ಬೆಂಗಳೂರು, ಮೇ 22: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-22-at-12.12.15-PM-1024x576.jpeg)
“ನಮ್ಮ ಪಕ್ಷದ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿದ್ದ ಸರಡಗಿ ಅವರು ಲೋಕಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-22-at-12.12.15-PM-1-1024x576.jpeg)
ಪಾಲಿಕೆ ಸದಸ್ಯ ಸ್ಥಾನದಿಂದ ಲೋಕಸಭಾ ಸದಸ್ಯ ಸ್ಥಾನದವರೆಗೂ ಸುದೀರ್ಘ ರಾಜಕೀಯ ಪಯಣ ಮಾಡಿದ್ದಾರೆ. ಅವರ ಅಗಲಿಕೆ ಪಕ್ಷಕ್ಕೆ ನಷ್ಟ ಎಂದೇ ಭಾವಿಸುತ್ತೇನೆ. ಶಿಕ್ಷಣತಜ್ಞರು, ಪರೋಪಕಾರಿಯಾಗಿ ಗುರುತಿಸಿಕೊಂಡಿರುವ ಸರಡಗಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.
![](https://pratidhvani.com/wp-content/uploads/2024/05/WhatsApp-Image-2024-05-22-at-12.12.14-PM-1024x576.jpeg)
ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.