• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಮೋದಿ ಭೇಟಿಗೆ ಆಯ್ಕೆ ಮಾಡಿಕೊಂಡಿದ್ದು ಯಾವ ಆಧಾರದ ಮೇಲೆ..? ಸೀಕ್ರೆಟ್​ ರಿವಿಲ್​..

ಕೃಷ್ಣ ಮಣಿ by ಕೃಷ್ಣ ಮಣಿ
February 14, 2023
in ಅಂಕಣ
0
ಮೋದಿ ಭೇಟಿಗೆ ಆಯ್ಕೆ ಮಾಡಿಕೊಂಡಿದ್ದು ಯಾವ ಆಧಾರದ ಮೇಲೆ..? ಸೀಕ್ರೆಟ್​ ರಿವಿಲ್​..
Share on WhatsAppShare on FacebookShare on Telegram

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿದ್ದರು. ಸೋಮವಾರ ಏರೋ ಇಂಡಿಯಾ 2023ರ ಉದ್ಘಾಟನೆಗಾಗಿ ಭಾನುವಾರ ಸಂಜೆಯೇ ಬೆಂಗಳೂರಿಗೆ ಬಂದಿದ್ದ ಪ್ರಧಾನಿ, ಕೆಲವು ಗಣ್ಯ ವ್ಯಕ್ತಿಗಳನ್ನು ಔತಣಕೂಟಕ್ಕೆ ಆಹ್ವಾನ ಮಾಡಿದ್ದರು. ಅದರಲ್ಲಿ ನಟ ಯಶ್​​, ನಟ ಹಾಗು ನಿರ್ದೇಶಕ ರಿಷಬ್​ ಶೆಟ್ಟಿ, ನಿರ್ಮಾಪಕ ವಿಜಯ್​ ಕಿರಗಂದೂರು, ಅಶ್ವಿನಿ ಪುನೀತ್​​ ರಾಜ್​ಕುಮಾರ್ ಹಾಗು ಸೋಶಿಯಲ್​ ಮೀಡಿಯಾ ಸ್ಟಾರ್​​ ರೇಡಿಯೋ ಜಾಕಿ ಅಯ್ಯೋ  ಶ್ರದ್ಧಾ, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಅನಿಲ್​ ಕುಂಬ್ಳೆ ದಂಪತಿ, ವೆಂಕಟೇಶ್​ ಪ್ರಸಾದ್​ ದಂಪತಿ, ಜಾವಗಲ್​ ಶ್ರೀನಾಥ್​, ಮಯಾಂಕ್​ ಅಗರ್​ವಾಲ್​​ ಹಾಗು ಮನೀಷ್​ ಪಾಂಡೆ ಕೂಡ ಔತಣ ಕೂಟದಲ್ಲಿ ಭಾಗಿಯಾಗಿ ಮಾತುಕತೆ ನಡೆಸಿದ್ರು.ಇಷ್ಟು ಜನರನ್ನು ಮಾತ್ರ ಔತಣ ಕೂಟಕ್ಕೆ ಆಹ್ವಾನ ಮಾಡಿದ್ದು ಯಾಕೆ..? ಅದು ಯಾವ ಆಧಾರದಲ್ಲಿ ಆಯ್ಕೆ ನಡೀತು ಅನ್ನೋದು ಸಾರ್ವಜನಿಕರ ಪ್ರಶ್ನೆಯಾಗಿದೆ.

ADVERTISEMENT

ಕಾಂತಾರ ಪ್ರಸಿದ್ಧಿಯೇ ಆಯ್ಕೆಗೆ ಮಾನದಂಡ ಆಯ್ತಾ..!?

ಕನ್ನಡದ ಕಾಂತಾರ ಸಿನಿಮಾ ಕನ್ನಡದಲ್ಲೇ ಚಿತ್ರೀಕರಣ ಆಗಿದ್ದರೂ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲೂ ಡಬ್ಬಿಂಗ್​ ಆಗಿ ಬಿಡುಗಡೆ ಆಗಿತ್ತು. ಕೆಲವೇ ಕೋಟಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್​​ ಬರೋಬ್ಬರಿ 400 ಕೋಟಿ ರೂಪಾಯಿ ಕಲೆಕ್ಟ್​ ಮಾಡಿಕೊಂಡಿತ್ತು. ಅದರ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಹಾಗು ನಿರ್ಮಾಪಕ ವಿಜಯ್​ ಕಿರಗಂದೂರು ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಬಹುದು. ಆದರೆ ನಟ ನಿರ್ದೇಶದ ರಿಷಬ್​ ಶೆಟ್ಟಿ ಇತ್ತೀಚಿಗೆ ಸಂದರ್ಶನ ಒಂದರಲ್ಲಿ ಪ್ರಧಾನಿ ಮೋದಿ ಬಗ್ಗೆ ಒಳ್ಳೆಯ ಮಾತನಾಡಿ, ರಾಹುಲ್​ ಗಾಂಧಿ ಬಗ್ಗೆ ಪ್ರಶ್ನಿಸಿದಾಗ ನೋ ಕಾಮೆಂಟ್ಸ್​ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು. ಇನ್ನು ನಿರ್ಮಾಪಕ ವಿಜಯ್​ ಕಿರಗಂದೂರು ಸಚಿವ ಅಶ್ವತ್ಥನಾರಾಯಣ ಭಾವ ಆಗಿರುವುದಕ್ಕೆ ಆಯ್ಕೆ ಮಾಡಲಾಯ್ತಾ..? ಇನ್ನು ನಟ ಯಶ್​ ಕೂಡ  ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ.

ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚೆಮಾಡಿದ್ದು ತಪ್ಪೇನು..?

ರಾಜಭವನದಲ್ಲಿ ದಿಗ್ಗಜರ ಜೊತೆ ಡಿನ್ನರ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ​ ಸಂವಾದ ನಡೆಸಿದ್ದು ತಪ್ಪೇನು ಅಲ್ಲ ಎನ್ನಬಹುದು. ಆದರೆ ಚಿತ್ರರಂಗದಲ್ಲಿ ಈಗ ಹಿರಿಯರಾದ ಶಿವಣ್ಣ, ಉತ್ತಮ ಜ್ಞಾನ ಹೊಂದಿರುವ ರಮೇಶ್​ ಅರವಿಂದ್, ಕಿಚ್ಚ ಸುದೀಪ್​ರನ್ನು ಪರಿಗಣನೆಗೆ ತೆಗೆದುಕೊಳ್ಳದೆ ಇದ್ದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಪ್ರಚಾರದ ತಂತ್ರಕ್ಕಾಗಿ ಸಿನಿಮಾ ನಟರನ್ನು ಬಳಕೆ ಮಾಡಿಕೊಂಡ್ರಾ..? ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ. ನಟ ಪುನೀತ್​ ರಾಜ್ ​ಕುಮಾರ್​ ಅವರ ಅಭಿಮಾನಿಗಳನ್ನು ಸೆಳೆಯುವ ಉದ್ದೇಶದಿಂದ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ಭಾರತೀಯ ಜನತಾ ಪಾರ್ಟಿ ಬಳಸಿಕೊಳ್ತಿದ್ಯಾ ಎನ್ನುವ ಅನುಮಾನ ಅಪ್ಪು ಅಭಿಮಾನಿಗಳನ್ನು ಕಾಡುತ್ತಿದೆ. ಪುನೀತ್​ ರಾಜ್​ಕುಮಾರ್​​​ ಅಗಲಿಕೆಗೆ ಪ್ರಧಾನಿ ಮೋದಿ ಭಾವುಕರಾಗಿದ್ದಾರೆ. ಪುನೀತ್ ಅವರ ಅಗಲಿಕೆ ದೇಶಕ್ಕೆ ಆದ ನಷ್ಟ. ಅಭಿಮಾನಿಗಳ ಜೊತೆ ನನಗೂ ನೋವಾಗಿದೆ. ಅಪ್ಪು ನಟನೆಯ ಸಾಕ್ಷ್ಯಚಿತ್ರ ಗಂಧದಗುಡಿ ಅದ್ಭುತ ಚಿತ್ರ. ಪುನೀತ್​​ ಸ್ಥಾಪಿಸಿದ ಪಿಆರ್​​ಕೆ ಪ್ರೊಡಕ್ಷನ್​​​ನಲ್ಲಿ ಹೊಸಬರಿಗೆ ಅವಕಾಶ ಕೊಡ್ತಿರುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಮೋದಿ ಡಿನ್ನರ್..!

ಪ್ರಧಾನಿ ನರೇಂದ್ರ ಮೋದಿ ಮುಂಬರುವ ಚುನಾವಣೆಗಾಗಿ ತಿಂಗಳಿಗೆ ಮೂರ್ನಾಲ್ಕು ಬಾರಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಜನರನ್ನು ಸೆಳೆಯುವ ಉದ್ದೇಶದಿಂದ ಒಂದೊಂದೇ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಇದು ಕೇವಲ ಆರಂಭ ಮಾತ್ರ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಆರ್​.ಜೆ.ಶ್ರದ್ಧಾ ಸೋಶಿಯಲ್​ ಮೀಡಿಯಾದಲ್ಲಿ ಪ್ರಸ್ತುತ ಸಮಸ್ಯೆಗಳ ಬಗ್ಗೆ ಏಕಪಾತ್ರಾಭಿನಯದ ಮೂಲಕವೇ ಸಾಮಾಜಿಕ ಕ್ರಾಂತಿ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಮನ್ನಣೆ ಪಡೆದಿರುವ ಕಾರಣಕ್ಕೆ ಶ್ರದ್ಧಾ ಅವರನ್ನು ಆಯ್ಕೆ ಮಾಡಲಾಗಿತ್ತು. ಪ್ರಧಾನಿ ಕೂಡ ಅಯ್ಯೋ ಶ್ರದ್ಧಾ ಅಂತಾನೇ ಗುರುತಿಸಿದ್ದು ವಿಶೇಷ. ಇನ್ನು ಕರ್ನಾಟಕದಿಂದ ಖ್ಯಾತಿ ಪಡೆದ ಕ್ರಿಕೆಟಿಗರನ್ನು ಔಟಣ ಕೂಟಕ್ಕೆ ಕರೆದಿದ್ದು ಕೇವಲ ಪ್ರಚಾರದ ತಂತ್ರವೇ ಆಗಿದೆ ಎನ್ನುವುದು ಸತ್ಯ.

Tags: ASHWINI PUNEETH RAJKUMARRishab ShettyYashನರೇಂದ್ರ ಮೋದಿಬಿಜೆಪಿ
Previous Post

ಮಹಿಳೆಯರಿಗೆ, ರೈತರಿಗೆ ಬಂಪರ್ ಆಫರ್ ಘೋಷಿಸಿದ ಸಿದ್ದರಾಮಯ್ಯ

Next Post

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಕೇಸ್: ಇಬ್ಬರಿಗೆ ಗಂಭೀರ ಗಾಯ

Related Posts

Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
0

ವಿಶೇಷ ಆಂಬ್ಯುಲೆನ್ಸ್'ಗಳು ರಸ್ತೆ ಅಪಘಾತದ ಸ್ಥಳಗಳನ್ನು ನಿಮಿಷಗಳಲ್ಲಿ ತಲುಪುವಂತೆ ನೋಡಿಕೊಳ್ಳುವ ಮಹತ್ವಾಕಾಂಕ್ಷೆಯ ಯೋಜನೆಯನ್ನ ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...

Read moreDetails

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
Next Post
ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಕೇಸ್: ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಕೇಸ್: ಇಬ್ಬರಿಗೆ ಗಂಭೀರ ಗಾಯ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada