• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 7, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ
Share on WhatsAppShare on FacebookShare on Telegram

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ

ADVERTISEMENT

ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ *

ಬೆಂಗಳೂರು ಏ 7: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

ವಾಹನ ಚಾಲಕರಿಗೂ ಕಾಯಂ

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ನಗದು ರಹಿತ ಆರೋಗ್ಯ ಕಾರ್ಡ್

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು:ಸಿಎಂ

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.

Jammu: ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಚರ್ಚೆಗೆ ಅವಕಾಶ ನೀಡದ ಸ್ಪೀಕರ್ ವಿರುದ್ಧ ಶಾಸಕರು ಗದ್ದಲ..! #kashmir

ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದರು.

ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

Tags: civil servantcivil servantsCIVIL SERVICEcivil service commissioncivil service interview questions & answerscivil service interview scoring sheetcivil service reformcivil service reform actcivil service reformscivil service success profilescivil servicescivil services examcivil services exam 2022how do i ace a civil service interview?how do i prepare for a civil service interviewuk civil service
Previous Post

ಹಿಂದೂ ರಾಮಯ್ಯ ಅವರ ನಿವಾಸಕ್ಕೆ ಭೇಟಿ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

Next Post

ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಬಿಗ್‌ ಶಾಕ್‌- ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ..!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post
ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಬಿಗ್‌ ಶಾಕ್‌- ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ..!

ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಬಿಗ್‌ ಶಾಕ್‌- ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada