರೆ ಮಾಡಿದ್ದ ಪಲ್ಲವಿಇನ್ನು, ಪತಿ ಓಂ ಪ್ರಕಾಶ್ ಮೃತಪಟ್ಟ ಬಳಿಕ, ಪತ್ನಿ ಪಲ್ಲವಿಯವರು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿಯ ಪತ್ನಿಗೆ ವಿಡಿಯೋ ಕರೆ ಮಾಡಿ, ‘I have Finished monster’ ಅಂತ ಎಂದಿದ್ದರಂತೆ.
ಆಸ್ತಿ ವಿಚಾರಕ್ಕೆ ನಡಿತಾ ಕೊಲೆ? ಇನ್ನು, ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲು ಕಾರಣಗಳೇನು? ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ? ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಆಸ್ತಿ ವಿಚಾರಕ್ಕೆ ಕೊಲೆಯಾಗಿದೆ ಎಂಬ ಅನುಮಾನವೂ ವ್ಯಕ್ತವಾಗಿದೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ದಾಂಡೇಲಿಯಲ್ಲಿ ಆಸ್ತಿ ಹೊಂದಿದ್ದರು ಎನ್ನಲಾಗಿದೆ. ಈ ಆಸ್ತಿಯನ್ನು ಓಂ ಪ್ರಕಾಶ್ ಅವರು ತಮ್ಮ ತಂಗಿಯ ಹೆಸರಿಗೆ ಮಾಡಿದ್ದರು ಎಂದು ತಿಳಿದುಬಂದಿದೆ. ತಂಗಿ ಹೆಸರಿನಲ್ಲಿ ಆಸ್ತಿ ಮಾಡಿದ್ದಕ್ಕೆ ಹಲವು ದಿನಗಳಿಂದ ಓಂ ಪ್ರಕಾಶ್ ಮತ್ತು ಅವರ ಪತ್ನಿ ಪಲ್ಲವಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇನ್ನು, ತಂಗಿ ವಿಚಾರವಾಗಿ ಮಾತನಾಡಬೇಡ ಅಂತ ಪತ್ನಿ ಪಲ್ಲವಿ ಅವರಿಗೆ ಓಂಪ್ರಕಾಶ್ ವಾರ್ನ್ ಮಾಡಿದ್ದರಂತೆ. ಈ ವಿಚಾರಕ್ಕೆ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ.